Homeನ್ಯಾಯ ಪಥಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ - ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ – ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ಇವತ್ತು ಕೆಲವು ವಿಷಯಗಳನ್ನು ಪಾಯಿಂಟ್ ಶೀರ್ ಕಲಿಯೋಣು.

ಒಂದನೇ ಪಾಯಿಂಟು- ಸಂಖ್ಯೆ
ಕರ್ನಾಟಕ ರಾಜ್ಯದೊಳಗ 30 ಜಿಲ್ಲೆ ಅವ. 32 ಅಲ್ಲ. 34 ನೂ ಅಲ್ಲ. ಕೆಲವರು 34 ಏನು 43 ಮಾಡಬೇಕು ಅಂತ ಹೊಂಟಾರ. ಅದು ಬೇರೆ ವಿಷಯ.

ಎರಡನೇ ಪಾಯಿಂಟು-ಜಿಲ್ಲೆಗಳ ಪಟ್ಟಿ
ಕರ್ನಾಟಕದ ಜಿಲ್ಲೆಗಳ ಹೆಸರು ಈ ರೀತಿ ಇವೆ – ಬಾಗಲಕೋಟಿ, ಬೆಳಗಾವಿ, ವಿಜಯಪುರ (ಬಿಜಾಪುರ), ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ(ಕಾರವಾರ), ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೀದರ್, ಕಲಬುರ್ಗಿ (ಗುಲಬರ್ಗಾ), ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ (ಮಂಗಳೂರು), ಹಾಸನ, ಕೊಡಗು (ಕೂರ್ಗು, ಮಡಿಕೇರಿ, ಮರಕೇರಾ), ಮಂಡ್ಯ, ಮೈಸೂರು, ಉಡುಪಿ

ಮೂರನೇ ಪಾಯಿಂಟು – ಆ ಪದಾ ಈ ಪದಾ
‘ಜಿಲ್ಲೆ’ ಎನ್ನುವುದು ಕನ್ನಡ ಪದವಾಗಲು ಅದೇನು ಕಬ್ಬಿನ ಜಲ್ಲೆ ಅಲ್ಲ. ಅದು ಜಿಲಾಃ ಎನ್ನುವ ಪರ್ಶಿಯನ್ ಅಥವಾ ಪಾರ್ಸಿ ಪದದಿಂದ ಬಂದ ಶಬ್ದ.

ನಮಗೆ ಗೊತ್ತಿಲ್ಲದಂಗನ ನಮ್ಮ ಅರಮನೀ ಕಂಬದಾಗ ನರಸಿಂಹಸ್ವಾಮಿ ಹೆಂಗ ಅವತಾರ ಹೆಂಗ ಇರತಾನೋ, ಹಂಗ ನಮ್ಮ ಖನ್ನಡ ಬಾಸೆಯೊಳಗ ಅಸಂಖ್ಯ ಪರ್ಶಿಯನ್ ಅಥವಾ ಪಾರ್ಸಿ ಪದಾ ಅವ. ಹಂಗನ ಇದೂ ಒಂದು ಪಾರ್ಸಿ ಪದ. “ಗಂಡಸರ ಲುಂಗಿ, ಹೆಂಗಸರು ಲುಂಗಿ, ಲಂಗೋಟಿ ಇವು ಯಾವುವೂ ಕನ್ನಡದವಲ್ಲ. ಅವೆಲ್ಲವೂ ಪಾರ್ಸಿ ಅಂತ ಸಂಶೋಧಕ ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಹೇಳ್ಯಾರಲ್ಲ, ಅದು ಖರೇನ. ಕನ್ನಡದ ಕಸ್ತೂರಿ ತೇಯುವಾಗ ಕೊರಡಿಗೆ ಅಂಟಿಕೊಂಡ ಗಂಧದ ವಾಸನಿಯ ಹಂಗ ಅವು ನಮ್ಮ ಭಾಷಾ ಸೇರಿಕೊಂಡು ಅದರ ಘಮಲು ಹೆಚ್ಚು ಆಗೇದ.

ನಮ್ಮ ಕಲ್ಪನಾ ಇಲ್ಲದಂಗ ಅವು ನಮ್ಮ ಮ್ಯಾಲೆ ಪ್ರಭಾವ ಬೀರ್ಯಾವು. ಬ್ಯಾರೆ ಎಲ್ಲಾ ಹೋಗಲಿ ಬಿಡಲಿ. ನಮ್ಮ ಜೀವನಾಧಾರ ಆಗಿರೋ `ನೀರು’ ಸಹಿತ ಫಾರ್ಸಿ. ಹೋಗಲಿ ಬಿಡ್ರಿ, ಅವು ಯಾವಾವು ಶಬ್ದಾ ಅನ್ನುವುದನ್ನು ಇನ್ನೊಮ್ಮೆ ನೋಡೋಣ.

