Homeಕರ್ನಾಟಕಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

- Advertisement -
- Advertisement -

ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ ಎಂದು ಅವರು ಹೇಳಿದ್ದಾರೆ. ಮಂಡ್ಯದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಆರ್ಥಿಕ ಸ್ಥಿತಿ

“ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2,000 ರೂ., ಗೃಹ ಜ್ಯೋತಿ ಅಡಿಯಲ್ಲಿ 200 ಉಚಿತ ಯೂನಿಟ್ ವಿದ್ಯುತ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ನೀಡುತ್ತಿದೆ. ಇಷ್ಟೆಲ್ಲಾ ಸವಲತ್ತುಗಳನ್ನು ನೀಡಿದ ನಂತರ ಜನರು ಆಕ್ರೋಶಗೊಳ್ಳುತ್ತಾರೆಯೆ? ಯಾವುದೇ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆಯೇ? ಇದು ಬಿಜೆಪಿಯ ‘ಆಕ್ರೋಶ'” ಎಂದು ಬಿಜೆಪಿಯ ಜನಾಕ್ರೋಶ ಯಾತ್ರೆಯ ಬಗ್ಗೆ ಹೇಳಿದ್ದಾರೆ.

ಸೋಮವಾರ ಮೈಸೂರಿನಲ್ಲಿ ಬಿಜೆಪಿ ಜನಕ್ರೋಶ ಯಾತ್ರೆಯನ್ನು ಪ್ರಾರಂಭಿಸಿತ್ತು. ಈ ಯಾತ್ರೆಯನ್ನು ಉಲ್ಲೇಖಿಸಿ ಅವರು ಮಾತನಾಡುತ್ತಿದ್ದರು. “ಜನರು ಕೋಪಗೊಂಡಿದ್ದರೆ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದರು. ಆದರೆ, ಅವರು ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗನನ್ನು ಸೋಲಿಸಿದರು. ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ವಿಪರ್ಯಾಸ” ಎಂದು ಅವರು ಹೇಳಿದ್ದಾರೆ.

“ದಲಿತರ ಕಲ್ಯಾಣಕ್ಕಾಗಿ ನಾವು ಮೀಸಲಾದ ಹಣವನ್ನು ಬಳಸುತ್ತಿದ್ದೇವೆ. ಗ್ಯಾರೆಂಟಿ ಯೋಜನೆಗಳಿಗಾಗಿ ನಾವು ಸುಮಾರು 51,000 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಕೇಂದ್ರ ಸರ್ಕಾರವು ಜಿಎಸ್‌ಟಿಯಲ್ಲಿ ನಮ್ಮ ಪಾಲನ್ನು ನಮಗೆ ನೀಡಿಲ್ಲ ಎಂಬ ಕಾರಣಕ್ಕೆ, ನಾವು ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯದ ಜನರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ತಿಂಗಳೊಳಗೆ ಸುಮಾರು 59 ಜನರು ಸಾವನ್ನಪ್ಪಿದ್ದರು. ರಾಜ್ಯ ಪೊಲೀಸ್ ಮತ್ತು ಸಾರಿಗೆ ಇಲಾಖೆ ತ್ವರಿತವಾಗಿ ಕಾರ್ಯನಿರ್ವಹಿಸಿದ್ದು, ಇದರಿಂದಾಗಿ ಇಂತಹ ಅಪಘಾತಗಳು ಕಡಿಮೆಯಾಗಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಕರ್ನಾಟಕದ ಆರ್ಥಿಕ ಸ್ಥಿತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...