Homeನ್ಯಾಯ ಪಥಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ - ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ – ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ಇವತ್ತು ಕೆಲವು ವಿಷಯಗಳನ್ನು ಪಾಯಿಂಟ್ ಶೀರ್ ಕಲಿಯೋಣು.

ಒಂದನೇ ಪಾಯಿಂಟು- ಸಂಖ್ಯೆ
ಕರ್ನಾಟಕ ರಾಜ್ಯದೊಳಗ 30 ಜಿಲ್ಲೆ ಅವ. 32 ಅಲ್ಲ. 34 ನೂ ಅಲ್ಲ. ಕೆಲವರು 34 ಏನು 43 ಮಾಡಬೇಕು ಅಂತ ಹೊಂಟಾರ. ಅದು ಬೇರೆ ವಿಷಯ.

ಎರಡನೇ ಪಾಯಿಂಟು-ಜಿಲ್ಲೆಗಳ ಪಟ್ಟಿ
ಕರ್ನಾಟಕದ ಜಿಲ್ಲೆಗಳ ಹೆಸರು ಈ ರೀತಿ ಇವೆ – ಬಾಗಲಕೋಟಿ, ಬೆಳಗಾವಿ, ವಿಜಯಪುರ (ಬಿಜಾಪುರ), ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ(ಕಾರವಾರ), ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೀದರ್, ಕಲಬುರ್ಗಿ (ಗುಲಬರ್ಗಾ), ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ (ಮಂಗಳೂರು), ಹಾಸನ, ಕೊಡಗು (ಕೂರ್ಗು, ಮಡಿಕೇರಿ, ಮರಕೇರಾ), ಮಂಡ್ಯ, ಮೈಸೂರು, ಉಡುಪಿ

ಮೂರನೇ ಪಾಯಿಂಟು – ಆ ಪದಾ ಈ ಪದಾ
‘ಜಿಲ್ಲೆ’ ಎನ್ನುವುದು ಕನ್ನಡ ಪದವಾಗಲು ಅದೇನು ಕಬ್ಬಿನ ಜಲ್ಲೆ ಅಲ್ಲ. ಅದು ಜಿಲಾಃ ಎನ್ನುವ ಪರ್ಶಿಯನ್ ಅಥವಾ ಪಾರ್ಸಿ ಪದದಿಂದ ಬಂದ ಶಬ್ದ.

ನಮಗೆ ಗೊತ್ತಿಲ್ಲದಂಗನ ನಮ್ಮ ಅರಮನೀ ಕಂಬದಾಗ ನರಸಿಂಹಸ್ವಾಮಿ ಹೆಂಗ ಅವತಾರ ಹೆಂಗ ಇರತಾನೋ, ಹಂಗ ನಮ್ಮ ಖನ್ನಡ ಬಾಸೆಯೊಳಗ ಅಸಂಖ್ಯ ಪರ್ಶಿಯನ್ ಅಥವಾ ಪಾರ್ಸಿ ಪದಾ ಅವ. ಹಂಗನ ಇದೂ ಒಂದು ಪಾರ್ಸಿ ಪದ. “ಗಂಡಸರ ಲುಂಗಿ, ಹೆಂಗಸರು ಲುಂಗಿ, ಲಂಗೋಟಿ ಇವು ಯಾವುವೂ ಕನ್ನಡದವಲ್ಲ. ಅವೆಲ್ಲವೂ ಪಾರ್ಸಿ ಅಂತ ಸಂಶೋಧಕ ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಹೇಳ್ಯಾರಲ್ಲ, ಅದು ಖರೇನ. ಕನ್ನಡದ ಕಸ್ತೂರಿ ತೇಯುವಾಗ ಕೊರಡಿಗೆ ಅಂಟಿಕೊಂಡ ಗಂಧದ ವಾಸನಿಯ ಹಂಗ ಅವು ನಮ್ಮ ಭಾಷಾ ಸೇರಿಕೊಂಡು ಅದರ ಘಮಲು ಹೆಚ್ಚು ಆಗೇದ.

ನಮ್ಮ ಕಲ್ಪನಾ ಇಲ್ಲದಂಗ ಅವು ನಮ್ಮ ಮ್ಯಾಲೆ ಪ್ರಭಾವ ಬೀರ್ಯಾವು. ಬ್ಯಾರೆ ಎಲ್ಲಾ ಹೋಗಲಿ ಬಿಡಲಿ. ನಮ್ಮ ಜೀವನಾಧಾರ ಆಗಿರೋ `ನೀರು’ ಸಹಿತ ಫಾರ್ಸಿ. ಹೋಗಲಿ ಬಿಡ್ರಿ, ಅವು ಯಾವಾವು ಶಬ್ದಾ ಅನ್ನುವುದನ್ನು ಇನ್ನೊಮ್ಮೆ ನೋಡೋಣ.

