Homeನ್ಯಾಯ ಪಥಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ - ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ – ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ಇವತ್ತು ಕೆಲವು ವಿಷಯಗಳನ್ನು ಪಾಯಿಂಟ್ ಶೀರ್ ಕಲಿಯೋಣು.

ಒಂದನೇ ಪಾಯಿಂಟು- ಸಂಖ್ಯೆ
ಕರ್ನಾಟಕ ರಾಜ್ಯದೊಳಗ 30 ಜಿಲ್ಲೆ ಅವ. 32 ಅಲ್ಲ. 34 ನೂ ಅಲ್ಲ. ಕೆಲವರು 34 ಏನು 43 ಮಾಡಬೇಕು ಅಂತ ಹೊಂಟಾರ. ಅದು ಬೇರೆ ವಿಷಯ.

ಎರಡನೇ ಪಾಯಿಂಟು-ಜಿಲ್ಲೆಗಳ ಪಟ್ಟಿ
ಕರ್ನಾಟಕದ ಜಿಲ್ಲೆಗಳ ಹೆಸರು ಈ ರೀತಿ ಇವೆ – ಬಾಗಲಕೋಟಿ, ಬೆಳಗಾವಿ, ವಿಜಯಪುರ (ಬಿಜಾಪುರ), ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ(ಕಾರವಾರ), ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೀದರ್, ಕಲಬುರ್ಗಿ (ಗುಲಬರ್ಗಾ), ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ (ಮಂಗಳೂರು), ಹಾಸನ, ಕೊಡಗು (ಕೂರ್ಗು, ಮಡಿಕೇರಿ, ಮರಕೇರಾ), ಮಂಡ್ಯ, ಮೈಸೂರು, ಉಡುಪಿ

ಮೂರನೇ ಪಾಯಿಂಟು – ಆ ಪದಾ ಈ ಪದಾ
‘ಜಿಲ್ಲೆ’ ಎನ್ನುವುದು ಕನ್ನಡ ಪದವಾಗಲು ಅದೇನು ಕಬ್ಬಿನ ಜಲ್ಲೆ ಅಲ್ಲ. ಅದು ಜಿಲಾಃ ಎನ್ನುವ ಪರ್ಶಿಯನ್ ಅಥವಾ ಪಾರ್ಸಿ ಪದದಿಂದ ಬಂದ ಶಬ್ದ.

ನಮಗೆ ಗೊತ್ತಿಲ್ಲದಂಗನ ನಮ್ಮ ಅರಮನೀ ಕಂಬದಾಗ ನರಸಿಂಹಸ್ವಾಮಿ ಹೆಂಗ ಅವತಾರ ಹೆಂಗ ಇರತಾನೋ, ಹಂಗ ನಮ್ಮ ಖನ್ನಡ ಬಾಸೆಯೊಳಗ ಅಸಂಖ್ಯ ಪರ್ಶಿಯನ್ ಅಥವಾ ಪಾರ್ಸಿ ಪದಾ ಅವ. ಹಂಗನ ಇದೂ ಒಂದು ಪಾರ್ಸಿ ಪದ. “ಗಂಡಸರ ಲುಂಗಿ, ಹೆಂಗಸರು ಲುಂಗಿ, ಲಂಗೋಟಿ ಇವು ಯಾವುವೂ ಕನ್ನಡದವಲ್ಲ. ಅವೆಲ್ಲವೂ ಪಾರ್ಸಿ ಅಂತ ಸಂಶೋಧಕ ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಹೇಳ್ಯಾರಲ್ಲ, ಅದು ಖರೇನ. ಕನ್ನಡದ ಕಸ್ತೂರಿ ತೇಯುವಾಗ ಕೊರಡಿಗೆ ಅಂಟಿಕೊಂಡ ಗಂಧದ ವಾಸನಿಯ ಹಂಗ ಅವು ನಮ್ಮ ಭಾಷಾ ಸೇರಿಕೊಂಡು ಅದರ ಘಮಲು ಹೆಚ್ಚು ಆಗೇದ.

ನಮ್ಮ ಕಲ್ಪನಾ ಇಲ್ಲದಂಗ ಅವು ನಮ್ಮ ಮ್ಯಾಲೆ ಪ್ರಭಾವ ಬೀರ್ಯಾವು. ಬ್ಯಾರೆ ಎಲ್ಲಾ ಹೋಗಲಿ ಬಿಡಲಿ. ನಮ್ಮ ಜೀವನಾಧಾರ ಆಗಿರೋ `ನೀರು’ ಸಹಿತ ಫಾರ್ಸಿ. ಹೋಗಲಿ ಬಿಡ್ರಿ, ಅವು ಯಾವಾವು ಶಬ್ದಾ ಅನ್ನುವುದನ್ನು ಇನ್ನೊಮ್ಮೆ ನೋಡೋಣ.

