Homeಮುಖಪುಟಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

’ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ’

- Advertisement -
- Advertisement -

“ನರೇಂದ್ರ ಮೋದಿ ಸರ್ಕಾರ ಬಿಎಸ್ಎನ್ಎಲ್, ರೈಲ್ವೆ, ವಿಮಾನ ನಿಲ್ದಾಣಗಳಂತಹ ದೇಶದ ಸಾರ್ವಜನಿಕ ಸ್ವಾಮ್ಯದ ಆಸ್ತಿಗಳಲ್ಲಿನ ಸರ್ಕಾರದ ಶೇರುಗಳನ್ನು ಹಿಂಪಡೆದು, ಖಾಸಗಿ ಹೂಡಿಕೆಗೆ ಅವಕಾಶ ನೀಡುತ್ತಿದೆ. ಈ ಮೂಲಕ ಮೋದಿಯವರು ದೇಶದ ಸಂಪತ್ತನ್ನು ಅಂಬಾನಿ, ಅದಾನಿಯಂತ ಕಾರ್ಪೊರೇಟ್ ವಲಯದ ಜನರಿಗೆ ಮಾರಾಟ ಮಾಡುತ್ತಿದ್ದಾರೆ”- ಶಂಕರಗೌಡ ಚನ್ನಬಸವನಗೌಡ ಪಾಟೀಲ್, ಬ್ಯಾಡಗಿ.

“ಅಚ್ಚೇ ದಿನ ತರುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ಅಚ್ಚೇ ದಿನ ನಮ್ಮ ಬದುಕಿನಲ್ಲಿ ಬರಲೇ ಇಲ್ಲ”- ಮಲ್ಲೇಶಪ್ಪ, ಕೋಲಾರ

“ಈ ಹಿಂದೆ ಗಾರೆ ಕೆಲಸ ಮಾಡುತ್ತಿದ್ದವಳು ಈಗ ಕಸ-ಮುಸುರೆ ಕೆಲಸಕ್ಕೆ ಹೋಗುತ್ತಿದ್ದೇನೆ. ಬಿಜೆಪಿ ಸರ್ಕಾರ ನಮಗೆ ಸರಿಯಾಗಿ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ. ನನಗೆ ಜೀವನದಲ್ಲಿ ಯಾರೂ ಆಸರೆ ಇಲ್ಲ. ನಮ್ಮಂತ ನಿರ್ಗತಿಕರು ಜೀವನ ಮಾಡುವುದು ತುಂಬಾ ಕಷ್ಟವಾಗಿದೆ”- 75 ವರ್ಷದ ಅಜ್ಜಿ.

ಈ ಎಲ್ಲಾ ಹೇಳಿಕೆಗಳು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಬಿಜೆಪಿಯ ಲೂಟಿಯ ವಿರುದ್ದ ಭಾರತ (#IndiaAgainstBJPLoot) ಎಂಬ ಅಭಿಯಾನದಲ್ಲಿ ಬಂದಿರುವುವು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆ, ಆಸ್ತಿ ಮಾರಾಟ ಮಾಡುವ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತಿದ್ದು, ನಾಡಿನ ಹಲವು ಮಂದಿ ವಿಡಿಯೊ ಮೂಲಕ ಬೆಲೆ ಏರಿಕೆಯಿಂದಾಗಿರುವ ಸಂಕಷ್ಟಗಳ ಕುರಿತು ಮಾತನಾಡಿದ್ದಾರೆ. ಜನರ ಮೂಲಕವೇ ಸಮಸ್ಯೆಗಳನ್ನು ಹೊರಗೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವೆಲ್ಲ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಆದರೆ ಈಗ ಮೋದಿ ಸರ್ಕಾರ ಬಂದ ಮೇಲೆ ನಾವು, ಮಕ್ಕಳೆಲ್ಲ ಅರೆ ಹೊಟ್ಟೆ ಊಟ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಬಡವರ ಬದುಕನ್ನು ಮತ್ತಷ್ಟು ಹೀನಾಯವಾಗಿಸಿದೆ” ಎಂದು ಮಹಿಳೆಯೊಬ್ಬರು ಮಾತನಾಡಿದ್ದಾರೆ.

“ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ. ನಾವು ಗಾರ್ಮೆಂಟ್ಸ್ ಗೆ ಹೋಗಿ ಕೂಲಿ ಮಾಡಿಕೊಂಡು ತಿನ್ನುವ ಜನ. ಇಷ್ಟು ಅಕ್ಕಿಯಲ್ಲಿ ನಾವು ಹೇಗೆ ಜೀವನ ಮಾಡುವುದು?” ಎಂದು ಮತ್ತೊಬ್ಬ ಮಹಿಳೆ ಪ್ರಶ್ನಿಸಿದ್ದಾರೆ.

ಜನರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಮಾತನಾಡಿದ್ದಾರೆ. “ದೇಶದಲ್ಲಿ, ಜನರ ತೆರಿಗೆ ಹಣದಿಂದ ಹಲವು ಸಂಸ್ಥೆಗಳು, ಮೂಲ ಸೌಕರ್ಯ, ವಿಮಾನ ನಿಲ್ದಾಣ, ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ದೇಶಕ್ಕೆ ಇಂತಹ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರ ದೇಶದ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿಯನ್ನು ಪರಭಾರೆ (ಮಾರಾಟ) ಮಾಡುತ್ತಿರುವುದು ದುರಂತ” ಎಂದಿದ್ದಾರೆ.

ಬಿಜೆಪಿ ಸರ್ಕಾರ ದೇಶದ ಎಲ್ಲ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರು ನಮ್ಮನ್ನು ಮಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾವೆಲ್ಲ ಒಂದಾಗಿ ಇದರ ವಿರುದ್ಧ ಹೋರಾಟ ಮಾಡೋಣ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...