Homeಮುಖಪುಟಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ರಾಜ್ಯ ಸರ್ಕಾರ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ- ಕಾಂಗ್ರೆಸ್

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದಿರುವ ಕರ್ನಾಟಕ ಕಾಂಗ್ರೆಸ್ ನಾಯಕರು ಸೋಂಕಿತ ಸರ್ಕಾರ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ, ಸರ್ಕಾರಕ್ಕೆ ಕೊರೊನಾ ನಿರ್ವಹಣೆಯ ಸಲಹೆಗಳನ್ನು ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕಣಗಳು ಹೆಚ್ಚಾಗುತ್ತಿದ್ದರೂ, ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ನಾಯಕರು #ಸೋಂಕಿತ ಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸುವ ಜೊತೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ.

’ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್, ಅಂತ್ಯಕ್ರಿಯೆ ಹೀಗೆ ಹಲವು ಬಿಕ್ಕಟ್ಟುಗಳನ್ನು ನಿರ್ವಹಿಸಲು ಮಂತ್ರಿಗಳನ್ನು ನೇಮಿಸಿ ಅವರಿಗೆ ಜವಾಬ್ದಾರಿಯನ್ನು ನೀಡಿ. ಇಡೀ ರಾಜ್ಯವನ್ನು 6 ವಿಭಾಗವನ್ನಾಗಿಸಿ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಮಂತ್ರಿಗಳಿಗೆ ಉಸ್ತುವಾರಿ ನೀಡಿ’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

“ಕೊರೊನಾ ನಿಗ್ರಹಿಸುವಿಕೆಯ ಭಾಗವಾದ ಟ್ರೀಟಿಂಗ್‌ನಲ್ಲಿ ಅಧೋಗತಿಗೆ ಇಳಿದಿದ್ದು ನಿತ್ಯ ಕಾಣುತ್ತಿದೆ
ಟ್ರಾಕಿಂಗ್‌ನಲ್ಲಿಯೂ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ, ಮಂತ್ರಿಗಳು, ಶಾಸಕರಿಗೆ ಸೋಂಕು ತಗುಲಿತ್ತು, ಅವರ ಸಂಪರ್ಕಕ್ಕೆ ಬಂದವರು ಯಾವುದೇ ಕಟ್ಟುನಿಟ್ಟಿನ ಐಸೋಲೇಶನ್ ನಿಯಮ ಪಾಲಿಸಲಿಲ್ಲ. ಇದೇ ಸೋಂಕಿತ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ” ಎಂದಿದ್ದಾರೆ.

“ಫೇಕ್ ನ್ಯೂಸ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಪಡೆದಿರುವ ಬಿಜೆಪಿ ಕರ್ನಾಟಕ ಐಟಿ ಸೆಲ್ ಉತ್ತರಿಸಲಿದೆಯೇ? ಗುಜರಾತ್, ಯುಪಿಯ ಬಿಜೆಪಿ ಸರ್ಕಾರಗಳಿಗೆ ಅಲ್ಲಿನ ಹೈಕೋರ್ಟ್‌ಗಳು ಮುಖಕ್ಕೆ ಉಗಿದಿವೆ. ಆಕ್ಸಿಜನ್ ಪೂರೈಸದ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಛಿಮಾರಿ ಹಾಕಿದೆ. ಇದೆಲ್ಲವೂ ನಿಮ್ಮ ಆಯೋಗ್ಯತನದ ಪ್ರತೀಕವಲ್ಲವೇ?” ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

“ಒಂದು ವರ್ಷ ಸಮಯವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ 2ನೇ ಅಲೆ ಎದುರಿಸಲು ಯಾವುದೇ ಸಿದ್ಧತೆ ಮಾಡಿಕೊಳ್ಳಲಿಲ್ಲ. ಕೇಂದ್ರ – ರಾಜ್ಯ ಬಿಜೆಪಿ ಸರ್ಕಾರಗಳ ನಿರ್ಲಕ್ಷ್ಯ ಜನಸಾಮಾನ್ಯರನ್ನು ಬಲಿಪಡೆಯುತ್ತಿದೆ. ಜನರ ಜೀವ ಉಳಿಸಲು ಈ ಸರ್ಕಾರಗಳು ಇದ್ದ ಯಾವ ಅವಕಾಶಗಳನ್ನೂ ಉಪಯೋಗಿಸಿಕೊಳ್ಳಲಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರದಿಂದ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲು ಆಗಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ. ಕಳೆದೊಂದು ವರ್ಷದಿಂದ ಜನರ ಯಾವ ಸಂಕಷ್ಟಗಳಿಗೂ ಈ ಸೋಂಕಿತ ಸರ್ಕಾರ ಸ್ಪಂದಿಸಲಿಲ್ಲ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕನಕಪುರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಮಾತನಾಡಿ, ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Image
PC: Twitter@INCKarnataka

ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ” ಎಂದು ಕಾಂಗ್ರೆಸ್ ಆರೋಪಿಸಿದೆ. ಕೊರೊನಾ ಬಂದು ಒಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೆ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ  ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ, ಭ್ರಷ್ಟಾಚಾರಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...