Homeಕರ್ನಾಟಕಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

’ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ’

- Advertisement -
- Advertisement -

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ” ಎಂದಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

“ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ ಬಿಜೆಪಿ ಅವರು ಹೊತ್ತುಕೊಂಡು ಹೋಗುತ್ತಾರೆ” ಎಂದು ಟೀಕೆ ಮಾಡಿದ್ದಾರೆ.

“ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಖಂಡಿತಾ ಇದೆ. ಉದಾಹರಣೆಗೆ ಹುಣಸೂರಿನಲ್ಲಿ ಕರ್ನಾಟಕ ಬಿಜೆಪಿ ಅಭ್ಯರ್ಥಿ ಯಾರು..? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ..? ಇಡೀ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ” ಎಂದಿದ್ದಾರೆ.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ” ಎಂದು ಕಾಮಗ್ರೆಸ್‌ಗೆ ಬೇರೆ ಪಕ್ಷಗಳಿಮದ ಬರಲು ನಾಯಕರು ತಯಾರಾಗಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಇನ್ನು, ಊದಯಪುರ ಹತ್ಯೆಯನ್ನು ಖಂಡಿಸಿರುವ ಅವರು, “ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ  ಅತ್ಯಂತ ಖಂಡನೀಯ ಕೃತ್ಯ. ಕೊಲೆಯಾದ ದಿನವೇ ಇದನ್ನು ಹೇಳಿದ್ದೇನೆ. ಈ ರೀತಿ ತಲೆ ಕತ್ತರಿಸುವ ದುಷ್ಕರ್ಮಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ. ರಾಜಸ್ತಾನ ಸರ್ಕಾರ ಖಂಡಿತ ಆರೋಪಿಗಳಿಗೆ ತಕ್ಷ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳುವ ಭರವಸೆ ಇದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...