Homeಮುಖಪುಟಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

ಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

- Advertisement -
- Advertisement -

ಶಾಸಕರ ಸ್ಥಳೀಯ ಪ್ರದೇಶಾಭಿವೃದ‍್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು, ತೆರಿಗೆ ಸಂಗ್ರಹ ಇಳಿಯುತ್ತಿದೆ, ಸಾಲದ ಹೊರೆ ಹೆಚ್ಚಾಗುತ್ತಿದೆ, ಕೇಂದ್ರ ಅನುದಾನದ ಬಾಕಿ ಏರುತ್ತಿದೆ. ಶೀಘ್ರದಲ್ಲಿ ನೌಕರರ ಸಂಬಳಕ್ಕೂ ತತ್ವಾರ ಬರಲಿದೆ. ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಆಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹಣ ಇಲ್ಲದೆ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ, ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಓಡಿಹೋಗುತ್ತಿದ್ದಾರೆ, ಖಾಲಿ ಖಜಾನೆ ತುಂಬಲು ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡಲು ಪೀಡಿಸುತ್ತಿದ್ದಾರೆ. ಸುಭೀಕ್ಷೆಯಿಂದ ಇದ್ದ ರಾಜ್ಯ ಅರಾಜಕತೆಯತ್ತ ಭರದಿಂದ ಸಾಗಿದೆ. ಕೇಂದ್ರ ಪ್ರಾಯೋಜಕತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ, ತೆರಿಗೆ ಪಾಲು ಬರ್ತಿಲ್ಲ, ಜಿಎಸ್‌ಟಿ ಪರಿಹಾರ ಕೊಡ್ತಿಲ್ಲ. ಇತ್ತ ಸಂಪುಟ ವಿಸ್ತರಣೆಗೂ ಒಪ್ಪಿಗೆ ಕೊಡ್ತಿಲ್ಲ.‌ ಕರ್ನಾಟಕದ ಬಗ್ಗೆ ಮೋದಿ-ಶಾ ಜೋಡಿ‌ಗೆ ಯಾಕಿಷ್ಟು ಸಿಟ್ಟು ಎಂದು ಸಿದ್ದರಾಮಯ್ಯ ಸಾಲು ಸಾಲು ಸಮಸ್ಯೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಸಂಪುಟ ವಿಸ್ತರಣೆ, ಅತೃಪ್ತರ ಓಲೈಕೆ, ಹೈಕಮಾಂಡ್‌ಗೆ ಮೊರೆ, ಭಿನ್ನಮತೀಯರಿಗೆ ಸಮಾಧಾನ ಇವಿಷ್ಟೇ ಕೆಲಸದಲ್ಲಿ ಯಡಿಯೂರಪ್ಪ ಅವರು ಆರು ತಿಂಗಳು ಕಳೆದಿದ್ದಾರೆ. ಆಡಳಿತ ಕೈಗೆ ಸಿಗುತ್ತಿಲ್ಲ, ಹೈಕಮಾಂಡ್ ಕ್ಯಾರೇ ಅನ್ತಿಲ್ಲ. ಯಡಿಯೂರಪ್ಪ ಮುಳುಗುತ್ತಿದ್ದಾರೆ, ಜೊತೆಗೆ ರಾಜ್ಯವನ್ನೂ ಮುಳುಗಿಸಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇಪ್ಪತ್ತು ವರ್ಷಗಳಲ್ಲಿಯೇ ಮೊದಲ ಬಾರಿ ಕೇಂದ್ರ ಸರ್ಕಾರದ ವರಮಾನ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿಯೂ ಅದೇ ಸ್ಥಿತಿ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹತಾಶರನ್ನಾಗಿ‌ಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮೋದಿ-ಶಾ ಜೋಡಿ ಅವರನ್ನು ದಂಡಿಸುತ್ತಿದೆಯೇ? ಬಿಜೆಪಿಯ ಆಂತರಿಕ ಕಲಹಕ್ಕೆ ರಾಜ್ಯದ ಜನ ಬಲಿಪಶುಗಳಾಗುತ್ತಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ಅಧಿಕಾರಿಗಳು ಬಜೆಟ್ ಮಾಡುವುದು ಹೇಗೆ ಎಂದು ತಲೆಮೇಲೆ ಕೈಯಿಟ್ಟು ಕೂತಿದ್ದಾರೆ ಎಂದು ಸಿದ್ದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರೇ, ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಹಿತ ಬಲಿ‌ಕೊಡಬೇಡಿ. ತಮ್ಮ ವೈಫಲ್ಯದಿಂದಾಗಿ ದೇಶವನ್ನು ಕಬರ್ ಸ್ತಾನ ಮಾಡಲು ಹೊರಟಿರುವ ನರೇಂದ್ರ ಮೋದಿ ಅವರು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಪಾಕಿಸ್ತಾನದ ಜಪ ಮಾಡುತ್ತಿದ್ದಾರೆ. ನಾಯಕನ ಮೇಲ್ಪಂಕ್ತಿಯನ್ನು ಅನುಸರಿಸುತ್ತಿರುವ ರಾಜ್ಯದ ನಾಯಕರು ತಲೆಕೆಟ್ಟವರಂತೆ ಕೋಮುದ್ವೇಷಕ್ಕೆ ಪ್ರಚೋದನೆ ನೀಡತೊಡಗಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...