Homeಮುಖಪುಟಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

ಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

- Advertisement -
- Advertisement -

ಶಾಸಕರ ಸ್ಥಳೀಯ ಪ್ರದೇಶಾಭಿವೃದ‍್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು, ತೆರಿಗೆ ಸಂಗ್ರಹ ಇಳಿಯುತ್ತಿದೆ, ಸಾಲದ ಹೊರೆ ಹೆಚ್ಚಾಗುತ್ತಿದೆ, ಕೇಂದ್ರ ಅನುದಾನದ ಬಾಕಿ ಏರುತ್ತಿದೆ. ಶೀಘ್ರದಲ್ಲಿ ನೌಕರರ ಸಂಬಳಕ್ಕೂ ತತ್ವಾರ ಬರಲಿದೆ. ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಆಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹಣ ಇಲ್ಲದೆ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ, ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಓಡಿಹೋಗುತ್ತಿದ್ದಾರೆ, ಖಾಲಿ ಖಜಾನೆ ತುಂಬಲು ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡಲು ಪೀಡಿಸುತ್ತಿದ್ದಾರೆ. ಸುಭೀಕ್ಷೆಯಿಂದ ಇದ್ದ ರಾಜ್ಯ ಅರಾಜಕತೆಯತ್ತ ಭರದಿಂದ ಸಾಗಿದೆ. ಕೇಂದ್ರ ಪ್ರಾಯೋಜಕತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ, ತೆರಿಗೆ ಪಾಲು ಬರ್ತಿಲ್ಲ, ಜಿಎಸ್‌ಟಿ ಪರಿಹಾರ ಕೊಡ್ತಿಲ್ಲ. ಇತ್ತ ಸಂಪುಟ ವಿಸ್ತರಣೆಗೂ ಒಪ್ಪಿಗೆ ಕೊಡ್ತಿಲ್ಲ.‌ ಕರ್ನಾಟಕದ ಬಗ್ಗೆ ಮೋದಿ-ಶಾ ಜೋಡಿ‌ಗೆ ಯಾಕಿಷ್ಟು ಸಿಟ್ಟು ಎಂದು ಸಿದ್ದರಾಮಯ್ಯ ಸಾಲು ಸಾಲು ಸಮಸ್ಯೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಸಂಪುಟ ವಿಸ್ತರಣೆ, ಅತೃಪ್ತರ ಓಲೈಕೆ, ಹೈಕಮಾಂಡ್‌ಗೆ ಮೊರೆ, ಭಿನ್ನಮತೀಯರಿಗೆ ಸಮಾಧಾನ ಇವಿಷ್ಟೇ ಕೆಲಸದಲ್ಲಿ ಯಡಿಯೂರಪ್ಪ ಅವರು ಆರು ತಿಂಗಳು ಕಳೆದಿದ್ದಾರೆ. ಆಡಳಿತ ಕೈಗೆ ಸಿಗುತ್ತಿಲ್ಲ, ಹೈಕಮಾಂಡ್ ಕ್ಯಾರೇ ಅನ್ತಿಲ್ಲ. ಯಡಿಯೂರಪ್ಪ ಮುಳುಗುತ್ತಿದ್ದಾರೆ, ಜೊತೆಗೆ ರಾಜ್ಯವನ್ನೂ ಮುಳುಗಿಸಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇಪ್ಪತ್ತು ವರ್ಷಗಳಲ್ಲಿಯೇ ಮೊದಲ ಬಾರಿ ಕೇಂದ್ರ ಸರ್ಕಾರದ ವರಮಾನ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿಯೂ ಅದೇ ಸ್ಥಿತಿ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹತಾಶರನ್ನಾಗಿ‌ಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮೋದಿ-ಶಾ ಜೋಡಿ ಅವರನ್ನು ದಂಡಿಸುತ್ತಿದೆಯೇ? ಬಿಜೆಪಿಯ ಆಂತರಿಕ ಕಲಹಕ್ಕೆ ರಾಜ್ಯದ ಜನ ಬಲಿಪಶುಗಳಾಗುತ್ತಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ಅಧಿಕಾರಿಗಳು ಬಜೆಟ್ ಮಾಡುವುದು ಹೇಗೆ ಎಂದು ತಲೆಮೇಲೆ ಕೈಯಿಟ್ಟು ಕೂತಿದ್ದಾರೆ ಎಂದು ಸಿದ್ದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರೇ, ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಹಿತ ಬಲಿ‌ಕೊಡಬೇಡಿ. ತಮ್ಮ ವೈಫಲ್ಯದಿಂದಾಗಿ ದೇಶವನ್ನು ಕಬರ್ ಸ್ತಾನ ಮಾಡಲು ಹೊರಟಿರುವ ನರೇಂದ್ರ ಮೋದಿ ಅವರು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಪಾಕಿಸ್ತಾನದ ಜಪ ಮಾಡುತ್ತಿದ್ದಾರೆ. ನಾಯಕನ ಮೇಲ್ಪಂಕ್ತಿಯನ್ನು ಅನುಸರಿಸುತ್ತಿರುವ ರಾಜ್ಯದ ನಾಯಕರು ತಲೆಕೆಟ್ಟವರಂತೆ ಕೋಮುದ್ವೇಷಕ್ಕೆ ಪ್ರಚೋದನೆ ನೀಡತೊಡಗಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...