Homeಕರ್ನಾಟಕಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿಯಂತೆ ಒಟ್ಟು 100 ಕೋಟಿ ರೂಪಾಯಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ. ಜೊತೆಗೆ ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯ ಎಂದಿದ್ದಾರೆ.

ದೇಶದ ಪ್ರತಿಯೊಬ್ಬರಿಗೂ ಕೊರೊನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೊನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಇಂದು ಜನ ವ್ಯಾಕ್ಸಿನ್‌ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇ ಪದೇ ಬದಲಾವಣೆ ಹೇಗೆ ಸಾಧ್ಯ..? ಎಂದು ಪ್ರಶ್ನಿಸಿದ್ದಾರೆ.

ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೆ ಕ್ಷೇತ್ರದ ಅಭಿವೃದ್ಧಿ ನಿಧಿಗೆ 2 ಕೋಟಿ ಬರುತ್ತೆ. ನಮ್ಮ 100 ಜನಪ್ರತಿನಿಧಿಗಳು ಡಿಸೈಡ್ ಮಾಡಿದ್ದೇವೆ. ಪ್ರತಿಯೊಬ್ಬರೂ 1 ಕೋಟಿಯನ್ನ ಲಸಿಕೆಗೆ ನೀಡುತ್ತೇವೆ. ಎಲ್ಲಾ ಸೇರಿಸಿ, 100 ಕೋಟಿಗಳನ್ನು ಲಸಿಕೆ ಖರೀದಿಗೆ ಕೊಡುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ಮಾಸಿಕ 5000 ರೂ. ಪಿಂಚಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...