Homeಮುಖಪುಟಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

’ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ’

- Advertisement -
- Advertisement -

“ನರೇಂದ್ರ ಮೋದಿ ಸರ್ಕಾರ ಬಿಎಸ್ಎನ್ಎಲ್, ರೈಲ್ವೆ, ವಿಮಾನ ನಿಲ್ದಾಣಗಳಂತಹ ದೇಶದ ಸಾರ್ವಜನಿಕ ಸ್ವಾಮ್ಯದ ಆಸ್ತಿಗಳಲ್ಲಿನ ಸರ್ಕಾರದ ಶೇರುಗಳನ್ನು ಹಿಂಪಡೆದು, ಖಾಸಗಿ ಹೂಡಿಕೆಗೆ ಅವಕಾಶ ನೀಡುತ್ತಿದೆ. ಈ ಮೂಲಕ ಮೋದಿಯವರು ದೇಶದ ಸಂಪತ್ತನ್ನು ಅಂಬಾನಿ, ಅದಾನಿಯಂತ ಕಾರ್ಪೊರೇಟ್ ವಲಯದ ಜನರಿಗೆ ಮಾರಾಟ ಮಾಡುತ್ತಿದ್ದಾರೆ”- ಶಂಕರಗೌಡ ಚನ್ನಬಸವನಗೌಡ ಪಾಟೀಲ್, ಬ್ಯಾಡಗಿ.

“ಅಚ್ಚೇ ದಿನ ತರುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ಅಚ್ಚೇ ದಿನ ನಮ್ಮ ಬದುಕಿನಲ್ಲಿ ಬರಲೇ ಇಲ್ಲ”- ಮಲ್ಲೇಶಪ್ಪ, ಕೋಲಾರ

“ಈ ಹಿಂದೆ ಗಾರೆ ಕೆಲಸ ಮಾಡುತ್ತಿದ್ದವಳು ಈಗ ಕಸ-ಮುಸುರೆ ಕೆಲಸಕ್ಕೆ ಹೋಗುತ್ತಿದ್ದೇನೆ. ಬಿಜೆಪಿ ಸರ್ಕಾರ ನಮಗೆ ಸರಿಯಾಗಿ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ. ನನಗೆ ಜೀವನದಲ್ಲಿ ಯಾರೂ ಆಸರೆ ಇಲ್ಲ. ನಮ್ಮಂತ ನಿರ್ಗತಿಕರು ಜೀವನ ಮಾಡುವುದು ತುಂಬಾ ಕಷ್ಟವಾಗಿದೆ”- 75 ವರ್ಷದ ಅಜ್ಜಿ.

ಈ ಎಲ್ಲಾ ಹೇಳಿಕೆಗಳು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಬಿಜೆಪಿಯ ಲೂಟಿಯ ವಿರುದ್ದ ಭಾರತ (#IndiaAgainstBJPLoot) ಎಂಬ ಅಭಿಯಾನದಲ್ಲಿ ಬಂದಿರುವುವು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆ, ಆಸ್ತಿ ಮಾರಾಟ ಮಾಡುವ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತಿದ್ದು, ನಾಡಿನ ಹಲವು ಮಂದಿ ವಿಡಿಯೊ ಮೂಲಕ ಬೆಲೆ ಏರಿಕೆಯಿಂದಾಗಿರುವ ಸಂಕಷ್ಟಗಳ ಕುರಿತು ಮಾತನಾಡಿದ್ದಾರೆ. ಜನರ ಮೂಲಕವೇ ಸಮಸ್ಯೆಗಳನ್ನು ಹೊರಗೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವೆಲ್ಲ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಆದರೆ ಈಗ ಮೋದಿ ಸರ್ಕಾರ ಬಂದ ಮೇಲೆ ನಾವು, ಮಕ್ಕಳೆಲ್ಲ ಅರೆ ಹೊಟ್ಟೆ ಊಟ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಬಡವರ ಬದುಕನ್ನು ಮತ್ತಷ್ಟು ಹೀನಾಯವಾಗಿಸಿದೆ” ಎಂದು ಮಹಿಳೆಯೊಬ್ಬರು ಮಾತನಾಡಿದ್ದಾರೆ.

“ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ. ನಾವು ಗಾರ್ಮೆಂಟ್ಸ್ ಗೆ ಹೋಗಿ ಕೂಲಿ ಮಾಡಿಕೊಂಡು ತಿನ್ನುವ ಜನ. ಇಷ್ಟು ಅಕ್ಕಿಯಲ್ಲಿ ನಾವು ಹೇಗೆ ಜೀವನ ಮಾಡುವುದು?” ಎಂದು ಮತ್ತೊಬ್ಬ ಮಹಿಳೆ ಪ್ರಶ್ನಿಸಿದ್ದಾರೆ.

ಜನರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಮಾತನಾಡಿದ್ದಾರೆ. “ದೇಶದಲ್ಲಿ, ಜನರ ತೆರಿಗೆ ಹಣದಿಂದ ಹಲವು ಸಂಸ್ಥೆಗಳು, ಮೂಲ ಸೌಕರ್ಯ, ವಿಮಾನ ನಿಲ್ದಾಣ, ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ದೇಶಕ್ಕೆ ಇಂತಹ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರ ದೇಶದ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿಯನ್ನು ಪರಭಾರೆ (ಮಾರಾಟ) ಮಾಡುತ್ತಿರುವುದು ದುರಂತ” ಎಂದಿದ್ದಾರೆ.

ಬಿಜೆಪಿ ಸರ್ಕಾರ ದೇಶದ ಎಲ್ಲ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರು ನಮ್ಮನ್ನು ಮಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾವೆಲ್ಲ ಒಂದಾಗಿ ಇದರ ವಿರುದ್ಧ ಹೋರಾಟ ಮಾಡೋಣ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...