Homeಕರ್ನಾಟಕಬೆಳೆ ಹಾನಿಗಾಗಿ ಜಿಲ್ಲಾಡಳಿತಗಳಲ್ಲಿ 685 ಕೋಟಿ ಲಭ್ಯವಿದೆ, ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ...

ಬೆಳೆ ಹಾನಿಗಾಗಿ ಜಿಲ್ಲಾಡಳಿತಗಳಲ್ಲಿ 685 ಕೋಟಿ ಲಭ್ಯವಿದೆ, ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ

- Advertisement -
- Advertisement -

ರಾಜ್ಯದಲ್ಲಿ ಅಕಾಲಿಕ ಮಳೆಗೆ ಬೆಳೆ ಹಾನಿ ಉಂಟಾಗಿದ್ದು, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ವೇಳೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ತುಮಕೂರಿನ ಸಿದ್ಧಗಂಗಾಮಠದ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

“ರಾಜ್ಯದಲ್ಲಿ ಬೆಳೆ ಹಾನಿ ಪರಿಹಾರಕ್ಕೆ 685 ಕೋಟಿ ರೂಪಾಯಿಗಳು ಎಲ್ಲಾ ಜಿಲಾಡಳಿತಗಳಲ್ಲಿ ಈಗಾಗಲೇ ಲಭ್ಯವಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಆಪ್‌ನಲಿ ಮಾಹಿತಿ ಆಪ್ ಲೋಡ್ ಮಾಡಿದವರಿಗೆ ಪರಿಹಾರವನ್ನು ವಿತರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಮುಂದುವರಿದು, “ಹಣಕಾಸಿನ ಅವಶ್ಯಕತೆ ಇದ್ದಲ್ಲಿ ಕೂಡಲೇ ತಿಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ತಕ್ಷಣವೇ ಒಂದು ತಂಡವನ್ನು ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದ ಸಮೀಕ್ಷೆಯೂ ನಡೆದಿದೆ” ಎಂದಿದ್ದಾರೆ.

ಮಳೆಯಿಂದಾಗಿ ರೈತರಿಗೆ ಅಪಾರ ಹಾನಿಯಾಗಿದ್ದು, ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದರು. “ನಿರಂತರವಾಗಿ ಸುರಿದ ಮಳೆಯಿಂದಾಗಿ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟವಾಗಿದೆ. ಲಕ್ಷಾಂತರ ರೂಪಾಯಿ ಸಾಲಮಾಡಿ ರೈತರು ಕಲ್ಕತ್ತಾದಿಂದ ಹೂಗಿಡಗಳನ್ನು ತರಿಸಿ ಹೊಲದಲ್ಲಿ ಹಾಕಿದ್ದರು. ಮಳೆಯಿಂದಾಗಿ ಬೆಳೆಪೂರ್ತಿ ಕೊಚ್ಚಿಹೋಗಿದೆ. ಕಳೆದ 25 ದಿನಗಳಿಂದ ಮಳೆಯಾಗುತ್ತಿದ್ದು ಬೆಳೆ ನಾಶವಾಗಿದೆ. ಸರ್ಕಾರ ಈಗಾಗಲೇ ಬೆಳೆನಷ್ಟದ ಸಮೀಕ್ಷೆ ಮಾಡಿಸಬೇಕಿತ್ತು, ಜಿಲ್ಲಾ ಉಸ್ತುವಾರಿ ಸಚಿವರು, ಮಂತ್ರಿಗಳು ರೈತರ ಸಂಕಷ್ಟ ಆಲಿಸಬೇಕಿತ್ತು. ಇದ್ಯಾವುದನ್ನೂ ಸರ್ಕಾರ ಮಾಡಿಲ್ಲ’ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನೂ ತಡ ಮಾಡದೆ ರಾಜ್ಯ ಸರ್ಕಾರ ತಕ್ಷಣ ಬೆಳೆ ನಷ್ಟದ ಸಮೀಕ್ಷೆ ಮಾಡಿ, ರೈತರಿಗೆ ಪರಿಹಾರದ ಹಣ ನೀಡಬೇಕು ಎಂದು ಮುಖ್ಯಮಂತ್ರಿಯವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದರು.


ಇದನ್ನೂ ಓದಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...