Homeನ್ಯಾಯ ಪಥಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ - ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ – ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ಇವತ್ತು ಕೆಲವು ವಿಷಯಗಳನ್ನು ಪಾಯಿಂಟ್ ಶೀರ್ ಕಲಿಯೋಣು.

ಒಂದನೇ ಪಾಯಿಂಟು- ಸಂಖ್ಯೆ
ಕರ್ನಾಟಕ ರಾಜ್ಯದೊಳಗ 30 ಜಿಲ್ಲೆ ಅವ. 32 ಅಲ್ಲ. 34 ನೂ ಅಲ್ಲ. ಕೆಲವರು 34 ಏನು 43 ಮಾಡಬೇಕು ಅಂತ ಹೊಂಟಾರ. ಅದು ಬೇರೆ ವಿಷಯ.

ಎರಡನೇ ಪಾಯಿಂಟು-ಜಿಲ್ಲೆಗಳ ಪಟ್ಟಿ
ಕರ್ನಾಟಕದ ಜಿಲ್ಲೆಗಳ ಹೆಸರು ಈ ರೀತಿ ಇವೆ – ಬಾಗಲಕೋಟಿ, ಬೆಳಗಾವಿ, ವಿಜಯಪುರ (ಬಿಜಾಪುರ), ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ(ಕಾರವಾರ), ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೀದರ್, ಕಲಬುರ್ಗಿ (ಗುಲಬರ್ಗಾ), ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ (ಮಂಗಳೂರು), ಹಾಸನ, ಕೊಡಗು (ಕೂರ್ಗು, ಮಡಿಕೇರಿ, ಮರಕೇರಾ), ಮಂಡ್ಯ, ಮೈಸೂರು, ಉಡುಪಿ

ಮೂರನೇ ಪಾಯಿಂಟು – ಆ ಪದಾ ಈ ಪದಾ
‘ಜಿಲ್ಲೆ’ ಎನ್ನುವುದು ಕನ್ನಡ ಪದವಾಗಲು ಅದೇನು ಕಬ್ಬಿನ ಜಲ್ಲೆ ಅಲ್ಲ. ಅದು ಜಿಲಾಃ ಎನ್ನುವ ಪರ್ಶಿಯನ್ ಅಥವಾ ಪಾರ್ಸಿ ಪದದಿಂದ ಬಂದ ಶಬ್ದ.

ನಮಗೆ ಗೊತ್ತಿಲ್ಲದಂಗನ ನಮ್ಮ ಅರಮನೀ ಕಂಬದಾಗ ನರಸಿಂಹಸ್ವಾಮಿ ಹೆಂಗ ಅವತಾರ ಹೆಂಗ ಇರತಾನೋ, ಹಂಗ ನಮ್ಮ ಖನ್ನಡ ಬಾಸೆಯೊಳಗ ಅಸಂಖ್ಯ ಪರ್ಶಿಯನ್ ಅಥವಾ ಪಾರ್ಸಿ ಪದಾ ಅವ. ಹಂಗನ ಇದೂ ಒಂದು ಪಾರ್ಸಿ ಪದ. “ಗಂಡಸರ ಲುಂಗಿ, ಹೆಂಗಸರು ಲುಂಗಿ, ಲಂಗೋಟಿ ಇವು ಯಾವುವೂ ಕನ್ನಡದವಲ್ಲ. ಅವೆಲ್ಲವೂ ಪಾರ್ಸಿ ಅಂತ ಸಂಶೋಧಕ ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಹೇಳ್ಯಾರಲ್ಲ, ಅದು ಖರೇನ. ಕನ್ನಡದ ಕಸ್ತೂರಿ ತೇಯುವಾಗ ಕೊರಡಿಗೆ ಅಂಟಿಕೊಂಡ ಗಂಧದ ವಾಸನಿಯ ಹಂಗ ಅವು ನಮ್ಮ ಭಾಷಾ ಸೇರಿಕೊಂಡು ಅದರ ಘಮಲು ಹೆಚ್ಚು ಆಗೇದ.

ನಮ್ಮ ಕಲ್ಪನಾ ಇಲ್ಲದಂಗ ಅವು ನಮ್ಮ ಮ್ಯಾಲೆ ಪ್ರಭಾವ ಬೀರ್ಯಾವು. ಬ್ಯಾರೆ ಎಲ್ಲಾ ಹೋಗಲಿ ಬಿಡಲಿ. ನಮ್ಮ ಜೀವನಾಧಾರ ಆಗಿರೋ `ನೀರು’ ಸಹಿತ ಫಾರ್ಸಿ. ಹೋಗಲಿ ಬಿಡ್ರಿ, ಅವು ಯಾವಾವು ಶಬ್ದಾ ಅನ್ನುವುದನ್ನು ಇನ್ನೊಮ್ಮೆ ನೋಡೋಣ.

