Homeಮುಖಪುಟಕೋವಿಡ್ ರೂಪಾಂತರ ಪತ್ತೆ ಹಿನ್ನೆಲೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್ ರೂಪಾಂತರ ಪತ್ತೆ ಹಿನ್ನೆಲೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಕೋವಿಡ್ 19 ರೂಪಾಂತರ ಪ್ರಕರಣ ನೆರೆಯ ಕೇರಳದಲ್ಲಿ ಪತ್ತೆ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಸಲಹೆಯನ್ನು ನೀಡಿದೆ.

ಕೇರಳದಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಪ್ರಕರಣ ಪತ್ತೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಏನೇನಿದೆ?

ಎಲ್ಲಾ ಹಿರಿಯ ನಾಗರೀಕರು ಅದರಲ್ಲೂ 60 ವರ್ಷ ಹಾಗೂ ಮೇಲ್ಪಟ್ಟವರು, ಕಿಡ್ನಿ, ಹೃದಯ, ಲಿವರ್ ಸಮಸ್ಯೆ ಸೇರಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸಬೇಕು. ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೆ ದೂರ ಇರುವುದು ಸೂಕ್ತವಾಗಿದೆ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು.

ದೈಹಿಕ ಸ್ವಚ್ಛತೆಯನ್ನು ಕಾಪಾಡಬೇಕು. ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಬೇಕಿದೆ.

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಉತ್ತಮ. ಈ ವೇಳೆ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತರನ್ನು ಭೇಟಿ ಮಾಡುವುದನ್ನು ತಪ್ಪಿಸಬೇಕು.

ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋವಿಡ್‌ ರೂಪಾಂತರ ಪ್ರಕರಣ ಪತ್ತೆ ಹಿನ್ನೆಲೆ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ನಿನ್ನೆ ಮನವಿ ಮಾಡಿದ್ದರು. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ವ್ಯವಸ್ಥೆ ಮಾಡುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದರು.

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಆತಂಕ ಪಡಬೇಕಾದ ಅಗತ್ಯವಿಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ಭಾರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ  ಎಂದು ಹೇಳಿದ್ದರು.

ಮಂಡ್ಯದಲ್ಲಿ ಕೋವಿಡ್ ಪ್ರಕರಣ ಪತ್ತೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.ಇವರಿಗೆ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...