ನಾಲ್ಕನೆಯ ಪಾಯಿಂಟು – ಇತಿಹಾಸ
ಸಾವಿರಾರು ವರ್ಷಗಳಿಂದ ಗ್ರಾಮ ಪಂಚಾಯಿತಿಯೇ ಭಾರತದಲ್ಲಿ ಆಡಳಿತದ ಕೇಂದ್ರವಾಗಿತ್ತು. ಸರಿ ಸುಮಾರು ಒಂದು ಸಾವಿರ ವರ್ಷದ ಹಿಂದೆ ಘುರಿಡ್ ರಾಜ ಮನೆತನದವರು ಭಾರತದ ಆಡಳಿತ ವನ್ನು ಕೈಗೆ ತೆಗೆದುಕೊಂಡಾಗ ಪ್ರತಿ ಪ್ರದೇಶಕ್ಕೊಬ್ಬ ಸರದಾರನನ್ನು ನೇಮಿಸಿದರು. ಇವರಲ್ಲಿ ಒಬ್ಬನಾದ ಕುತುಬ್ದೀನ ಐಬಕ್‍ನ ಅಧಿಕಾರಿಗಳು ಕೈಕೊಂಡ ಆಡಳಿತ ಸುಧಾರಣೆ ಅಂಗವಾಗಿ ಹುಟ್ಟಿದ್ದವೇ ಜಿಲಾಃ ಗಳು. ಇವುಗಳನ್ನು ನಂತರ ದೆಹಲಿ ಸುಲ್ತಾನರು, ದಖನ್ನಿನ ಬಹಮನಿಗಳು, ಮುಘಲರು, ಹಾಗೂ ಹೈದರಾಬಾದು ನಿಜಾಮರು ಆಡಳಿತ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡರು. ಹೈದರಾಬಾದಿನಲ್ಲಿ, `ನಿಜಾಮರು ಜಿಲ್ಲಾಗಳಿಂದ ರಾಜಧಾನಿಯವರೆಗೆ ಕೇಳಬೇಕಾದ್ದು ಸಂಗೀತದ ದನಿಯೊಂದೇ, ಷಿಕಾಯತ್ (ದೂರು) ಇಲ್ಲಿಗೆ ಬರಬೇಕಿಲ್ಲ. ಅಲ್ಲಲ್ಲಿಯೇ ಪರಿಹರಿಸಿಕೊಳ್ಳಬಹುದು’ ಎಂದು ಹೇಳುತ್ತಿದ್ದರು ಎಂಬ ಮಾತಿದೆ.

ಬ್ರಿಟಿಷರ ಕಾಲದಲ್ಲಿ ಕಾರ್ಯಾಂಗ ಹಾಗೂ ನ್ಯಾಯಾಂಗದ ಅಧಿಕಾರಿಗಳನ್ನು ಜಿಲ್ಲೆಗಳಲ್ಲಿ ನೇಮಿಸಲಾಯಿತು. ಅವರಿಗೆ ಹೆಚ್ಚಿನ ಅಧಿಕಾರಗಳನ್ನು ಕೊಟ್ಟದಕ್ಕನ, ದೂರದ ಒಂಬತ್ತು ಸಾವಿರ ಕಿಲೋಮೀಟರು ದೂರದ ಲಂಡನ್ನಿನಿಂದ ಅವರಿಗೆ ಅಧಿಕಾರ ಚಲಾಯಿಸಲಿಕ್ಕೆ ಸಾಧ್ಯ ಆತು. ಸಿಂಗಾಪುರದ ಗಡಿಯಿಂದ ಆಫ್ಘಾನಿಸ್ತಾನದವರೆಗೂ ಹಬ್ಬಿದ್ದ ಅಂದಿನ ಭಾರತವನ್ನು ಆಳಲಿಕ್ಕೆ ಕೇವಲ ಎರಡು ಸಾವಿರ ಬಿಳಿಯ ಅಧಿಕಾರಿಗಳು ಇದ್ದರು. (ಸೇನೆ ಹಾಗೂ ಐಸಿಎಸ್ ಆಡಳಿತ ಸೇವೆ ಸೇರಿ).

ಐದನೆಯ ಪಾಯಿಂಟು- ಜಿಲ್ಲೆಯಲ್ಲಿ ಏನುಂಟು, ಏನಿಲ್ಲ?
ಜಿಲ್ಲೆ ಎನ್ನುವುದು ಒಂದು ಪ್ರದೇಶದ ಆಡಳಿತಾತ್ಮಕ ಮುಖ್ಯ ಕಚೇರಿಗಳನ್ನು ಹೊಂದಿರೋ ಊರು. ಅದರಾಗ ನಮ್ಮ ತೆರಿಗೆ ಹಣದಿಂದ ಕಟ್ಟಿದ ಇಟ್ಟಂಗಿ – ಸಿಮಿಂಟ್ ಕಟ್ಟಡಗಳಲ್ಲಿ ಇರುವ ಕಲ್ಲಿನ ಹೃದಯದ ಅಧಿಕಾರಿಗಳು ಕೂತಿರತಾರ. ಇವರು ಜನರ ಕೆಲಸ ಮಾಡೋಕಿಂತ ಜಾಸ್ತಿ ಜನರ ಪ್ರತಿನಿಧಿಗಳು ಎಂದು ಹೇಳಿಕೊಳ್ಳುವ ಪುಢಾರಿಗಳ ಕೆಲಸಾ ಮಾಡೋದ ಜಾಸ್ತಿ.

ಇಂತಿಪ್ಪ ಪುಢಾರಿಗಳು ಜನಾಸಕ್ತಿಗಾಗಿ ಹೆಚ್ಚಿನ ಜಿಲ್ಲೆ ಮಾಡಬೇಕು, ನಾನು ಇರೋ ಊರೇ ಜಿಲ್ಲೆ ಮುಖ್ಯ ಸ್ಥಾನ ಆಗಬೇಕು. ನಮ್ಮ ಮನಿ ಹಿಂದನ, ನಮ್ ಭಾವಮೈದುನನೇ ಜಿಲ್ಲಾಧಿಕಾರಿ ಆಗಬೇಕು ಅಂತ ಹೇಳಲಿಕ್ಕೆ ಹತ್ಯಾರಲ್ಲ, ಏನದರ ಮರ್ಮ? ಇದರ ಉತ್ತರ ಈ ಖೋಲಿಯೊಳಗ ಸಿಗೋದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...