Homeಕರ್ನಾಟಕಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕರ್ನಾಟಕ ರಾಜ್ಯದಿಂದ ರಾಜ್ಯಸಭಾ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಕೆಲವು ಮಾಧ್ಯಮ ವರದಿ ಮಾಡಿದ್ದವು. ಈ ಸುದ್ದಿ ಸುಳ್ಳು ಮತ್ತು ಊಹಾಪೋಹ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಹೇಳಿದ್ದಾರೆ ಮತ್ತು ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದ್ದು ಅವರಿಗೆ ಕರ್ನಾಟಕದಿಂದ ರಾಜ್ಯಸಭಾ ಸ್ಥಾನ ನೀಡಬಹುದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಇದಲ್ಲದೆ  ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕರ್ನಾಟಕ ಇಲ್ಲವೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸುವ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ ಎಂದು  ಕೂಡ ಸುದ್ದಿಯಾಗಿದ್ದವು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌, ಅಂತಹ ಎಲ್ಲಾ ಮಾಹಿತಿಗಳು ಸುಳ್ಳು, ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ. ಮಾದ್ಯಮಗಳು ಇಂತಹ ಊಹಾಪೋಹಗಳನ್ನು ಸೃಷ್ಟಿಸಿದೆ.  ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜದ ವಿವಾದದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಮುಗ್ಧ ಗ್ರಾಮಸ್ಥರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಜಾತಿ, ಧರ್ಮದ ಜನರು ಶಾಂತಿ ಮತ್ತು ಸಹೋದರತೆಯಿಂದ ಬದುಕುತ್ತಿದ್ದಾರೆ, ಈಗ ಅವರು ಹೊಸ ಪ್ರಯೋಗ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ರಾಷ್ಟ್ರಧ್ವಜ ಮತ್ತು ಸಂವಿಧಾನವನ್ನು ರಕ್ಷಿಸಲು ಮತ್ತು ಗೌರವಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಮನೆ ಮನೆಗೂ ಹನುಮಾನ್ ಧ್ವಜ ಹಂಚಲು ಬಿಜೆಪಿ ಮುಂದಾಗಿದೆ,  ‘ಬಿಜೆಪಿ ‘ಹರ್ ಘರ್ ತಿರಂಗ’ ಅಭಿಯಾನ ನಡೆಸಿತ್ತು, ಈಗ ಅದು ಏನಾಯ್ತು? ಈಗ ತಿರಂಗ ಬಿಟ್ಟು ಹೋಗಿದ್ದು ಯಾಕೆ?  ಎಂದು ಡಿಕೆ ಶಿವಕುಮಾರ್‌ ಅವರು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ಬಹುತೇಕ ವಿಲೀನಗೊಳಿಸಿದಂತಿದೆ. ಏನು ಬೇಕಾದರೂ ಮಾಡಿ, ಅದು ಅವರ ಪಕ್ಷದ ವಿಷಯ, ಅವರು ಯಾವುದೇ ಬಣ್ಣದ ಯಾವುದೇ ಶಾಲು ಧರಿಸಬಹುದು. ಮಂಡ್ಯದಲ್ಲಿ ಬಿಜೆಪಿಗೆ ನೆಲೆ ಇಲ್ಲ, ಹೀಗಾಗಿ ಜೆಡಿಎಸ್‌ನ ಬಲವನ್ನು ಅಲ್ಲಿ ಬಳಸಿಕೊಳ್ಳುತ್ತಿದ್ದಾರೆ, ಕೊನೆಗೆ ಯಾರು ಯಾರನ್ನು ನುಂಗುತ್ತಾರೋ ನೋಡೋಣ ಎಂದು ಹೇಳಿದ್ದಾರೆ.

ಇದನ್ನು ಓದಿ: ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...