Homeಮುಖಪುಟಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

’ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ’

- Advertisement -
- Advertisement -

“ನರೇಂದ್ರ ಮೋದಿ ಸರ್ಕಾರ ಬಿಎಸ್ಎನ್ಎಲ್, ರೈಲ್ವೆ, ವಿಮಾನ ನಿಲ್ದಾಣಗಳಂತಹ ದೇಶದ ಸಾರ್ವಜನಿಕ ಸ್ವಾಮ್ಯದ ಆಸ್ತಿಗಳಲ್ಲಿನ ಸರ್ಕಾರದ ಶೇರುಗಳನ್ನು ಹಿಂಪಡೆದು, ಖಾಸಗಿ ಹೂಡಿಕೆಗೆ ಅವಕಾಶ ನೀಡುತ್ತಿದೆ. ಈ ಮೂಲಕ ಮೋದಿಯವರು ದೇಶದ ಸಂಪತ್ತನ್ನು ಅಂಬಾನಿ, ಅದಾನಿಯಂತ ಕಾರ್ಪೊರೇಟ್ ವಲಯದ ಜನರಿಗೆ ಮಾರಾಟ ಮಾಡುತ್ತಿದ್ದಾರೆ”- ಶಂಕರಗೌಡ ಚನ್ನಬಸವನಗೌಡ ಪಾಟೀಲ್, ಬ್ಯಾಡಗಿ.

“ಅಚ್ಚೇ ದಿನ ತರುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ಅಚ್ಚೇ ದಿನ ನಮ್ಮ ಬದುಕಿನಲ್ಲಿ ಬರಲೇ ಇಲ್ಲ”- ಮಲ್ಲೇಶಪ್ಪ, ಕೋಲಾರ

“ಈ ಹಿಂದೆ ಗಾರೆ ಕೆಲಸ ಮಾಡುತ್ತಿದ್ದವಳು ಈಗ ಕಸ-ಮುಸುರೆ ಕೆಲಸಕ್ಕೆ ಹೋಗುತ್ತಿದ್ದೇನೆ. ಬಿಜೆಪಿ ಸರ್ಕಾರ ನಮಗೆ ಸರಿಯಾಗಿ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ. ನನಗೆ ಜೀವನದಲ್ಲಿ ಯಾರೂ ಆಸರೆ ಇಲ್ಲ. ನಮ್ಮಂತ ನಿರ್ಗತಿಕರು ಜೀವನ ಮಾಡುವುದು ತುಂಬಾ ಕಷ್ಟವಾಗಿದೆ”- 75 ವರ್ಷದ ಅಜ್ಜಿ.

ಈ ಎಲ್ಲಾ ಹೇಳಿಕೆಗಳು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಬಿಜೆಪಿಯ ಲೂಟಿಯ ವಿರುದ್ದ ಭಾರತ (#IndiaAgainstBJPLoot) ಎಂಬ ಅಭಿಯಾನದಲ್ಲಿ ಬಂದಿರುವುವು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆ, ಆಸ್ತಿ ಮಾರಾಟ ಮಾಡುವ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತಿದ್ದು, ನಾಡಿನ ಹಲವು ಮಂದಿ ವಿಡಿಯೊ ಮೂಲಕ ಬೆಲೆ ಏರಿಕೆಯಿಂದಾಗಿರುವ ಸಂಕಷ್ಟಗಳ ಕುರಿತು ಮಾತನಾಡಿದ್ದಾರೆ. ಜನರ ಮೂಲಕವೇ ಸಮಸ್ಯೆಗಳನ್ನು ಹೊರಗೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವೆಲ್ಲ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಆದರೆ ಈಗ ಮೋದಿ ಸರ್ಕಾರ ಬಂದ ಮೇಲೆ ನಾವು, ಮಕ್ಕಳೆಲ್ಲ ಅರೆ ಹೊಟ್ಟೆ ಊಟ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಬಡವರ ಬದುಕನ್ನು ಮತ್ತಷ್ಟು ಹೀನಾಯವಾಗಿಸಿದೆ” ಎಂದು ಮಹಿಳೆಯೊಬ್ಬರು ಮಾತನಾಡಿದ್ದಾರೆ.

“ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ. ನಾವು ಗಾರ್ಮೆಂಟ್ಸ್ ಗೆ ಹೋಗಿ ಕೂಲಿ ಮಾಡಿಕೊಂಡು ತಿನ್ನುವ ಜನ. ಇಷ್ಟು ಅಕ್ಕಿಯಲ್ಲಿ ನಾವು ಹೇಗೆ ಜೀವನ ಮಾಡುವುದು?” ಎಂದು ಮತ್ತೊಬ್ಬ ಮಹಿಳೆ ಪ್ರಶ್ನಿಸಿದ್ದಾರೆ.

ಜನರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಮಾತನಾಡಿದ್ದಾರೆ. “ದೇಶದಲ್ಲಿ, ಜನರ ತೆರಿಗೆ ಹಣದಿಂದ ಹಲವು ಸಂಸ್ಥೆಗಳು, ಮೂಲ ಸೌಕರ್ಯ, ವಿಮಾನ ನಿಲ್ದಾಣ, ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ದೇಶಕ್ಕೆ ಇಂತಹ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರ ದೇಶದ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿಯನ್ನು ಪರಭಾರೆ (ಮಾರಾಟ) ಮಾಡುತ್ತಿರುವುದು ದುರಂತ” ಎಂದಿದ್ದಾರೆ.

ಬಿಜೆಪಿ ಸರ್ಕಾರ ದೇಶದ ಎಲ್ಲ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರು ನಮ್ಮನ್ನು ಮಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾವೆಲ್ಲ ಒಂದಾಗಿ ಇದರ ವಿರುದ್ಧ ಹೋರಾಟ ಮಾಡೋಣ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...