Homeಕರ್ನಾಟಕಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

’ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ’

- Advertisement -
- Advertisement -

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ” ಎಂದಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

“ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ ಬಿಜೆಪಿ ಅವರು ಹೊತ್ತುಕೊಂಡು ಹೋಗುತ್ತಾರೆ” ಎಂದು ಟೀಕೆ ಮಾಡಿದ್ದಾರೆ.

“ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಖಂಡಿತಾ ಇದೆ. ಉದಾಹರಣೆಗೆ ಹುಣಸೂರಿನಲ್ಲಿ ಕರ್ನಾಟಕ ಬಿಜೆಪಿ ಅಭ್ಯರ್ಥಿ ಯಾರು..? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ..? ಇಡೀ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ” ಎಂದಿದ್ದಾರೆ.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ” ಎಂದು ಕಾಮಗ್ರೆಸ್‌ಗೆ ಬೇರೆ ಪಕ್ಷಗಳಿಮದ ಬರಲು ನಾಯಕರು ತಯಾರಾಗಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಇನ್ನು, ಊದಯಪುರ ಹತ್ಯೆಯನ್ನು ಖಂಡಿಸಿರುವ ಅವರು, “ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ  ಅತ್ಯಂತ ಖಂಡನೀಯ ಕೃತ್ಯ. ಕೊಲೆಯಾದ ದಿನವೇ ಇದನ್ನು ಹೇಳಿದ್ದೇನೆ. ಈ ರೀತಿ ತಲೆ ಕತ್ತರಿಸುವ ದುಷ್ಕರ್ಮಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ. ರಾಜಸ್ತಾನ ಸರ್ಕಾರ ಖಂಡಿತ ಆರೋಪಿಗಳಿಗೆ ತಕ್ಷ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳುವ ಭರವಸೆ ಇದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...