Homeಕರ್ನಾಟಕ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಕೂಡಲೇ ಪ್ರತಿ ಅರ್ಹ ಕುಟುಂಬಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿ. ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿ ನೀಡಿ- ಕಾಂಗ್ರೆಸ್

- Advertisement -
- Advertisement -

’ಮತ್ತೆ ಮತ್ತೆ ಹೇಳುತ್ತೇವೆ, ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’ ಎಂದು ರಾಜ್ಯ ಸರ್ಕಾರದ ಮೇಲೆ ಕಾಂಗ್ರೆಸ್ ಆರೋಪಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕರ್ನಾಟಕ ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ’ಅವರ ಸುಳ್ಳು, ಭ್ರಷ್ಟಾಚಾರ, ನಿರ್ಲಕ್ಷ್ಯ, ನಿರ್ಲಜ್ಜತನವೇ ಇಂದಿನ ಈ ಎಲ್ಲಾ ಅನಾಹುತಗಳಿಗೆ ಕಾರಣ. ಜನ ಸಾಯುತ್ತಿದ್ದರೂ ಕರುಣೆ ಇಲ್ಲದಂತೆ ಸುಳ್ಳಿನ ಬಂಡತನದ ಪ್ರಭು ಚೌಹಾಣ್‌ರಂತವರ ಮೂಲಕ ರಾಜ್ಯವನ್ನು ಸ್ಮಶಾನ ಮಾಡಲು ಹೊರಟಿದೆ ರಾಜ್ಯ ಸರ್ಕಾರ’ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಕೊರೊನಾ ಸೋಂಕಿತರ ನರಳಾಟ ಸುಳ್ಳು ಎಂದು ಪ್ರಭು ಚೌಹಾಣ್ ಅವರ ಹೇಳಿಕರಯ ವರದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು ಎಂದು ಆರೋಪಿಸಿದೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ರಾಜ್ಯದಲ್ಲಿ ಅನಧಿಕೃತ ಲಾಕ್‌ಡೌನ್ ಜಾರಿ ಮಾಡಿ ಬಡವರ ಹೊಟ್ಟೆಮೇಲೆ ಹೊಡೆಯುತ್ತಿದ್ದಿರ ಎಂದು ಆರೋಪಿಸಿರುವ ಕಾಂಗ್ರೆಸ್, ಅರ್ಹರಿಗೆ ಪ್ಯಾಕೇಜ್ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

’ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಚಾಪೆಯ ಕೆಳಗೆ ನುಸುಳುವ ಕೆಲಸ ಮಾಡಿದ್ದೀರೆಂದು ಗೊತ್ತಿದೆ. ಅಧಿಕೃತವಾಗಿ ಘೋಷಿಸಿದರೆ ನೆರವು ನೀಡಬೇಕಾದ ಅನಿವಾರ್ಯ ಬರುತ್ತದೆಂದು ಅನಧಿಕೃತ ಲಾಕ್‌ಡೌನ್ ಜಾರಿಗೊಳಿಸಿದಿರಿ. ಆದರೆ ಸಣ್ಣ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಚಾಲಕರು, ದಿನಗೂಲಿ ನೌಕರರು ಉಪವಾಸ ಮಲಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದೆ.

ಅನಧಿಕೃತ ಲಾಕ್‌ಡೌನ್ ಜಾರಿ ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ರಾಜ್ಯ ಸರ್ಕಾರ ಅರ್ಹರಿಗೆ ನೆರವು ಘೋಷಿಸಬೇಕು ಎಂದಿದೆ. ’ಬಿಜೆಪಿಯ ಅನಧಿಕೃತ ಲಾಕ್‌ಡೌನ್ ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಕೂಡಲೇ ಪ್ರತಿ ಅರ್ಹ ಕುಟುಂಬಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿ. ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿ ನೀಡಿ. ಸಣ್ಣ ವ್ಯಾಪಾರಿಗಳು, ಚಾಲಕರಿಗೆ ಪ್ಯಾಕೇಜ್ ನೀಡಿ. MSME ಗಳಿಗೆ ಅಗತ್ಯ ನೆರವು ನೀಡಿ ಉದ್ಯೋಗ ನಷ್ಟವಾಗದಂತೆ ನೋಡಿಕೊಳ್ಳಿ’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...