Homeಮುಖಪುಟಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ರಾಜ್ಯ ಸರ್ಕಾರ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ- ಕಾಂಗ್ರೆಸ್

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದಿರುವ ಕರ್ನಾಟಕ ಕಾಂಗ್ರೆಸ್ ನಾಯಕರು ಸೋಂಕಿತ ಸರ್ಕಾರ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ, ಸರ್ಕಾರಕ್ಕೆ ಕೊರೊನಾ ನಿರ್ವಹಣೆಯ ಸಲಹೆಗಳನ್ನು ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕಣಗಳು ಹೆಚ್ಚಾಗುತ್ತಿದ್ದರೂ, ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ನಾಯಕರು #ಸೋಂಕಿತ ಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸುವ ಜೊತೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ.

’ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್, ಅಂತ್ಯಕ್ರಿಯೆ ಹೀಗೆ ಹಲವು ಬಿಕ್ಕಟ್ಟುಗಳನ್ನು ನಿರ್ವಹಿಸಲು ಮಂತ್ರಿಗಳನ್ನು ನೇಮಿಸಿ ಅವರಿಗೆ ಜವಾಬ್ದಾರಿಯನ್ನು ನೀಡಿ. ಇಡೀ ರಾಜ್ಯವನ್ನು 6 ವಿಭಾಗವನ್ನಾಗಿಸಿ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಮಂತ್ರಿಗಳಿಗೆ ಉಸ್ತುವಾರಿ ನೀಡಿ’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

“ಕೊರೊನಾ ನಿಗ್ರಹಿಸುವಿಕೆಯ ಭಾಗವಾದ ಟ್ರೀಟಿಂಗ್‌ನಲ್ಲಿ ಅಧೋಗತಿಗೆ ಇಳಿದಿದ್ದು ನಿತ್ಯ ಕಾಣುತ್ತಿದೆ
ಟ್ರಾಕಿಂಗ್‌ನಲ್ಲಿಯೂ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ, ಮಂತ್ರಿಗಳು, ಶಾಸಕರಿಗೆ ಸೋಂಕು ತಗುಲಿತ್ತು, ಅವರ ಸಂಪರ್ಕಕ್ಕೆ ಬಂದವರು ಯಾವುದೇ ಕಟ್ಟುನಿಟ್ಟಿನ ಐಸೋಲೇಶನ್ ನಿಯಮ ಪಾಲಿಸಲಿಲ್ಲ. ಇದೇ ಸೋಂಕಿತ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ” ಎಂದಿದ್ದಾರೆ.

“ಫೇಕ್ ನ್ಯೂಸ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಪಡೆದಿರುವ ಬಿಜೆಪಿ ಕರ್ನಾಟಕ ಐಟಿ ಸೆಲ್ ಉತ್ತರಿಸಲಿದೆಯೇ? ಗುಜರಾತ್, ಯುಪಿಯ ಬಿಜೆಪಿ ಸರ್ಕಾರಗಳಿಗೆ ಅಲ್ಲಿನ ಹೈಕೋರ್ಟ್‌ಗಳು ಮುಖಕ್ಕೆ ಉಗಿದಿವೆ. ಆಕ್ಸಿಜನ್ ಪೂರೈಸದ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಛಿಮಾರಿ ಹಾಕಿದೆ. ಇದೆಲ್ಲವೂ ನಿಮ್ಮ ಆಯೋಗ್ಯತನದ ಪ್ರತೀಕವಲ್ಲವೇ?” ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

“ಒಂದು ವರ್ಷ ಸಮಯವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ 2ನೇ ಅಲೆ ಎದುರಿಸಲು ಯಾವುದೇ ಸಿದ್ಧತೆ ಮಾಡಿಕೊಳ್ಳಲಿಲ್ಲ. ಕೇಂದ್ರ – ರಾಜ್ಯ ಬಿಜೆಪಿ ಸರ್ಕಾರಗಳ ನಿರ್ಲಕ್ಷ್ಯ ಜನಸಾಮಾನ್ಯರನ್ನು ಬಲಿಪಡೆಯುತ್ತಿದೆ. ಜನರ ಜೀವ ಉಳಿಸಲು ಈ ಸರ್ಕಾರಗಳು ಇದ್ದ ಯಾವ ಅವಕಾಶಗಳನ್ನೂ ಉಪಯೋಗಿಸಿಕೊಳ್ಳಲಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರದಿಂದ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲು ಆಗಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ. ಕಳೆದೊಂದು ವರ್ಷದಿಂದ ಜನರ ಯಾವ ಸಂಕಷ್ಟಗಳಿಗೂ ಈ ಸೋಂಕಿತ ಸರ್ಕಾರ ಸ್ಪಂದಿಸಲಿಲ್ಲ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕನಕಪುರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಮಾತನಾಡಿ, ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Image
PC: Twitter@INCKarnataka

ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ” ಎಂದು ಕಾಂಗ್ರೆಸ್ ಆರೋಪಿಸಿದೆ. ಕೊರೊನಾ ಬಂದು ಒಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೆ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ  ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ, ಭ್ರಷ್ಟಾಚಾರಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....