Homeಮುಖಪುಟಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ರಾಜ್ಯ ಸರ್ಕಾರ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ- ಕಾಂಗ್ರೆಸ್

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದಿರುವ ಕರ್ನಾಟಕ ಕಾಂಗ್ರೆಸ್ ನಾಯಕರು ಸೋಂಕಿತ ಸರ್ಕಾರ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ, ಸರ್ಕಾರಕ್ಕೆ ಕೊರೊನಾ ನಿರ್ವಹಣೆಯ ಸಲಹೆಗಳನ್ನು ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕಣಗಳು ಹೆಚ್ಚಾಗುತ್ತಿದ್ದರೂ, ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ನಾಯಕರು #ಸೋಂಕಿತ ಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸುವ ಜೊತೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ.

’ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್, ಅಂತ್ಯಕ್ರಿಯೆ ಹೀಗೆ ಹಲವು ಬಿಕ್ಕಟ್ಟುಗಳನ್ನು ನಿರ್ವಹಿಸಲು ಮಂತ್ರಿಗಳನ್ನು ನೇಮಿಸಿ ಅವರಿಗೆ ಜವಾಬ್ದಾರಿಯನ್ನು ನೀಡಿ. ಇಡೀ ರಾಜ್ಯವನ್ನು 6 ವಿಭಾಗವನ್ನಾಗಿಸಿ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಮಂತ್ರಿಗಳಿಗೆ ಉಸ್ತುವಾರಿ ನೀಡಿ’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

“ಕೊರೊನಾ ನಿಗ್ರಹಿಸುವಿಕೆಯ ಭಾಗವಾದ ಟ್ರೀಟಿಂಗ್‌ನಲ್ಲಿ ಅಧೋಗತಿಗೆ ಇಳಿದಿದ್ದು ನಿತ್ಯ ಕಾಣುತ್ತಿದೆ
ಟ್ರಾಕಿಂಗ್‌ನಲ್ಲಿಯೂ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ, ಮಂತ್ರಿಗಳು, ಶಾಸಕರಿಗೆ ಸೋಂಕು ತಗುಲಿತ್ತು, ಅವರ ಸಂಪರ್ಕಕ್ಕೆ ಬಂದವರು ಯಾವುದೇ ಕಟ್ಟುನಿಟ್ಟಿನ ಐಸೋಲೇಶನ್ ನಿಯಮ ಪಾಲಿಸಲಿಲ್ಲ. ಇದೇ ಸೋಂಕಿತ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ” ಎಂದಿದ್ದಾರೆ.

“ಫೇಕ್ ನ್ಯೂಸ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಪಡೆದಿರುವ ಬಿಜೆಪಿ ಕರ್ನಾಟಕ ಐಟಿ ಸೆಲ್ ಉತ್ತರಿಸಲಿದೆಯೇ? ಗುಜರಾತ್, ಯುಪಿಯ ಬಿಜೆಪಿ ಸರ್ಕಾರಗಳಿಗೆ ಅಲ್ಲಿನ ಹೈಕೋರ್ಟ್‌ಗಳು ಮುಖಕ್ಕೆ ಉಗಿದಿವೆ. ಆಕ್ಸಿಜನ್ ಪೂರೈಸದ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಛಿಮಾರಿ ಹಾಕಿದೆ. ಇದೆಲ್ಲವೂ ನಿಮ್ಮ ಆಯೋಗ್ಯತನದ ಪ್ರತೀಕವಲ್ಲವೇ?” ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

“ಒಂದು ವರ್ಷ ಸಮಯವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ 2ನೇ ಅಲೆ ಎದುರಿಸಲು ಯಾವುದೇ ಸಿದ್ಧತೆ ಮಾಡಿಕೊಳ್ಳಲಿಲ್ಲ. ಕೇಂದ್ರ – ರಾಜ್ಯ ಬಿಜೆಪಿ ಸರ್ಕಾರಗಳ ನಿರ್ಲಕ್ಷ್ಯ ಜನಸಾಮಾನ್ಯರನ್ನು ಬಲಿಪಡೆಯುತ್ತಿದೆ. ಜನರ ಜೀವ ಉಳಿಸಲು ಈ ಸರ್ಕಾರಗಳು ಇದ್ದ ಯಾವ ಅವಕಾಶಗಳನ್ನೂ ಉಪಯೋಗಿಸಿಕೊಳ್ಳಲಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರದಿಂದ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲು ಆಗಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ. ಕಳೆದೊಂದು ವರ್ಷದಿಂದ ಜನರ ಯಾವ ಸಂಕಷ್ಟಗಳಿಗೂ ಈ ಸೋಂಕಿತ ಸರ್ಕಾರ ಸ್ಪಂದಿಸಲಿಲ್ಲ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕನಕಪುರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಮಾತನಾಡಿ, ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Image
PC: Twitter@INCKarnataka

ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ” ಎಂದು ಕಾಂಗ್ರೆಸ್ ಆರೋಪಿಸಿದೆ. ಕೊರೊನಾ ಬಂದು ಒಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೆ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ  ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ, ಭ್ರಷ್ಟಾಚಾರಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...