Homeನ್ಯಾಯ ಪಥಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ - ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳು? ಜಿಲ್ಲೆ – ಪದಮೂಲ, ಇತಿಹಾಸ : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ಇವತ್ತು ಕೆಲವು ವಿಷಯಗಳನ್ನು ಪಾಯಿಂಟ್ ಶೀರ್ ಕಲಿಯೋಣು.

ಒಂದನೇ ಪಾಯಿಂಟು- ಸಂಖ್ಯೆ
ಕರ್ನಾಟಕ ರಾಜ್ಯದೊಳಗ 30 ಜಿಲ್ಲೆ ಅವ. 32 ಅಲ್ಲ. 34 ನೂ ಅಲ್ಲ. ಕೆಲವರು 34 ಏನು 43 ಮಾಡಬೇಕು ಅಂತ ಹೊಂಟಾರ. ಅದು ಬೇರೆ ವಿಷಯ.

ಎರಡನೇ ಪಾಯಿಂಟು-ಜಿಲ್ಲೆಗಳ ಪಟ್ಟಿ
ಕರ್ನಾಟಕದ ಜಿಲ್ಲೆಗಳ ಹೆಸರು ಈ ರೀತಿ ಇವೆ – ಬಾಗಲಕೋಟಿ, ಬೆಳಗಾವಿ, ವಿಜಯಪುರ (ಬಿಜಾಪುರ), ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ(ಕಾರವಾರ), ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೀದರ್, ಕಲಬುರ್ಗಿ (ಗುಲಬರ್ಗಾ), ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ (ಮಂಗಳೂರು), ಹಾಸನ, ಕೊಡಗು (ಕೂರ್ಗು, ಮಡಿಕೇರಿ, ಮರಕೇರಾ), ಮಂಡ್ಯ, ಮೈಸೂರು, ಉಡುಪಿ

ಮೂರನೇ ಪಾಯಿಂಟು – ಆ ಪದಾ ಈ ಪದಾ
‘ಜಿಲ್ಲೆ’ ಎನ್ನುವುದು ಕನ್ನಡ ಪದವಾಗಲು ಅದೇನು ಕಬ್ಬಿನ ಜಲ್ಲೆ ಅಲ್ಲ. ಅದು ಜಿಲಾಃ ಎನ್ನುವ ಪರ್ಶಿಯನ್ ಅಥವಾ ಪಾರ್ಸಿ ಪದದಿಂದ ಬಂದ ಶಬ್ದ.

ನಮಗೆ ಗೊತ್ತಿಲ್ಲದಂಗನ ನಮ್ಮ ಅರಮನೀ ಕಂಬದಾಗ ನರಸಿಂಹಸ್ವಾಮಿ ಹೆಂಗ ಅವತಾರ ಹೆಂಗ ಇರತಾನೋ, ಹಂಗ ನಮ್ಮ ಖನ್ನಡ ಬಾಸೆಯೊಳಗ ಅಸಂಖ್ಯ ಪರ್ಶಿಯನ್ ಅಥವಾ ಪಾರ್ಸಿ ಪದಾ ಅವ. ಹಂಗನ ಇದೂ ಒಂದು ಪಾರ್ಸಿ ಪದ. “ಗಂಡಸರ ಲುಂಗಿ, ಹೆಂಗಸರು ಲುಂಗಿ, ಲಂಗೋಟಿ ಇವು ಯಾವುವೂ ಕನ್ನಡದವಲ್ಲ. ಅವೆಲ್ಲವೂ ಪಾರ್ಸಿ ಅಂತ ಸಂಶೋಧಕ ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಹೇಳ್ಯಾರಲ್ಲ, ಅದು ಖರೇನ. ಕನ್ನಡದ ಕಸ್ತೂರಿ ತೇಯುವಾಗ ಕೊರಡಿಗೆ ಅಂಟಿಕೊಂಡ ಗಂಧದ ವಾಸನಿಯ ಹಂಗ ಅವು ನಮ್ಮ ಭಾಷಾ ಸೇರಿಕೊಂಡು ಅದರ ಘಮಲು ಹೆಚ್ಚು ಆಗೇದ.

ನಮ್ಮ ಕಲ್ಪನಾ ಇಲ್ಲದಂಗ ಅವು ನಮ್ಮ ಮ್ಯಾಲೆ ಪ್ರಭಾವ ಬೀರ್ಯಾವು. ಬ್ಯಾರೆ ಎಲ್ಲಾ ಹೋಗಲಿ ಬಿಡಲಿ. ನಮ್ಮ ಜೀವನಾಧಾರ ಆಗಿರೋ `ನೀರು’ ಸಹಿತ ಫಾರ್ಸಿ. ಹೋಗಲಿ ಬಿಡ್ರಿ, ಅವು ಯಾವಾವು ಶಬ್ದಾ ಅನ್ನುವುದನ್ನು ಇನ್ನೊಮ್ಮೆ ನೋಡೋಣ.

