Homeಕರ್ನಾಟಕಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

ಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

- Advertisement -
- Advertisement -

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಕೊಳೆಯುತ್ತಿದ್ದು, ಅದನ್ನು ವಿಲೇವಾರಿ ಮಾಡಲು ಕೇಂದ್ರ ಸರ್ಕಾರ ಪರದಾಡುತ್ತಿದೆ ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಬಡವರಿಗೆ ಉಚಿತವಾಗಿ ವಿತರಿಸುವ ಅಕ್ಕಿಯ ವಿಶೇಷಣಗಳನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಎಫ್‌ಸಿಐ ಗೋದಾಮುಗಳಲ್ಲಿನ ಅಕ್ಕಿಯ ವಿಲೇವಾರಿಗೆ ಸರ್ಕಾರ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದೆ. ಸಿಫ್ಟರ್‌ಗಳು, ಗ್ರೇಡರ್‌ಗಳು ಮತ್ತು ಇತರ ಯಂತ್ರೋಪಕರಣಗಳ ಕೊರತೆಯಿಂದ ಗರೀಬ್ ಕಲ್ಯಾಣ್ ಯೋಜನೆಯ ಅಕ್ಕಿ ಪರಿಷ್ಕರಿಸುವ ಪ್ರಸ್ತಾವನೆಯು ತುಂಬಾ ದುಬಾರಿ ಮತ್ತು ಶ್ರಮದಾಯಕವೆಂದು ಕಂಡು ಬಂದಿದೆ ಎಂದು ಇಬ್ಬರು ಅಧಿಕಾರಿಗಳು ಉಲ್ಲೇಖಿಸಿ livemint.com ವರದಿ ಮಾಡಿದೆ.

ಪಿಎಂಜಿಕೆವೈ ಅಡಿಯಲ್ಲಿ ಅಕ್ಕಿ ಹಂಚಿಕೆಯನ್ನು ಹೆಚ್ಚಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ನೌಕರರಿಗೆ ಉಚಿತ ಆಹಾರವನ್ನು ನೀಡುವುದು ಮತ್ತು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಇಎಂಎಸ್‌ಎಸ್‌) ಅಡಿಯಲ್ಲಿ ಅಕ್ಕಿ ಬೆಲೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಎಫ್‌ಸಿಐ ಮೇಜಿನ ಮೇಲೆ ಇರುವ ಪ್ರಸ್ತಾವಣೆಗಳಾಗಿವೆ. ಇವುಗಳನ್ನು ಕಾರ್ಯಗತಗೊಳಿಸುವುದು ಅಸಾಧ್ಯ ಎಂಬುವುದು ಸರ್ಕಾರಕ್ಕೆ ಮನದಟ್ಟಾಗಿದೆ.

ಎಫ್‌ಸಿಐ ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಸುಮ್ಮನೆ ಕೊಳೆಯುತ್ತಿದೆ ಎಂಬ ವರದಿ ನೋಡಿದ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.

“ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ. 18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ, ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ” ಎಂದು ಕಾಂಗ್ರೆಸ್‌ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

“ಅಕ್ಕಿ ರಾಜಕೀಯ ಮಾಡಿದ ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆಗಳು” ಎಂದು ಕೆಳಗಿನ ಪ್ರಶ್ನೆಗಳನ್ನು ಕೇಳಿದೆ.

1. 24 ರೂಪಾಯಿಯ ಭಾರತ್ ಅಕ್ಕಿ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿಯಿತೇ?

2. ಖಾಸಗಿ ಕಂಪೆನಿಗಳೂ ಸಹ ಕೇಂದ್ರ ಆಹಾರ ನಿಗಮದ ಅಕ್ಕಿಯನ್ನು ಖರೀದಿಸಲು ಮುಂದಾಗಲಿಲ್ಲವೇ?

3. ಖಾಲಿ ಮಾಡಲಾಗದಷ್ಟು ಅಕ್ಕಿ ಇದ್ದರೂ ಕನ್ನಡಿಗರಿಗೆ ವಂಚಿಸಿದ್ದೇಕೆ?

4. ನಮ್ಮ ಸರ್ಕಾರ ಕೆಜಿಗೆ ₹34 ಕೊಟ್ಟು ಖರೀದಿಸಿದ್ದಿದ್ದರೆ ಆಹಾರ ನಿಗಮಕ್ಕೆ ಲಾಭವಾಗುತ್ತಿತ್ತು, ಆ ಲಾಭವನ್ನು ತಪ್ಪಿಸಿ ನಷ್ಟಕ್ಕೆ ತಳ್ಳಿದ್ದೇಕೆ?

“ಕನ್ನಡಿಗರಿಗೆ ಅಕ್ಕಿ ನೀಡದೆ ದ್ರೋಹ ಮಾಡಿದಿರಲ್ಲ, ಕನ್ನಡಿಗರು ನಿಮಗೆ ಯಾವ ಜನ್ಮದ ಶತ್ರುಗಳು?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ ವಿತರಿಸಲು ಮುಂದಾಗಿತ್ತು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಎಫ್‌ಸಿಐ ಗೋದಾಮಿನಿಂದ ಅಕ್ಕಿ ಪೂರೈಸುವಂತೆ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ಅಕ್ಕಿ ನೀಡಿಲ್ಲ ಎಂಬ ಆರೋಪವಿದೆ. ಕೊನೆಗೆ ಎಲ್ಲೂ ಸಾಕಷ್ಟು ಅಕ್ಕಿ ಸಿಗದಿದ್ದಾಗ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನು ಪಡಿತರ ಚೀಟಿದಾರರ ಖಾತೆಗೆ ಹಾಕಲು ನಿರ್ಧರಿಸಿತ್ತು. ಅದರಂತೆ, ಈಗ ಯೋಜನೆ ಮುಂದುವರೆಯುತ್ತಿದೆ.

ಇದನ್ನೂ ಓದಿ : ನರೇಂದ್ರ ಮೋದಿ ಅಧಿಕಾರಕ್ಕೆ ಮರಳುವುದಿಲ್ಲ ಎಂಬುದೆ ಒಂದು ಗ್ಯಾರಂಟಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...