Homeಮುಖಪುಟಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

ಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

- Advertisement -
- Advertisement -

ಶಾಸಕರ ಸ್ಥಳೀಯ ಪ್ರದೇಶಾಭಿವೃದ‍್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು, ತೆರಿಗೆ ಸಂಗ್ರಹ ಇಳಿಯುತ್ತಿದೆ, ಸಾಲದ ಹೊರೆ ಹೆಚ್ಚಾಗುತ್ತಿದೆ, ಕೇಂದ್ರ ಅನುದಾನದ ಬಾಕಿ ಏರುತ್ತಿದೆ. ಶೀಘ್ರದಲ್ಲಿ ನೌಕರರ ಸಂಬಳಕ್ಕೂ ತತ್ವಾರ ಬರಲಿದೆ. ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಆಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹಣ ಇಲ್ಲದೆ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ, ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಓಡಿಹೋಗುತ್ತಿದ್ದಾರೆ, ಖಾಲಿ ಖಜಾನೆ ತುಂಬಲು ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡಲು ಪೀಡಿಸುತ್ತಿದ್ದಾರೆ. ಸುಭೀಕ್ಷೆಯಿಂದ ಇದ್ದ ರಾಜ್ಯ ಅರಾಜಕತೆಯತ್ತ ಭರದಿಂದ ಸಾಗಿದೆ. ಕೇಂದ್ರ ಪ್ರಾಯೋಜಕತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ, ತೆರಿಗೆ ಪಾಲು ಬರ್ತಿಲ್ಲ, ಜಿಎಸ್‌ಟಿ ಪರಿಹಾರ ಕೊಡ್ತಿಲ್ಲ. ಇತ್ತ ಸಂಪುಟ ವಿಸ್ತರಣೆಗೂ ಒಪ್ಪಿಗೆ ಕೊಡ್ತಿಲ್ಲ.‌ ಕರ್ನಾಟಕದ ಬಗ್ಗೆ ಮೋದಿ-ಶಾ ಜೋಡಿ‌ಗೆ ಯಾಕಿಷ್ಟು ಸಿಟ್ಟು ಎಂದು ಸಿದ್ದರಾಮಯ್ಯ ಸಾಲು ಸಾಲು ಸಮಸ್ಯೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಸಂಪುಟ ವಿಸ್ತರಣೆ, ಅತೃಪ್ತರ ಓಲೈಕೆ, ಹೈಕಮಾಂಡ್‌ಗೆ ಮೊರೆ, ಭಿನ್ನಮತೀಯರಿಗೆ ಸಮಾಧಾನ ಇವಿಷ್ಟೇ ಕೆಲಸದಲ್ಲಿ ಯಡಿಯೂರಪ್ಪ ಅವರು ಆರು ತಿಂಗಳು ಕಳೆದಿದ್ದಾರೆ. ಆಡಳಿತ ಕೈಗೆ ಸಿಗುತ್ತಿಲ್ಲ, ಹೈಕಮಾಂಡ್ ಕ್ಯಾರೇ ಅನ್ತಿಲ್ಲ. ಯಡಿಯೂರಪ್ಪ ಮುಳುಗುತ್ತಿದ್ದಾರೆ, ಜೊತೆಗೆ ರಾಜ್ಯವನ್ನೂ ಮುಳುಗಿಸಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇಪ್ಪತ್ತು ವರ್ಷಗಳಲ್ಲಿಯೇ ಮೊದಲ ಬಾರಿ ಕೇಂದ್ರ ಸರ್ಕಾರದ ವರಮಾನ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿಯೂ ಅದೇ ಸ್ಥಿತಿ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹತಾಶರನ್ನಾಗಿ‌ಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮೋದಿ-ಶಾ ಜೋಡಿ ಅವರನ್ನು ದಂಡಿಸುತ್ತಿದೆಯೇ? ಬಿಜೆಪಿಯ ಆಂತರಿಕ ಕಲಹಕ್ಕೆ ರಾಜ್ಯದ ಜನ ಬಲಿಪಶುಗಳಾಗುತ್ತಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ಅಧಿಕಾರಿಗಳು ಬಜೆಟ್ ಮಾಡುವುದು ಹೇಗೆ ಎಂದು ತಲೆಮೇಲೆ ಕೈಯಿಟ್ಟು ಕೂತಿದ್ದಾರೆ ಎಂದು ಸಿದ್ದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರೇ, ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಹಿತ ಬಲಿ‌ಕೊಡಬೇಡಿ. ತಮ್ಮ ವೈಫಲ್ಯದಿಂದಾಗಿ ದೇಶವನ್ನು ಕಬರ್ ಸ್ತಾನ ಮಾಡಲು ಹೊರಟಿರುವ ನರೇಂದ್ರ ಮೋದಿ ಅವರು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಪಾಕಿಸ್ತಾನದ ಜಪ ಮಾಡುತ್ತಿದ್ದಾರೆ. ನಾಯಕನ ಮೇಲ್ಪಂಕ್ತಿಯನ್ನು ಅನುಸರಿಸುತ್ತಿರುವ ರಾಜ್ಯದ ನಾಯಕರು ತಲೆಕೆಟ್ಟವರಂತೆ ಕೋಮುದ್ವೇಷಕ್ಕೆ ಪ್ರಚೋದನೆ ನೀಡತೊಡಗಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...