Homeಕರ್ನಾಟಕ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಪೌರಾಡಳಿತ ಇಲಾಖೆ ಇಂದಿರಾ ಕ್ಯಾಟೀನ್‌ಗಳಲ್ಲಿ ಉಚಿತ ಆಹಾರ ಒದಗಿಸಲು ನಿರ್ಧಾರ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಈಗ ರಾಜ್ಯ ಕಾಂಗ್ರೆಸ್ ಮತ್ತು ರಾಜ್ಯ ಬಿಜೆಪಿ ನಡುವೆ ಕೆಸರೆರಚಾರಕ್ಕೆ ಕಾರಣವಾಗಿದೆ.

ಟ್ವಿಟ್ಟರ್ ವಾರ್‌ ನಡೆಸುತ್ತಿರುವ ಎರಡು ಪಕ್ಷಗಳು, ನಾನು ಅಕ್ಕಿ ಕೊಟ್ಟೆ, ಇಂದಿರಾ ಕ್ಯಾಂಟೀನ್ ಕೊಟ್ಟೆ ಎನ್ನುವ ಕಾಂಗ್ರೆಸ್, ಪಿತ್ರಾರ್ಜಿತ ಆಸ್ತಿಯಲ್ಲಿ ಕೊಟ್ಟಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್,  “ಹೃದಯ ಹೀನ ರಾಜ್ಯ ಬಿಜೆಪಿ ಸರ್ಕಾರ, ಸಂಕಷ್ಟದಲ್ಲಿರುವ ಜನತೆಗೆ ರೇಷನ್ ಕಿಟ್ ಕೊಡಿ, ಪ್ಯಾಕೇಜ್ ನೀಡಿ ಎಂದರೆ ನೋಟ್ ಪ್ರಿಂಟ್ ಮಾಡ್ತಿಲ್ಲ ಎನ್ನುವ ನೀವು ಕಾಂಗ್ರೆಸ್‌ನ ಜನಪರ ನೆರವಿನ ಬಗ್ಗೆ ಕೊಂಕು ತೆಗೆಯುವ ಯೋಗ್ಯತೆ ನಿಮಗಿದೆಯೇ..? ಎಂದು ಪ್ರಶ್ನಿಸಿದೆ.

ಜೊತೆಗೆ “ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು, ಅಕ್ಕಿ ಕೇಳಿದ ಜನತೆಗೆ ಹೋಗಿ ಸಾಯ್ರಿ ಎಂದವರು ನೀವು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

 

ಲಸಿಕಾ ಅಭಿಯಾನ ಹೇಗೆ ನಡೆಯಲಿದೆ ಎಂಬ ಬಗ್ಗೆ ಬ್ಲೂ ಪ್ರಿಂಟ್ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಸುಧಾಕರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದರು. ಇದಕ್ಕೂ ಬಿಜೆಪಿ ಘಟಕ ಆಕ್ಷೇಪ ವ್ಯಕ್ತಪಡಿಸಿತ್ತು.

ಬಿಜೆಪಿಗೆ ತಿರುಗೇಟು ನೀಡಿರುವ ಕಾಂಗ್ರೆಸ್, “ಆಕ್ಸಿಜನ್, ICU, ರೆಮಿಡಿಸಿವಿರ್, ಬೆಡ್, ಚಿಕಿತ್ಸೆ ಕೊಡಲಾಗದೆ ಜನರನ್ನು ಹಾದಿ ಬೀದಿಯಲ್ಲಿ ಕೊಲ್ಲುತ್ತಿರುವ ರಾಜ್ಯ ಬಿಜೆಪಿ, ಲಸಿಕೆ ವೈಫಲ್ಯದ ಬಗ್ಗೆ ಹೈಕೋರ್ಟ್ ತಪರಾಕಿ ಕೊಟ್ಟಿದ್ದು ಸಾಲಲಿಲ್ಲವೇ? ಬ್ಲೂ ಪ್ರಿಂಟ್ ಕೊಡಿ ಎಂದ ಹೈಕೋರ್ಟಿಗೂ ಇದೇ ಮಾತು ಹೇಳಬಲ್ಲಿರಾ?” ಲಜ್ಜೆ ಬಿಟ್ಟರುವ ನಿಮ್ಮ ವಿರುದ್ಧ ಜನ ಏಳುವ ಕಾಲ ದೂರವಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

ನಾವು ಅನ್ನಭಾಗ್ಯ ನೀಡಿದ್ದೇವೆ. ನೀವು ಸಾವಿನ ಭಾಗ್ಯ, ಸ್ಮಶಾನ ಭಾಗ್ಯ ನೀಡಿದ್ದೀರಾ ಎಂದು ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸಿದೆ.

“ಹೌದು ನಾವು ಅನ್ನ ಭಾಗ್ಯದಲ್ಲಿ ಅಕ್ಕಿ ಕೊಟ್ಟೆವು, ಇಂದಿರಾ ಕ್ಯಾಂಟೀನ್‌ನಲ್ಲಿ ಅನ್ನ ಕೊಟ್ಟೆವು. ನೀವು ಕೊಟ್ಟಿದ್ದು ಸಾವಿನ ಭಾಗ್ಯ, ಸ್ಮಶಾನ ಭಾಗ್ಯ. ನಿಮ್ಮ ಆಡಳಿತದಲ್ಲಿ ಜನರ ಬದುಕು ಹಸನಾಗುವುದಿರಲಿ ಸತ್ತರೂ ಸಂಸ್ಕಾರವಿಲ್ಲದಂತಾಗಿದೆ. ಜನ ಕ್ಯಾಕರಿಸಿ ಉಗಿಯುತ್ತಿದ್ದಾರೆ ಸ್ವಲ್ಪ ಆಚೆ ನೋಡಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇಂದಿರಾ ಕ್ಯಾಂಟೀನ್ ವಿಷಯವಾಗಿ ಹಲವು ಬಾರಿ ಕಿತ್ತಾಟ ನಡೆದಿದೆ. ಇಂದಿರಾ ಕ್ಯಾಂಟೀನ್‌ಗೆ ಅನುದಾನ ಕಡಿತ ಮಾಡಲಾಗಿದೆ. ಅವುಗಳನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಈಗ ಲಾಕ್‌ಡೌನ್ ಸಮಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ವಿಚಾರ ಮುನ್ನಲೆಗೆ ಬಂದಿದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...