ನಾಲ್ಕನೆಯ ಪಾಯಿಂಟು – ಇತಿಹಾಸ
ಸಾವಿರಾರು ವರ್ಷಗಳಿಂದ ಗ್ರಾಮ ಪಂಚಾಯಿತಿಯೇ ಭಾರತದಲ್ಲಿ ಆಡಳಿತದ ಕೇಂದ್ರವಾಗಿತ್ತು. ಸರಿ ಸುಮಾರು ಒಂದು ಸಾವಿರ ವರ್ಷದ ಹಿಂದೆ ಘುರಿಡ್ ರಾಜ ಮನೆತನದವರು ಭಾರತದ ಆಡಳಿತ ವನ್ನು ಕೈಗೆ ತೆಗೆದುಕೊಂಡಾಗ ಪ್ರತಿ ಪ್ರದೇಶಕ್ಕೊಬ್ಬ ಸರದಾರನನ್ನು ನೇಮಿಸಿದರು. ಇವರಲ್ಲಿ ಒಬ್ಬನಾದ ಕುತುಬ್ದೀನ ಐಬಕ್‍ನ ಅಧಿಕಾರಿಗಳು ಕೈಕೊಂಡ ಆಡಳಿತ ಸುಧಾರಣೆ ಅಂಗವಾಗಿ ಹುಟ್ಟಿದ್ದವೇ ಜಿಲಾಃ ಗಳು. ಇವುಗಳನ್ನು ನಂತರ ದೆಹಲಿ ಸುಲ್ತಾನರು, ದಖನ್ನಿನ ಬಹಮನಿಗಳು, ಮುಘಲರು, ಹಾಗೂ ಹೈದರಾಬಾದು ನಿಜಾಮರು ಆಡಳಿತ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡರು. ಹೈದರಾಬಾದಿನಲ್ಲಿ, `ನಿಜಾಮರು ಜಿಲ್ಲಾಗಳಿಂದ ರಾಜಧಾನಿಯವರೆಗೆ ಕೇಳಬೇಕಾದ್ದು ಸಂಗೀತದ ದನಿಯೊಂದೇ, ಷಿಕಾಯತ್ (ದೂರು) ಇಲ್ಲಿಗೆ ಬರಬೇಕಿಲ್ಲ. ಅಲ್ಲಲ್ಲಿಯೇ ಪರಿಹರಿಸಿಕೊಳ್ಳಬಹುದು’ ಎಂದು ಹೇಳುತ್ತಿದ್ದರು ಎಂಬ ಮಾತಿದೆ.

ಬ್ರಿಟಿಷರ ಕಾಲದಲ್ಲಿ ಕಾರ್ಯಾಂಗ ಹಾಗೂ ನ್ಯಾಯಾಂಗದ ಅಧಿಕಾರಿಗಳನ್ನು ಜಿಲ್ಲೆಗಳಲ್ಲಿ ನೇಮಿಸಲಾಯಿತು. ಅವರಿಗೆ ಹೆಚ್ಚಿನ ಅಧಿಕಾರಗಳನ್ನು ಕೊಟ್ಟದಕ್ಕನ, ದೂರದ ಒಂಬತ್ತು ಸಾವಿರ ಕಿಲೋಮೀಟರು ದೂರದ ಲಂಡನ್ನಿನಿಂದ ಅವರಿಗೆ ಅಧಿಕಾರ ಚಲಾಯಿಸಲಿಕ್ಕೆ ಸಾಧ್ಯ ಆತು. ಸಿಂಗಾಪುರದ ಗಡಿಯಿಂದ ಆಫ್ಘಾನಿಸ್ತಾನದವರೆಗೂ ಹಬ್ಬಿದ್ದ ಅಂದಿನ ಭಾರತವನ್ನು ಆಳಲಿಕ್ಕೆ ಕೇವಲ ಎರಡು ಸಾವಿರ ಬಿಳಿಯ ಅಧಿಕಾರಿಗಳು ಇದ್ದರು. (ಸೇನೆ ಹಾಗೂ ಐಸಿಎಸ್ ಆಡಳಿತ ಸೇವೆ ಸೇರಿ).

ಐದನೆಯ ಪಾಯಿಂಟು- ಜಿಲ್ಲೆಯಲ್ಲಿ ಏನುಂಟು, ಏನಿಲ್ಲ?
ಜಿಲ್ಲೆ ಎನ್ನುವುದು ಒಂದು ಪ್ರದೇಶದ ಆಡಳಿತಾತ್ಮಕ ಮುಖ್ಯ ಕಚೇರಿಗಳನ್ನು ಹೊಂದಿರೋ ಊರು. ಅದರಾಗ ನಮ್ಮ ತೆರಿಗೆ ಹಣದಿಂದ ಕಟ್ಟಿದ ಇಟ್ಟಂಗಿ – ಸಿಮಿಂಟ್ ಕಟ್ಟಡಗಳಲ್ಲಿ ಇರುವ ಕಲ್ಲಿನ ಹೃದಯದ ಅಧಿಕಾರಿಗಳು ಕೂತಿರತಾರ. ಇವರು ಜನರ ಕೆಲಸ ಮಾಡೋಕಿಂತ ಜಾಸ್ತಿ ಜನರ ಪ್ರತಿನಿಧಿಗಳು ಎಂದು ಹೇಳಿಕೊಳ್ಳುವ ಪುಢಾರಿಗಳ ಕೆಲಸಾ ಮಾಡೋದ ಜಾಸ್ತಿ.

ಇಂತಿಪ್ಪ ಪುಢಾರಿಗಳು ಜನಾಸಕ್ತಿಗಾಗಿ ಹೆಚ್ಚಿನ ಜಿಲ್ಲೆ ಮಾಡಬೇಕು, ನಾನು ಇರೋ ಊರೇ ಜಿಲ್ಲೆ ಮುಖ್ಯ ಸ್ಥಾನ ಆಗಬೇಕು. ನಮ್ಮ ಮನಿ ಹಿಂದನ, ನಮ್ ಭಾವಮೈದುನನೇ ಜಿಲ್ಲಾಧಿಕಾರಿ ಆಗಬೇಕು ಅಂತ ಹೇಳಲಿಕ್ಕೆ ಹತ್ಯಾರಲ್ಲ, ಏನದರ ಮರ್ಮ? ಇದರ ಉತ್ತರ ಈ ಖೋಲಿಯೊಳಗ ಸಿಗೋದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...