Homeಮುಖಪುಟಕೋವಿಡ್ ರೂಪಾಂತರ ಪತ್ತೆ ಹಿನ್ನೆಲೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್ ರೂಪಾಂತರ ಪತ್ತೆ ಹಿನ್ನೆಲೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಕೋವಿಡ್ 19 ರೂಪಾಂತರ ಪ್ರಕರಣ ನೆರೆಯ ಕೇರಳದಲ್ಲಿ ಪತ್ತೆ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಸಲಹೆಯನ್ನು ನೀಡಿದೆ.

ಕೇರಳದಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಪ್ರಕರಣ ಪತ್ತೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಏನೇನಿದೆ?

ಎಲ್ಲಾ ಹಿರಿಯ ನಾಗರೀಕರು ಅದರಲ್ಲೂ 60 ವರ್ಷ ಹಾಗೂ ಮೇಲ್ಪಟ್ಟವರು, ಕಿಡ್ನಿ, ಹೃದಯ, ಲಿವರ್ ಸಮಸ್ಯೆ ಸೇರಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸಬೇಕು. ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೆ ದೂರ ಇರುವುದು ಸೂಕ್ತವಾಗಿದೆ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು.

ದೈಹಿಕ ಸ್ವಚ್ಛತೆಯನ್ನು ಕಾಪಾಡಬೇಕು. ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಬೇಕಿದೆ.

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಉತ್ತಮ. ಈ ವೇಳೆ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತರನ್ನು ಭೇಟಿ ಮಾಡುವುದನ್ನು ತಪ್ಪಿಸಬೇಕು.

ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋವಿಡ್‌ ರೂಪಾಂತರ ಪ್ರಕರಣ ಪತ್ತೆ ಹಿನ್ನೆಲೆ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ನಿನ್ನೆ ಮನವಿ ಮಾಡಿದ್ದರು. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ವ್ಯವಸ್ಥೆ ಮಾಡುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದರು.

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಆತಂಕ ಪಡಬೇಕಾದ ಅಗತ್ಯವಿಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ಭಾರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ  ಎಂದು ಹೇಳಿದ್ದರು.

ಮಂಡ್ಯದಲ್ಲಿ ಕೋವಿಡ್ ಪ್ರಕರಣ ಪತ್ತೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.ಇವರಿಗೆ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...