Homeಮುಖಪುಟಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

ಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

- Advertisement -
- Advertisement -

ಪ್ರಧಾನಿ ಮೋದಿಯವರನ್ನು ಮೆಚ್ಚಿಸಿ, ತಮ್ಮ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂದಿ ಪತ್ರಿಕೆ ಜಾಹೀರಾತುಗಳಿಗೆ ಕೋಟ್ಯಾಂತರ ರೂಪಾಯಿ ಸುರಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕೊರೊನಾ ಉಚಿತ ಲಸಿಕೆ ಅಭಿಯಾನದ ದಿನ ಜೂನ್ 21 ರಂದು ಕರ್ನಾಟಕದ ಕನ್ನಡ ಸೇರಿದಂತೆ ಹಲವು ಪತ್ರಿಕೆಗಳು ಸೇರಿದಂತೆ ದೆಹಲಿಯ ಹಿಂದಿ ಪತ್ರಿಕೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಹೀರಾತು ನೀಡಿದ್ದಾರೆ. ಕೊರೊನಾ ನಿರ್ವಹಣೆಯ ವಿಫಲತೆಯನ್ನು ಮುಚ್ಚಿಕೊಳ್ಳಲು ಈಗಾಗಲೇ ಕೋಟ್ಯಾಂತರ ರೂಪಾಯಿಯನ್ನು ಜಾಹೀರಾತುಗಳಿಗೆ ಸುರಿಯುತ್ತಿರುವ ಅವರು ಈಗ ಖುರ್ಚಿ ಉಳಿಸಿಕೊಳ್ಳಲು ಮತ್ತಷ್ಟು ಹಣ ಪೋಲು ಮಾಡುತ್ತಿದ್ದಾರೆ ಎಂದು ಆಪ್ ಆರೋಪಿಸಿದೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ದೈನಿಕ್ ಭಾಸ್ಕರ್‌, NBT ನವ ಭಾರತ ಟೈಮ್ಸ್‌, ದೈನಿಕ ಜಾಗರಣ, ಅಮರ್ ಉಜಾಲಾ ಪತ್ರಿಕೆಗಳಲ್ಲಿ ಹಿಂದೆ ಭಾಷೆಯಲ್ಲಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿ ಯಡಿಯೂರಪ್ಪನವರು ಪೂರ್ಣ ಪುಟದ ಜಾಹೀರಾತು ನೀಡಿದ್ದಾರೆ.

ಉಚಿತ ಲಸಿಕೆ ನೀಡಿರುವ ಒಕ್ಕೂಟ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದು, ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿ, ಹಿಂದೆ ಪತ್ರಿಕೆಗಳಲ್ಲಿ, ಹಿಂದಿ ಭಾಷೆಯಲ್ಲಿ ಜಾಹೀರಾತು ನೀಡಿದ್ದಾರೆ. ಇದು ಮೋದಿಯವರನ್ನು ಒಲೈಸಿಕೊಳ್ಳಲು ಬಿ.ಎಸ್.ಯಡಿಯೂರಪ್ಪ ಹೀಗೆ ಜಾಹೀರಾತುಗಳಿಗೆ ಹಣ ಸುರಿಯುತ್ತಿದ್ದಾರೆ ಎಂದು ಟೀಕೆಗಳು ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ‘ನಮ್ಮ ಮಕ್ಕಳ ಶಾಲಾ ಶುಲ್ಕವನ್ನು ಸಬ್ಸಿಡಿ ಮಾಡಲು ಹಣವಿಲ್ಲ. ಆದರೆ ದೆಹಲಿ ಆವೃತ್ತಿಯ ಹಿಂದಿ ಪತ್ರಿಕೆಗಳಲ್ಲಿ ಮೊದಲ ಪುಟದಲ್ಲಿ ಪೂರ್ಣ ಪ್ರಮಾಣದಲ್ಲಿ ಜಾಹೀರಾತುಗಳಿಗಾಗಿ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂತೋಷ ಪಡಿಸಿ, ಬಿ.ಎಸ್. ಯಡಿಯೂರಪ್ಪ ಅವರ ಕುರ್ಚಿ ಉಳಿಸಲು ಮಾತ್ರವೇ” ಎಂದು ಟೀಕಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಪ್ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, “ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬರವಣಿಗೆಯಲ್ಲಿ ಉತ್ತರ ನೀಡಿದೆ.. ಸಾವಿರಾರು ಕೋಟಿ ಖರ್ಚು ಮಾಡಿ ಪ್ರಚಾರ ಮಾಡಕೊಳ್ಳಲು ಇವರ ಬಳಿ ದುಡ್ಡಿದೆ. ಆದರೆ, ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿ, ಬೀದಿಪಾಲಾಗಿರುವ ಕುಟುಂಬಗಳಿಗೆ ಸಹಾಯ ಮಾಡಲು ದುಡ್ಡಿಲ್ಲ. ಕನ್ನಡಿಗರಿಗೆ ಯಾವುದೋ ಒಂದು ಯೋಜನೆ ಬಗ್ಗೆ ತಿಳಿಸಲು, ಲಸಿಕಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ಈ ಜಾಹೀರಾತು ನೀಡುತ್ತಿಲ್ಲ. ಹಿಂದಿ ಭಾಷೆಯಲ್ಲಿ ಇಂತಹ ಜಾಹೀರಾತು ನೀಡುತ್ತಿರುವುದು ಬೇರೆಯದೆ ಕಾರಣಕ್ಕೆ. ಇರುವ ದುಡ್ಡನ್ನು ಹಾಳು ಮಾಡುವ ಬದಲು ಕೊರೊನಾ ಪೀಡಿತರಿಗೆ ಆರ್ಥಿಕ ಸಹಾಯ ಮಾಡಲಿ. ನಮ್ಮ 25 ಮಂದಿ ಸಂಸದರಂತೆ ಯಡಿಯೂರಪ್ಪ ಕೂಡ ರಾಜ್ಯದ ಜನರಿಗೆ ಉಪಯೋಗವಾಗುವ ಕೆಲಸ ಮಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಕೂಡ ಕೊರೊನಾ ನಿರ್ವಹಣೆಯ ವಿಫಲತೆಯನ್ನು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಪೂರ್ಣಪುಣದ ಜಾಹೀರಾತುಗಳು ಮತ್ತು ಪ್ರಾಯೋಜಿತ ಲೇಖನಗಳನ್ನು ಬರೆಸಿತ್ತು.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿ, ತಾಯ್ನುಡಿ ಮತ್ತು ತಾಯ್ನಾಡು; ಈ ಮೂರೂ ಸಹ ಅತ್ಯಮೂಲ್ಯವಾದವು. ಆದರೆ ಮನುವಾದಿ ರಾಜಕಾರಣಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎನ್ನುವುದಕ್ಕೆ ಈ ಹಿಂದಿ ಜಾಹೀರಾತು ಸಾಕ್ಶಿ. ಕನ್ನಡಿಗರ ಹಣದಿಂದ ಈ ರೀತಿ ಹಿಂದಿಯಲ್ಲಿ ಜಾಹೀರಾತು ನೀಡಿರುವ ಯಡಿಯೂರಪ್ಪನವರ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...