Homeಮುಖಪುಟಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

’ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ’

- Advertisement -
- Advertisement -

“ನರೇಂದ್ರ ಮೋದಿ ಸರ್ಕಾರ ಬಿಎಸ್ಎನ್ಎಲ್, ರೈಲ್ವೆ, ವಿಮಾನ ನಿಲ್ದಾಣಗಳಂತಹ ದೇಶದ ಸಾರ್ವಜನಿಕ ಸ್ವಾಮ್ಯದ ಆಸ್ತಿಗಳಲ್ಲಿನ ಸರ್ಕಾರದ ಶೇರುಗಳನ್ನು ಹಿಂಪಡೆದು, ಖಾಸಗಿ ಹೂಡಿಕೆಗೆ ಅವಕಾಶ ನೀಡುತ್ತಿದೆ. ಈ ಮೂಲಕ ಮೋದಿಯವರು ದೇಶದ ಸಂಪತ್ತನ್ನು ಅಂಬಾನಿ, ಅದಾನಿಯಂತ ಕಾರ್ಪೊರೇಟ್ ವಲಯದ ಜನರಿಗೆ ಮಾರಾಟ ಮಾಡುತ್ತಿದ್ದಾರೆ”- ಶಂಕರಗೌಡ ಚನ್ನಬಸವನಗೌಡ ಪಾಟೀಲ್, ಬ್ಯಾಡಗಿ.

“ಅಚ್ಚೇ ದಿನ ತರುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ಅಚ್ಚೇ ದಿನ ನಮ್ಮ ಬದುಕಿನಲ್ಲಿ ಬರಲೇ ಇಲ್ಲ”- ಮಲ್ಲೇಶಪ್ಪ, ಕೋಲಾರ

“ಈ ಹಿಂದೆ ಗಾರೆ ಕೆಲಸ ಮಾಡುತ್ತಿದ್ದವಳು ಈಗ ಕಸ-ಮುಸುರೆ ಕೆಲಸಕ್ಕೆ ಹೋಗುತ್ತಿದ್ದೇನೆ. ಬಿಜೆಪಿ ಸರ್ಕಾರ ನಮಗೆ ಸರಿಯಾಗಿ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ. ನನಗೆ ಜೀವನದಲ್ಲಿ ಯಾರೂ ಆಸರೆ ಇಲ್ಲ. ನಮ್ಮಂತ ನಿರ್ಗತಿಕರು ಜೀವನ ಮಾಡುವುದು ತುಂಬಾ ಕಷ್ಟವಾಗಿದೆ”- 75 ವರ್ಷದ ಅಜ್ಜಿ.

ಈ ಎಲ್ಲಾ ಹೇಳಿಕೆಗಳು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಬಿಜೆಪಿಯ ಲೂಟಿಯ ವಿರುದ್ದ ಭಾರತ (#IndiaAgainstBJPLoot) ಎಂಬ ಅಭಿಯಾನದಲ್ಲಿ ಬಂದಿರುವುವು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆ, ಆಸ್ತಿ ಮಾರಾಟ ಮಾಡುವ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತಿದ್ದು, ನಾಡಿನ ಹಲವು ಮಂದಿ ವಿಡಿಯೊ ಮೂಲಕ ಬೆಲೆ ಏರಿಕೆಯಿಂದಾಗಿರುವ ಸಂಕಷ್ಟಗಳ ಕುರಿತು ಮಾತನಾಡಿದ್ದಾರೆ. ಜನರ ಮೂಲಕವೇ ಸಮಸ್ಯೆಗಳನ್ನು ಹೊರಗೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವೆಲ್ಲ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಆದರೆ ಈಗ ಮೋದಿ ಸರ್ಕಾರ ಬಂದ ಮೇಲೆ ನಾವು, ಮಕ್ಕಳೆಲ್ಲ ಅರೆ ಹೊಟ್ಟೆ ಊಟ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಬಡವರ ಬದುಕನ್ನು ಮತ್ತಷ್ಟು ಹೀನಾಯವಾಗಿಸಿದೆ” ಎಂದು ಮಹಿಳೆಯೊಬ್ಬರು ಮಾತನಾಡಿದ್ದಾರೆ.

“ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ. ನಾವು ಗಾರ್ಮೆಂಟ್ಸ್ ಗೆ ಹೋಗಿ ಕೂಲಿ ಮಾಡಿಕೊಂಡು ತಿನ್ನುವ ಜನ. ಇಷ್ಟು ಅಕ್ಕಿಯಲ್ಲಿ ನಾವು ಹೇಗೆ ಜೀವನ ಮಾಡುವುದು?” ಎಂದು ಮತ್ತೊಬ್ಬ ಮಹಿಳೆ ಪ್ರಶ್ನಿಸಿದ್ದಾರೆ.

ಜನರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಮಾತನಾಡಿದ್ದಾರೆ. “ದೇಶದಲ್ಲಿ, ಜನರ ತೆರಿಗೆ ಹಣದಿಂದ ಹಲವು ಸಂಸ್ಥೆಗಳು, ಮೂಲ ಸೌಕರ್ಯ, ವಿಮಾನ ನಿಲ್ದಾಣ, ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ದೇಶಕ್ಕೆ ಇಂತಹ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರ ದೇಶದ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿಯನ್ನು ಪರಭಾರೆ (ಮಾರಾಟ) ಮಾಡುತ್ತಿರುವುದು ದುರಂತ” ಎಂದಿದ್ದಾರೆ.

ಬಿಜೆಪಿ ಸರ್ಕಾರ ದೇಶದ ಎಲ್ಲ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರು ನಮ್ಮನ್ನು ಮಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾವೆಲ್ಲ ಒಂದಾಗಿ ಇದರ ವಿರುದ್ಧ ಹೋರಾಟ ಮಾಡೋಣ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...