Homeಕರ್ನಾಟಕಬಿಜೆಪಿ ಆಡಳಿತದಲ್ಲಿ ಕರ್ನಾಟಕ ಗೂಂಡಾರಾಜ್ ಆಗುತ್ತಿದೆ- ಕಾಂಗ್ರೆಸ್ ಆರೋಪ

ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಗೂಂಡಾರಾಜ್ ಆಗುತ್ತಿದೆ- ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಜ್ಜಲ್ ಹಲ್ಲೆ ಪ್ರಕರಣದಲ್ಲಿ 5 ದಿನ ಕಳೆದರು ದೂರು ದಾಖಲಾಗಿಲ್ಲ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು ‘ಗೂಂಡಾರಾಜ್’ ಆಗಿ ಪರಿವರ್ತಿಸುತ್ತಿದೆ ಎಂದು ಆರೋಪಿಸಿದೆ.

ಕಳೆದ ಭಾನುವಾರ ರಾತ್ರಿ ವಸಂತನಗರದ ಎಂಬೆಸಿ ಹ್ಯಾಬಿಟೆಟ್ ಅಪಾರ್ಟ್ಮೆಂಟ್ ಬಳಿ ಕಾರು ಪಾರ್ಕಿಂಗ್​ ವಿಚಾರಕ್ಕೆ ಉದ್ಯಮಿಯೊಬ್ಬರ ಮಗ ವಿಕ್ರಮ್​ ರೈ ಅವರ ಮೇಲೆ ಆಂಜನೇಯ ವಜ್ಜಲ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

“ಬಿಜೆಪಿಯ ಮಾನಪ್ಪ ವಜ್ಜಲ್ ಅವರ ಪುತ್ರರು ಅಮಾಯಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಐದು ದಿನ ಕಳೆದರೂ ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದೇಕೆ ಗೃಹಸಚಿವರೇ? ದೂರು ಸ್ವೀಕರಿಸದಂತೆ ನೀವೇ ಪ್ರಭಾವ ಬೀರಿದಿರಾ..? ಬಿಜೆಪಿ ನಾಯಕರು, ಅವರ ಪುತ್ರರು ತಮ್ಮನ್ನು ತಾವು ಪಾಳೆಗಾರರು ಎಂದು ಭ್ರಮಿಸಿ ಗೂಂಡಾಗಿರಿ ನಡೆಸುತ್ತಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆಗೆ ಸಜ್ಜು

“ಬಿಜೆಪಿ ನಾಯಕರು, ನಾಯಕರ ಮಕ್ಕಳು ಕಂಡ ಕಂಡಲ್ಲಿ ಕುಡಿದು, ಕಂಡ ಕಂಡವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದರ ಬದಲು ‘ಬಾರ್ ಸಲಹೆಗಾರ’ ಸಿ.ಟಿ.ರವಿ ಮಾರ್ಗದರ್ಶನದಲ್ಲಿ ಬಿಜೆಪಿ ಕಚೇರಿಯಲ್ಲಿಯೇ ಬಾರ್ ತೆರೆದುಕೊಳ್ಳಲಿ. ಅಲ್ಲೇ ಕುಡಿದುಕೊಳ್ಳಲಿ, ಅಲ್ಲೇ ಬಡಿದುಕೊಳ್ಳಲಿ, ಜನರಿಗೆ ತೊಂದರೆ ಕೊಡುವುದನ್ನ ಬಿಡಲಿ!” ಎಂದಿದೆ.

ಇನ್ನು ಬಿಜೆಪಿ ನಾಯಕರು ನಡೆಸಿರುವ ಹಲ್ಲೆಗಳ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್,

*ಶಾಸಕ ಸಿದ್ದು ಸವದಿಯವರಿಂದ ಮಹಿಳೆ ಮೇಲೆ ಹಲ್ಲೆ – ಬಂಧನವಿಲ್ಲ

*ಮಾಜಿ ಸಚಿವರು ಅತ್ಯಾಚಾರ ಎಸಗಿದರೂ – ಬಂಧನವಿಲ್ಲ

*ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ – ದೂರು ದಾಖಲಿಸಲಿಲ್ಲ. ಬಿಜೆಪಿ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು ‘ಗೂಂಡಾರಾಜ್’ ಆಗಿ ಪರಿವರ್ತಿಸುತ್ತಿದೆ ಎಂದು ಕ್ರಾಂಗ್ರೆಸ್ ಆರೋಪಿಸಿದೆ.

ಸದ್ಯ ಆಂಜನೇಯ ವಜ್ಜಲ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಂಚ್ ಮಾಡುವ ಆಯುಧದಿಂದ ವಿಕ್ರಮ್ ರೈ ಮೇಲೆ ಹಲ್ಲೆ ಮಾಡಿದ್ದಾರೆ. 10 ರಿಂದ 15 ಹುಡುಗರನ್ನ ಕರೆಸಿ ಹಲ್ಲೆ ಮಡಿದ್ದಾರೆ ಎಂದು ಎಫ್​ಐಆರ್ ನಲ್ಲಿ ಆರೋಪಿಸಲಾಗಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 124, 324, 504, 506, 149 ಅಡಿ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಸೆ.27ರ ಭಾರತ ಬಂದ್ ಯಶಸ್ಸಿಗೆ ಒಕ್ಕೊರಲ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...