ನಾಲ್ಕನೆಯ ಪಾಯಿಂಟು – ಇತಿಹಾಸ
ಸಾವಿರಾರು ವರ್ಷಗಳಿಂದ ಗ್ರಾಮ ಪಂಚಾಯಿತಿಯೇ ಭಾರತದಲ್ಲಿ ಆಡಳಿತದ ಕೇಂದ್ರವಾಗಿತ್ತು. ಸರಿ ಸುಮಾರು ಒಂದು ಸಾವಿರ ವರ್ಷದ ಹಿಂದೆ ಘುರಿಡ್ ರಾಜ ಮನೆತನದವರು ಭಾರತದ ಆಡಳಿತ ವನ್ನು ಕೈಗೆ ತೆಗೆದುಕೊಂಡಾಗ ಪ್ರತಿ ಪ್ರದೇಶಕ್ಕೊಬ್ಬ ಸರದಾರನನ್ನು ನೇಮಿಸಿದರು. ಇವರಲ್ಲಿ ಒಬ್ಬನಾದ ಕುತುಬ್ದೀನ ಐಬಕ್‍ನ ಅಧಿಕಾರಿಗಳು ಕೈಕೊಂಡ ಆಡಳಿತ ಸುಧಾರಣೆ ಅಂಗವಾಗಿ ಹುಟ್ಟಿದ್ದವೇ ಜಿಲಾಃ ಗಳು. ಇವುಗಳನ್ನು ನಂತರ ದೆಹಲಿ ಸುಲ್ತಾನರು, ದಖನ್ನಿನ ಬಹಮನಿಗಳು, ಮುಘಲರು, ಹಾಗೂ ಹೈದರಾಬಾದು ನಿಜಾಮರು ಆಡಳಿತ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡರು. ಹೈದರಾಬಾದಿನಲ್ಲಿ, `ನಿಜಾಮರು ಜಿಲ್ಲಾಗಳಿಂದ ರಾಜಧಾನಿಯವರೆಗೆ ಕೇಳಬೇಕಾದ್ದು ಸಂಗೀತದ ದನಿಯೊಂದೇ, ಷಿಕಾಯತ್ (ದೂರು) ಇಲ್ಲಿಗೆ ಬರಬೇಕಿಲ್ಲ. ಅಲ್ಲಲ್ಲಿಯೇ ಪರಿಹರಿಸಿಕೊಳ್ಳಬಹುದು’ ಎಂದು ಹೇಳುತ್ತಿದ್ದರು ಎಂಬ ಮಾತಿದೆ.

ಬ್ರಿಟಿಷರ ಕಾಲದಲ್ಲಿ ಕಾರ್ಯಾಂಗ ಹಾಗೂ ನ್ಯಾಯಾಂಗದ ಅಧಿಕಾರಿಗಳನ್ನು ಜಿಲ್ಲೆಗಳಲ್ಲಿ ನೇಮಿಸಲಾಯಿತು. ಅವರಿಗೆ ಹೆಚ್ಚಿನ ಅಧಿಕಾರಗಳನ್ನು ಕೊಟ್ಟದಕ್ಕನ, ದೂರದ ಒಂಬತ್ತು ಸಾವಿರ ಕಿಲೋಮೀಟರು ದೂರದ ಲಂಡನ್ನಿನಿಂದ ಅವರಿಗೆ ಅಧಿಕಾರ ಚಲಾಯಿಸಲಿಕ್ಕೆ ಸಾಧ್ಯ ಆತು. ಸಿಂಗಾಪುರದ ಗಡಿಯಿಂದ ಆಫ್ಘಾನಿಸ್ತಾನದವರೆಗೂ ಹಬ್ಬಿದ್ದ ಅಂದಿನ ಭಾರತವನ್ನು ಆಳಲಿಕ್ಕೆ ಕೇವಲ ಎರಡು ಸಾವಿರ ಬಿಳಿಯ ಅಧಿಕಾರಿಗಳು ಇದ್ದರು. (ಸೇನೆ ಹಾಗೂ ಐಸಿಎಸ್ ಆಡಳಿತ ಸೇವೆ ಸೇರಿ).

ಐದನೆಯ ಪಾಯಿಂಟು- ಜಿಲ್ಲೆಯಲ್ಲಿ ಏನುಂಟು, ಏನಿಲ್ಲ?
ಜಿಲ್ಲೆ ಎನ್ನುವುದು ಒಂದು ಪ್ರದೇಶದ ಆಡಳಿತಾತ್ಮಕ ಮುಖ್ಯ ಕಚೇರಿಗಳನ್ನು ಹೊಂದಿರೋ ಊರು. ಅದರಾಗ ನಮ್ಮ ತೆರಿಗೆ ಹಣದಿಂದ ಕಟ್ಟಿದ ಇಟ್ಟಂಗಿ – ಸಿಮಿಂಟ್ ಕಟ್ಟಡಗಳಲ್ಲಿ ಇರುವ ಕಲ್ಲಿನ ಹೃದಯದ ಅಧಿಕಾರಿಗಳು ಕೂತಿರತಾರ. ಇವರು ಜನರ ಕೆಲಸ ಮಾಡೋಕಿಂತ ಜಾಸ್ತಿ ಜನರ ಪ್ರತಿನಿಧಿಗಳು ಎಂದು ಹೇಳಿಕೊಳ್ಳುವ ಪುಢಾರಿಗಳ ಕೆಲಸಾ ಮಾಡೋದ ಜಾಸ್ತಿ.

ಇಂತಿಪ್ಪ ಪುಢಾರಿಗಳು ಜನಾಸಕ್ತಿಗಾಗಿ ಹೆಚ್ಚಿನ ಜಿಲ್ಲೆ ಮಾಡಬೇಕು, ನಾನು ಇರೋ ಊರೇ ಜಿಲ್ಲೆ ಮುಖ್ಯ ಸ್ಥಾನ ಆಗಬೇಕು. ನಮ್ಮ ಮನಿ ಹಿಂದನ, ನಮ್ ಭಾವಮೈದುನನೇ ಜಿಲ್ಲಾಧಿಕಾರಿ ಆಗಬೇಕು ಅಂತ ಹೇಳಲಿಕ್ಕೆ ಹತ್ಯಾರಲ್ಲ, ಏನದರ ಮರ್ಮ? ಇದರ ಉತ್ತರ ಈ ಖೋಲಿಯೊಳಗ ಸಿಗೋದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...