Homeಮುಖಪುಟಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

’ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ’

- Advertisement -
- Advertisement -

“ನರೇಂದ್ರ ಮೋದಿ ಸರ್ಕಾರ ಬಿಎಸ್ಎನ್ಎಲ್, ರೈಲ್ವೆ, ವಿಮಾನ ನಿಲ್ದಾಣಗಳಂತಹ ದೇಶದ ಸಾರ್ವಜನಿಕ ಸ್ವಾಮ್ಯದ ಆಸ್ತಿಗಳಲ್ಲಿನ ಸರ್ಕಾರದ ಶೇರುಗಳನ್ನು ಹಿಂಪಡೆದು, ಖಾಸಗಿ ಹೂಡಿಕೆಗೆ ಅವಕಾಶ ನೀಡುತ್ತಿದೆ. ಈ ಮೂಲಕ ಮೋದಿಯವರು ದೇಶದ ಸಂಪತ್ತನ್ನು ಅಂಬಾನಿ, ಅದಾನಿಯಂತ ಕಾರ್ಪೊರೇಟ್ ವಲಯದ ಜನರಿಗೆ ಮಾರಾಟ ಮಾಡುತ್ತಿದ್ದಾರೆ”- ಶಂಕರಗೌಡ ಚನ್ನಬಸವನಗೌಡ ಪಾಟೀಲ್, ಬ್ಯಾಡಗಿ.

“ಅಚ್ಚೇ ದಿನ ತರುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ಅಚ್ಚೇ ದಿನ ನಮ್ಮ ಬದುಕಿನಲ್ಲಿ ಬರಲೇ ಇಲ್ಲ”- ಮಲ್ಲೇಶಪ್ಪ, ಕೋಲಾರ

“ಈ ಹಿಂದೆ ಗಾರೆ ಕೆಲಸ ಮಾಡುತ್ತಿದ್ದವಳು ಈಗ ಕಸ-ಮುಸುರೆ ಕೆಲಸಕ್ಕೆ ಹೋಗುತ್ತಿದ್ದೇನೆ. ಬಿಜೆಪಿ ಸರ್ಕಾರ ನಮಗೆ ಸರಿಯಾಗಿ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ. ನನಗೆ ಜೀವನದಲ್ಲಿ ಯಾರೂ ಆಸರೆ ಇಲ್ಲ. ನಮ್ಮಂತ ನಿರ್ಗತಿಕರು ಜೀವನ ಮಾಡುವುದು ತುಂಬಾ ಕಷ್ಟವಾಗಿದೆ”- 75 ವರ್ಷದ ಅಜ್ಜಿ.

ಈ ಎಲ್ಲಾ ಹೇಳಿಕೆಗಳು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಬಿಜೆಪಿಯ ಲೂಟಿಯ ವಿರುದ್ದ ಭಾರತ (#IndiaAgainstBJPLoot) ಎಂಬ ಅಭಿಯಾನದಲ್ಲಿ ಬಂದಿರುವುವು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆ, ಆಸ್ತಿ ಮಾರಾಟ ಮಾಡುವ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತಿದ್ದು, ನಾಡಿನ ಹಲವು ಮಂದಿ ವಿಡಿಯೊ ಮೂಲಕ ಬೆಲೆ ಏರಿಕೆಯಿಂದಾಗಿರುವ ಸಂಕಷ್ಟಗಳ ಕುರಿತು ಮಾತನಾಡಿದ್ದಾರೆ. ಜನರ ಮೂಲಕವೇ ಸಮಸ್ಯೆಗಳನ್ನು ಹೊರಗೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವೆಲ್ಲ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಆದರೆ ಈಗ ಮೋದಿ ಸರ್ಕಾರ ಬಂದ ಮೇಲೆ ನಾವು, ಮಕ್ಕಳೆಲ್ಲ ಅರೆ ಹೊಟ್ಟೆ ಊಟ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಬಡವರ ಬದುಕನ್ನು ಮತ್ತಷ್ಟು ಹೀನಾಯವಾಗಿಸಿದೆ” ಎಂದು ಮಹಿಳೆಯೊಬ್ಬರು ಮಾತನಾಡಿದ್ದಾರೆ.

“ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ. ನಾವು ಗಾರ್ಮೆಂಟ್ಸ್ ಗೆ ಹೋಗಿ ಕೂಲಿ ಮಾಡಿಕೊಂಡು ತಿನ್ನುವ ಜನ. ಇಷ್ಟು ಅಕ್ಕಿಯಲ್ಲಿ ನಾವು ಹೇಗೆ ಜೀವನ ಮಾಡುವುದು?” ಎಂದು ಮತ್ತೊಬ್ಬ ಮಹಿಳೆ ಪ್ರಶ್ನಿಸಿದ್ದಾರೆ.

ಜನರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಮಾತನಾಡಿದ್ದಾರೆ. “ದೇಶದಲ್ಲಿ, ಜನರ ತೆರಿಗೆ ಹಣದಿಂದ ಹಲವು ಸಂಸ್ಥೆಗಳು, ಮೂಲ ಸೌಕರ್ಯ, ವಿಮಾನ ನಿಲ್ದಾಣ, ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ದೇಶಕ್ಕೆ ಇಂತಹ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರ ದೇಶದ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿಯನ್ನು ಪರಭಾರೆ (ಮಾರಾಟ) ಮಾಡುತ್ತಿರುವುದು ದುರಂತ” ಎಂದಿದ್ದಾರೆ.

ಬಿಜೆಪಿ ಸರ್ಕಾರ ದೇಶದ ಎಲ್ಲ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರು ನಮ್ಮನ್ನು ಮಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾವೆಲ್ಲ ಒಂದಾಗಿ ಇದರ ವಿರುದ್ಧ ಹೋರಾಟ ಮಾಡೋಣ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...