ನಾಲ್ಕನೆಯ ಪಾಯಿಂಟು – ಇತಿಹಾಸ
ಸಾವಿರಾರು ವರ್ಷಗಳಿಂದ ಗ್ರಾಮ ಪಂಚಾಯಿತಿಯೇ ಭಾರತದಲ್ಲಿ ಆಡಳಿತದ ಕೇಂದ್ರವಾಗಿತ್ತು. ಸರಿ ಸುಮಾರು ಒಂದು ಸಾವಿರ ವರ್ಷದ ಹಿಂದೆ ಘುರಿಡ್ ರಾಜ ಮನೆತನದವರು ಭಾರತದ ಆಡಳಿತ ವನ್ನು ಕೈಗೆ ತೆಗೆದುಕೊಂಡಾಗ ಪ್ರತಿ ಪ್ರದೇಶಕ್ಕೊಬ್ಬ ಸರದಾರನನ್ನು ನೇಮಿಸಿದರು. ಇವರಲ್ಲಿ ಒಬ್ಬನಾದ ಕುತುಬ್ದೀನ ಐಬಕ್‍ನ ಅಧಿಕಾರಿಗಳು ಕೈಕೊಂಡ ಆಡಳಿತ ಸುಧಾರಣೆ ಅಂಗವಾಗಿ ಹುಟ್ಟಿದ್ದವೇ ಜಿಲಾಃ ಗಳು. ಇವುಗಳನ್ನು ನಂತರ ದೆಹಲಿ ಸುಲ್ತಾನರು, ದಖನ್ನಿನ ಬಹಮನಿಗಳು, ಮುಘಲರು, ಹಾಗೂ ಹೈದರಾಬಾದು ನಿಜಾಮರು ಆಡಳಿತ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡರು. ಹೈದರಾಬಾದಿನಲ್ಲಿ, `ನಿಜಾಮರು ಜಿಲ್ಲಾಗಳಿಂದ ರಾಜಧಾನಿಯವರೆಗೆ ಕೇಳಬೇಕಾದ್ದು ಸಂಗೀತದ ದನಿಯೊಂದೇ, ಷಿಕಾಯತ್ (ದೂರು) ಇಲ್ಲಿಗೆ ಬರಬೇಕಿಲ್ಲ. ಅಲ್ಲಲ್ಲಿಯೇ ಪರಿಹರಿಸಿಕೊಳ್ಳಬಹುದು’ ಎಂದು ಹೇಳುತ್ತಿದ್ದರು ಎಂಬ ಮಾತಿದೆ.

ಬ್ರಿಟಿಷರ ಕಾಲದಲ್ಲಿ ಕಾರ್ಯಾಂಗ ಹಾಗೂ ನ್ಯಾಯಾಂಗದ ಅಧಿಕಾರಿಗಳನ್ನು ಜಿಲ್ಲೆಗಳಲ್ಲಿ ನೇಮಿಸಲಾಯಿತು. ಅವರಿಗೆ ಹೆಚ್ಚಿನ ಅಧಿಕಾರಗಳನ್ನು ಕೊಟ್ಟದಕ್ಕನ, ದೂರದ ಒಂಬತ್ತು ಸಾವಿರ ಕಿಲೋಮೀಟರು ದೂರದ ಲಂಡನ್ನಿನಿಂದ ಅವರಿಗೆ ಅಧಿಕಾರ ಚಲಾಯಿಸಲಿಕ್ಕೆ ಸಾಧ್ಯ ಆತು. ಸಿಂಗಾಪುರದ ಗಡಿಯಿಂದ ಆಫ್ಘಾನಿಸ್ತಾನದವರೆಗೂ ಹಬ್ಬಿದ್ದ ಅಂದಿನ ಭಾರತವನ್ನು ಆಳಲಿಕ್ಕೆ ಕೇವಲ ಎರಡು ಸಾವಿರ ಬಿಳಿಯ ಅಧಿಕಾರಿಗಳು ಇದ್ದರು. (ಸೇನೆ ಹಾಗೂ ಐಸಿಎಸ್ ಆಡಳಿತ ಸೇವೆ ಸೇರಿ).

ಐದನೆಯ ಪಾಯಿಂಟು- ಜಿಲ್ಲೆಯಲ್ಲಿ ಏನುಂಟು, ಏನಿಲ್ಲ?
ಜಿಲ್ಲೆ ಎನ್ನುವುದು ಒಂದು ಪ್ರದೇಶದ ಆಡಳಿತಾತ್ಮಕ ಮುಖ್ಯ ಕಚೇರಿಗಳನ್ನು ಹೊಂದಿರೋ ಊರು. ಅದರಾಗ ನಮ್ಮ ತೆರಿಗೆ ಹಣದಿಂದ ಕಟ್ಟಿದ ಇಟ್ಟಂಗಿ – ಸಿಮಿಂಟ್ ಕಟ್ಟಡಗಳಲ್ಲಿ ಇರುವ ಕಲ್ಲಿನ ಹೃದಯದ ಅಧಿಕಾರಿಗಳು ಕೂತಿರತಾರ. ಇವರು ಜನರ ಕೆಲಸ ಮಾಡೋಕಿಂತ ಜಾಸ್ತಿ ಜನರ ಪ್ರತಿನಿಧಿಗಳು ಎಂದು ಹೇಳಿಕೊಳ್ಳುವ ಪುಢಾರಿಗಳ ಕೆಲಸಾ ಮಾಡೋದ ಜಾಸ್ತಿ.

ಇಂತಿಪ್ಪ ಪುಢಾರಿಗಳು ಜನಾಸಕ್ತಿಗಾಗಿ ಹೆಚ್ಚಿನ ಜಿಲ್ಲೆ ಮಾಡಬೇಕು, ನಾನು ಇರೋ ಊರೇ ಜಿಲ್ಲೆ ಮುಖ್ಯ ಸ್ಥಾನ ಆಗಬೇಕು. ನಮ್ಮ ಮನಿ ಹಿಂದನ, ನಮ್ ಭಾವಮೈದುನನೇ ಜಿಲ್ಲಾಧಿಕಾರಿ ಆಗಬೇಕು ಅಂತ ಹೇಳಲಿಕ್ಕೆ ಹತ್ಯಾರಲ್ಲ, ಏನದರ ಮರ್ಮ? ಇದರ ಉತ್ತರ ಈ ಖೋಲಿಯೊಳಗ ಸಿಗೋದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...