ನಾಲ್ಕನೆಯ ಪಾಯಿಂಟು – ಇತಿಹಾಸ
ಸಾವಿರಾರು ವರ್ಷಗಳಿಂದ ಗ್ರಾಮ ಪಂಚಾಯಿತಿಯೇ ಭಾರತದಲ್ಲಿ ಆಡಳಿತದ ಕೇಂದ್ರವಾಗಿತ್ತು. ಸರಿ ಸುಮಾರು ಒಂದು ಸಾವಿರ ವರ್ಷದ ಹಿಂದೆ ಘುರಿಡ್ ರಾಜ ಮನೆತನದವರು ಭಾರತದ ಆಡಳಿತ ವನ್ನು ಕೈಗೆ ತೆಗೆದುಕೊಂಡಾಗ ಪ್ರತಿ ಪ್ರದೇಶಕ್ಕೊಬ್ಬ ಸರದಾರನನ್ನು ನೇಮಿಸಿದರು. ಇವರಲ್ಲಿ ಒಬ್ಬನಾದ ಕುತುಬ್ದೀನ ಐಬಕ್‍ನ ಅಧಿಕಾರಿಗಳು ಕೈಕೊಂಡ ಆಡಳಿತ ಸುಧಾರಣೆ ಅಂಗವಾಗಿ ಹುಟ್ಟಿದ್ದವೇ ಜಿಲಾಃ ಗಳು. ಇವುಗಳನ್ನು ನಂತರ ದೆಹಲಿ ಸುಲ್ತಾನರು, ದಖನ್ನಿನ ಬಹಮನಿಗಳು, ಮುಘಲರು, ಹಾಗೂ ಹೈದರಾಬಾದು ನಿಜಾಮರು ಆಡಳಿತ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡರು. ಹೈದರಾಬಾದಿನಲ್ಲಿ, `ನಿಜಾಮರು ಜಿಲ್ಲಾಗಳಿಂದ ರಾಜಧಾನಿಯವರೆಗೆ ಕೇಳಬೇಕಾದ್ದು ಸಂಗೀತದ ದನಿಯೊಂದೇ, ಷಿಕಾಯತ್ (ದೂರು) ಇಲ್ಲಿಗೆ ಬರಬೇಕಿಲ್ಲ. ಅಲ್ಲಲ್ಲಿಯೇ ಪರಿಹರಿಸಿಕೊಳ್ಳಬಹುದು’ ಎಂದು ಹೇಳುತ್ತಿದ್ದರು ಎಂಬ ಮಾತಿದೆ.

ಬ್ರಿಟಿಷರ ಕಾಲದಲ್ಲಿ ಕಾರ್ಯಾಂಗ ಹಾಗೂ ನ್ಯಾಯಾಂಗದ ಅಧಿಕಾರಿಗಳನ್ನು ಜಿಲ್ಲೆಗಳಲ್ಲಿ ನೇಮಿಸಲಾಯಿತು. ಅವರಿಗೆ ಹೆಚ್ಚಿನ ಅಧಿಕಾರಗಳನ್ನು ಕೊಟ್ಟದಕ್ಕನ, ದೂರದ ಒಂಬತ್ತು ಸಾವಿರ ಕಿಲೋಮೀಟರು ದೂರದ ಲಂಡನ್ನಿನಿಂದ ಅವರಿಗೆ ಅಧಿಕಾರ ಚಲಾಯಿಸಲಿಕ್ಕೆ ಸಾಧ್ಯ ಆತು. ಸಿಂಗಾಪುರದ ಗಡಿಯಿಂದ ಆಫ್ಘಾನಿಸ್ತಾನದವರೆಗೂ ಹಬ್ಬಿದ್ದ ಅಂದಿನ ಭಾರತವನ್ನು ಆಳಲಿಕ್ಕೆ ಕೇವಲ ಎರಡು ಸಾವಿರ ಬಿಳಿಯ ಅಧಿಕಾರಿಗಳು ಇದ್ದರು. (ಸೇನೆ ಹಾಗೂ ಐಸಿಎಸ್ ಆಡಳಿತ ಸೇವೆ ಸೇರಿ).

ಐದನೆಯ ಪಾಯಿಂಟು- ಜಿಲ್ಲೆಯಲ್ಲಿ ಏನುಂಟು, ಏನಿಲ್ಲ?
ಜಿಲ್ಲೆ ಎನ್ನುವುದು ಒಂದು ಪ್ರದೇಶದ ಆಡಳಿತಾತ್ಮಕ ಮುಖ್ಯ ಕಚೇರಿಗಳನ್ನು ಹೊಂದಿರೋ ಊರು. ಅದರಾಗ ನಮ್ಮ ತೆರಿಗೆ ಹಣದಿಂದ ಕಟ್ಟಿದ ಇಟ್ಟಂಗಿ – ಸಿಮಿಂಟ್ ಕಟ್ಟಡಗಳಲ್ಲಿ ಇರುವ ಕಲ್ಲಿನ ಹೃದಯದ ಅಧಿಕಾರಿಗಳು ಕೂತಿರತಾರ. ಇವರು ಜನರ ಕೆಲಸ ಮಾಡೋಕಿಂತ ಜಾಸ್ತಿ ಜನರ ಪ್ರತಿನಿಧಿಗಳು ಎಂದು ಹೇಳಿಕೊಳ್ಳುವ ಪುಢಾರಿಗಳ ಕೆಲಸಾ ಮಾಡೋದ ಜಾಸ್ತಿ.

ಇಂತಿಪ್ಪ ಪುಢಾರಿಗಳು ಜನಾಸಕ್ತಿಗಾಗಿ ಹೆಚ್ಚಿನ ಜಿಲ್ಲೆ ಮಾಡಬೇಕು, ನಾನು ಇರೋ ಊರೇ ಜಿಲ್ಲೆ ಮುಖ್ಯ ಸ್ಥಾನ ಆಗಬೇಕು. ನಮ್ಮ ಮನಿ ಹಿಂದನ, ನಮ್ ಭಾವಮೈದುನನೇ ಜಿಲ್ಲಾಧಿಕಾರಿ ಆಗಬೇಕು ಅಂತ ಹೇಳಲಿಕ್ಕೆ ಹತ್ಯಾರಲ್ಲ, ಏನದರ ಮರ್ಮ? ಇದರ ಉತ್ತರ ಈ ಖೋಲಿಯೊಳಗ ಸಿಗೋದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...