Homeಮುಖಪುಟಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

ಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

- Advertisement -
- Advertisement -

ಪ್ರಧಾನಿ ಮೋದಿಯವರನ್ನು ಮೆಚ್ಚಿಸಿ, ತಮ್ಮ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂದಿ ಪತ್ರಿಕೆ ಜಾಹೀರಾತುಗಳಿಗೆ ಕೋಟ್ಯಾಂತರ ರೂಪಾಯಿ ಸುರಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕೊರೊನಾ ಉಚಿತ ಲಸಿಕೆ ಅಭಿಯಾನದ ದಿನ ಜೂನ್ 21 ರಂದು ಕರ್ನಾಟಕದ ಕನ್ನಡ ಸೇರಿದಂತೆ ಹಲವು ಪತ್ರಿಕೆಗಳು ಸೇರಿದಂತೆ ದೆಹಲಿಯ ಹಿಂದಿ ಪತ್ರಿಕೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಹೀರಾತು ನೀಡಿದ್ದಾರೆ. ಕೊರೊನಾ ನಿರ್ವಹಣೆಯ ವಿಫಲತೆಯನ್ನು ಮುಚ್ಚಿಕೊಳ್ಳಲು ಈಗಾಗಲೇ ಕೋಟ್ಯಾಂತರ ರೂಪಾಯಿಯನ್ನು ಜಾಹೀರಾತುಗಳಿಗೆ ಸುರಿಯುತ್ತಿರುವ ಅವರು ಈಗ ಖುರ್ಚಿ ಉಳಿಸಿಕೊಳ್ಳಲು ಮತ್ತಷ್ಟು ಹಣ ಪೋಲು ಮಾಡುತ್ತಿದ್ದಾರೆ ಎಂದು ಆಪ್ ಆರೋಪಿಸಿದೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ದೈನಿಕ್ ಭಾಸ್ಕರ್‌, NBT ನವ ಭಾರತ ಟೈಮ್ಸ್‌, ದೈನಿಕ ಜಾಗರಣ, ಅಮರ್ ಉಜಾಲಾ ಪತ್ರಿಕೆಗಳಲ್ಲಿ ಹಿಂದೆ ಭಾಷೆಯಲ್ಲಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿ ಯಡಿಯೂರಪ್ಪನವರು ಪೂರ್ಣ ಪುಟದ ಜಾಹೀರಾತು ನೀಡಿದ್ದಾರೆ.

ಉಚಿತ ಲಸಿಕೆ ನೀಡಿರುವ ಒಕ್ಕೂಟ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದು, ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿ, ಹಿಂದೆ ಪತ್ರಿಕೆಗಳಲ್ಲಿ, ಹಿಂದಿ ಭಾಷೆಯಲ್ಲಿ ಜಾಹೀರಾತು ನೀಡಿದ್ದಾರೆ. ಇದು ಮೋದಿಯವರನ್ನು ಒಲೈಸಿಕೊಳ್ಳಲು ಬಿ.ಎಸ್.ಯಡಿಯೂರಪ್ಪ ಹೀಗೆ ಜಾಹೀರಾತುಗಳಿಗೆ ಹಣ ಸುರಿಯುತ್ತಿದ್ದಾರೆ ಎಂದು ಟೀಕೆಗಳು ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ‘ನಮ್ಮ ಮಕ್ಕಳ ಶಾಲಾ ಶುಲ್ಕವನ್ನು ಸಬ್ಸಿಡಿ ಮಾಡಲು ಹಣವಿಲ್ಲ. ಆದರೆ ದೆಹಲಿ ಆವೃತ್ತಿಯ ಹಿಂದಿ ಪತ್ರಿಕೆಗಳಲ್ಲಿ ಮೊದಲ ಪುಟದಲ್ಲಿ ಪೂರ್ಣ ಪ್ರಮಾಣದಲ್ಲಿ ಜಾಹೀರಾತುಗಳಿಗಾಗಿ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂತೋಷ ಪಡಿಸಿ, ಬಿ.ಎಸ್. ಯಡಿಯೂರಪ್ಪ ಅವರ ಕುರ್ಚಿ ಉಳಿಸಲು ಮಾತ್ರವೇ” ಎಂದು ಟೀಕಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಪ್ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, “ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬರವಣಿಗೆಯಲ್ಲಿ ಉತ್ತರ ನೀಡಿದೆ.. ಸಾವಿರಾರು ಕೋಟಿ ಖರ್ಚು ಮಾಡಿ ಪ್ರಚಾರ ಮಾಡಕೊಳ್ಳಲು ಇವರ ಬಳಿ ದುಡ್ಡಿದೆ. ಆದರೆ, ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿ, ಬೀದಿಪಾಲಾಗಿರುವ ಕುಟುಂಬಗಳಿಗೆ ಸಹಾಯ ಮಾಡಲು ದುಡ್ಡಿಲ್ಲ. ಕನ್ನಡಿಗರಿಗೆ ಯಾವುದೋ ಒಂದು ಯೋಜನೆ ಬಗ್ಗೆ ತಿಳಿಸಲು, ಲಸಿಕಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ಈ ಜಾಹೀರಾತು ನೀಡುತ್ತಿಲ್ಲ. ಹಿಂದಿ ಭಾಷೆಯಲ್ಲಿ ಇಂತಹ ಜಾಹೀರಾತು ನೀಡುತ್ತಿರುವುದು ಬೇರೆಯದೆ ಕಾರಣಕ್ಕೆ. ಇರುವ ದುಡ್ಡನ್ನು ಹಾಳು ಮಾಡುವ ಬದಲು ಕೊರೊನಾ ಪೀಡಿತರಿಗೆ ಆರ್ಥಿಕ ಸಹಾಯ ಮಾಡಲಿ. ನಮ್ಮ 25 ಮಂದಿ ಸಂಸದರಂತೆ ಯಡಿಯೂರಪ್ಪ ಕೂಡ ರಾಜ್ಯದ ಜನರಿಗೆ ಉಪಯೋಗವಾಗುವ ಕೆಲಸ ಮಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಕೂಡ ಕೊರೊನಾ ನಿರ್ವಹಣೆಯ ವಿಫಲತೆಯನ್ನು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಪೂರ್ಣಪುಣದ ಜಾಹೀರಾತುಗಳು ಮತ್ತು ಪ್ರಾಯೋಜಿತ ಲೇಖನಗಳನ್ನು ಬರೆಸಿತ್ತು.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿ, ತಾಯ್ನುಡಿ ಮತ್ತು ತಾಯ್ನಾಡು; ಈ ಮೂರೂ ಸಹ ಅತ್ಯಮೂಲ್ಯವಾದವು. ಆದರೆ ಮನುವಾದಿ ರಾಜಕಾರಣಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎನ್ನುವುದಕ್ಕೆ ಈ ಹಿಂದಿ ಜಾಹೀರಾತು ಸಾಕ್ಶಿ. ಕನ್ನಡಿಗರ ಹಣದಿಂದ ಈ ರೀತಿ ಹಿಂದಿಯಲ್ಲಿ ಜಾಹೀರಾತು ನೀಡಿರುವ ಯಡಿಯೂರಪ್ಪನವರ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....