’ಮತ್ತೆ ಮತ್ತೆ ಹೇಳುತ್ತೇವೆ, ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’ ಎಂದು ರಾಜ್ಯ ಸರ್ಕಾರದ ಮೇಲೆ ಕಾಂಗ್ರೆಸ್ ಆರೋಪಿಸಿದೆ.
ಸರಣಿ ಟ್ವೀಟ್ಗಳನ್ನು ಮಾಡಿರುವ ಕರ್ನಾಟಕ ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ’ಅವರ ಸುಳ್ಳು, ಭ್ರಷ್ಟಾಚಾರ, ನಿರ್ಲಕ್ಷ್ಯ, ನಿರ್ಲಜ್ಜತನವೇ ಇಂದಿನ ಈ ಎಲ್ಲಾ ಅನಾಹುತಗಳಿಗೆ ಕಾರಣ. ಜನ ಸಾಯುತ್ತಿದ್ದರೂ ಕರುಣೆ ಇಲ್ಲದಂತೆ ಸುಳ್ಳಿನ ಬಂಡತನದ ಪ್ರಭು ಚೌಹಾಣ್ರಂತವರ ಮೂಲಕ ರಾಜ್ಯವನ್ನು ಸ್ಮಶಾನ ಮಾಡಲು ಹೊರಟಿದೆ ರಾಜ್ಯ ಸರ್ಕಾರ’ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಕೊರೊನಾ ಸೋಂಕಿತರ ನರಳಾಟ ಸುಳ್ಳು ಎಂದು ಪ್ರಭು ಚೌಹಾಣ್ ಅವರ ಹೇಳಿಕರಯ ವರದಿಯನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡು, ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು ಎಂದು ಆರೋಪಿಸಿದೆ.
ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ
ಮತ್ತೆ ಮತ್ತೆ ಹೇಳುತ್ತೇವೆ, ಕರೋನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು.
ಅವರ ಸುಳ್ಳು, ಭ್ರಷ್ಟಾಚಾರ, ನಿರ್ಲಕ್ಸ್ಯ, ನಿರ್ಲಜ್ಜತನವೇ ಇಂದಿನ ಈ ಎಲ್ಲಾ ಅನಾಹುತಗಳಿಗೆ ಕಾರಣ.
ಜನ ಸಾಯುತ್ತಿದ್ದರೂ ಕರುಣೆ ಇಲ್ಲದಂತೆ ಸುಳ್ಳಿನ ಬಂಡತನದ ಪ್ರಭು ಚೌಹಾಣ್ರಂತವರ ಮೂಲಕ ರಾಜ್ಯವನ್ನು ಸ್ಮಶಾನ ಮಾಡಲು ಹೊರಟಿದೆ @BJP4Karnataka pic.twitter.com/SDRn6WLuOu
— Karnataka Congress (@INCKarnataka) April 25, 2021
ರಾಜ್ಯದಲ್ಲಿ ಅನಧಿಕೃತ ಲಾಕ್ಡೌನ್ ಜಾರಿ ಮಾಡಿ ಬಡವರ ಹೊಟ್ಟೆಮೇಲೆ ಹೊಡೆಯುತ್ತಿದ್ದಿರ ಎಂದು ಆರೋಪಿಸಿರುವ ಕಾಂಗ್ರೆಸ್, ಅರ್ಹರಿಗೆ ಪ್ಯಾಕೇಜ್ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
’ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಚಾಪೆಯ ಕೆಳಗೆ ನುಸುಳುವ ಕೆಲಸ ಮಾಡಿದ್ದೀರೆಂದು ಗೊತ್ತಿದೆ. ಅಧಿಕೃತವಾಗಿ ಘೋಷಿಸಿದರೆ ನೆರವು ನೀಡಬೇಕಾದ ಅನಿವಾರ್ಯ ಬರುತ್ತದೆಂದು ಅನಧಿಕೃತ ಲಾಕ್ಡೌನ್ ಜಾರಿಗೊಳಿಸಿದಿರಿ. ಆದರೆ ಸಣ್ಣ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಚಾಲಕರು, ದಿನಗೂಲಿ ನೌಕರರು ಉಪವಾಸ ಮಲಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದೆ.
ಅನಧಿಕೃತ ಲಾಕ್ಡೌನ್ ಜಾರಿ ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ರಾಜ್ಯ ಸರ್ಕಾರ ಅರ್ಹರಿಗೆ ನೆರವು ಘೋಷಿಸಬೇಕು ಎಂದಿದೆ. ’ಬಿಜೆಪಿಯ ಅನಧಿಕೃತ ಲಾಕ್ಡೌನ್ ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಕೂಡಲೇ ಪ್ರತಿ ಅರ್ಹ ಕುಟುಂಬಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿ. ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿ ನೀಡಿ. ಸಣ್ಣ ವ್ಯಾಪಾರಿಗಳು, ಚಾಲಕರಿಗೆ ಪ್ಯಾಕೇಜ್ ನೀಡಿ. MSME ಗಳಿಗೆ ಅಗತ್ಯ ನೆರವು ನೀಡಿ ಉದ್ಯೋಗ ನಷ್ಟವಾಗದಂತೆ ನೋಡಿಕೊಳ್ಳಿ’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ನಿಮ್ಮ ಅನಧಿಕೃತ ಲಾಕ್ಡೌನ್ ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ.
?ಕೂಡಲೇ ಪ್ರತಿ ಅರ್ಹ ಕುಟುಂಬಕ್ಕೆ ಕನಿಷ್ಠ ₹10 ಸಾವಿರ ಆರ್ಥಿಕ ನೆರವು ನೀಡಿ
?ಅನ್ನಭಾಗ್ಯ ಅಕ್ಕಿಯನ್ನು 10ಕೆಜಿ ನೀಡಿ
?ಸಣ್ಣ ವ್ಯಾಪಾರಿಗಳು, ಚಾಲಕರಿಗೆ ಪ್ಯಾಕೇಜ್ ನೀಡಿ
?MSME ಗಳಿಗೆ ಅಗತ್ಯ ನೆರವು ನೀಡಿ ಉದ್ಯೋಗ ನಷ್ಟವಾಗದಂತೆ ನೋಡಿಕೊಳ್ಳಿ
2/2— Karnataka Congress (@INCKarnataka) April 25, 2021
ಇದನ್ನೂ ಓದಿ: ಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