Homeಮುಖಪುಟದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಗುತ್ತಿಗೆದಾರ: ಬಿಜೆಪಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಗುತ್ತಿಗೆದಾರ: ಬಿಜೆಪಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ನೆಪದಲ್ಲಿ ಲಕ್ಷ, ಲಕ್ಷ ರೂಪಾಯಿ ಲಂಚ ನೀಡಿರುವುದನ್ನು ಪತ್ರಕರ್ತರೇ ಬಹಿರಂಗ ಪಡಿಸಿದ್ದಾರೆ.

- Advertisement -
- Advertisement -

ಸಚಿವ ಕೆ.ಎಸ್.ಈಶ್ವರಪ್ಪ 40% ಲಂಚ ಕೇಳಿದ್ದರು ಎಂದು ಆರೋಪಿಸಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಗುತ್ತಿಗೆದಾರ ಬಸವರಾಜ್ ಅಮರಗೋಳ ಎಂಬ ಗುತ್ತಿಗೆದಾರರು ಸಹ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂಬುದಕ್ಕೆ ಸಾಕ್ಷಿ ಬೇಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕಾಲದಲ್ಲಿ ಮಾರಾಟ ಮಾಡಿದ್ದ ಉಪಕರಣಗಳ ಬಿಲ್ ಪಾವತಿಗೆ ಲಂಚ ಕೇಳಿ‍ದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಸವರಾಜ್‌ ಅಮರಗೋಳ ಎಂಬ ಗುತ್ತಿಗೆದಾರ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಪತ್ರ ಬರೆದಿದ್ದರು. ಇದಕ್ಕಿಂತ ಬೇರೆ ಸಾಕ್ಷಿ ಬೇಕಾ ಮುಖ್ಯಮಂತ್ರಿಗಳೇ? ಇನ್ನು ಎಷ್ಟು ಮಂದಿಯನ್ನು ಆತ್ಮಹತ್ಯೆಗೆ ನೂಕುತ್ತೀರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಸವರಾಜ್ ಅಮರಗೋಳರವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ವಿವರಗಳನ್ನೂ ರಾಷ್ಟ್ರಪತಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ. ಕೆ.ಎಸ್ ಈಶ್ವರಪ್ಪ 40% ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕಾಗಿ ಈಶ್ವರಪ್ಪ ರಾಜೀನಾಮೆ ನೀಡಿಲ್ವಾ? ಪೊಲೀಸ್ ಅಧಿಕಾರಿ ನಂದೀಶ್‍ ಹೃದಯಾಘಾತಕ್ಕೆ ಅವರು ವರ್ಗಾವಣೆಗಾಗಿ 60-70 ಲಕ್ಷ ರೂಪಾಯಿ ಲಂಚ ಕೊಟ್ಟಿರುವುದೇ ಕಾರಣ ಎಂದು ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಲಂಚಗುಳಿತನಕ್ಕೆ ಇನ್ನೇನು ಸಾಕ್ಷಿ ಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ನೆಪದಲ್ಲಿ ಸಿಎಂ ಬೊಮ್ಮಾಯಿಯವರ ಕಚೇರಿಯಿಂದಲೇ ಲಕ್ಷ, ಲಕ್ಷ ರೂಪಾಯಿ ಲಂಚ ನೀಡಿರುವುದನ್ನು ಪತ್ರಕರ್ತರೇ ಬಹಿರಂಗ ಪಡಿಸಿದ್ದಾರೆ. ನಮ್ಮ ಆರೋಪಕ್ಕೆ ಸಾಕ್ಷಿ ಕೇಳುತ್ತಿರಲ್ಲಾ ಮುಖ್ಯಮಂತ್ರಿಗಳೇ, ಪತ್ರಕರ್ತರೇ ಸಾಕ್ಷಿ ಕೊಟಿದ್ದಾರಲ್ಲಾ? ಇದರ ಬಗ್ಗೆಯೂ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ಯಾವ ಅಕ್ರಮಗಳು ನಡೆದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಿಎಂ ಬೊಮ್ಮಾಯಿಯವರು ಹೇಳಿದ್ದರು. ಹಾಗಾದರೆ ಎಡಿಜಿಪಿ ಅಮೃತ್‌ ಪೌಲ್‌ ಅವರು ಜೈಲು ಸೇರಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಲಂಚಕೊಟ್ಟ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ, ಇನ್ನೊಬ್ಬರು ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ವರ್ಗಾವಣೆಗಾಗಿ ಲಂಚ ಕೊಟ್ಟಿರುವ ಮತ್ತೊಬ್ಬ ಅಧಿಕಾರಿಗೆ ಹೃದಯಾಘಾತವಾಗಿದೆ. ಇನ್ನೇನು ಸಾಕ್ಷಿಗಳು ಬೇಕು? ರಾಜ್ಯ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬೀಳಲು ಸಾಧ್ಯ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಅವುಗಳನ್ನೂ ಸೇರಿಸಿ ತನಿಖೆ ಮಾಡಿಸಿ, ನಮ್ಮ ಅಭ್ಯಂತರ ಇಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಗುಜರಾತ್‌ ತೂಗುಸೇತುವೆ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ; 177 ಜನರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...