Homeಕರ್ನಾಟಕಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

- Advertisement -
- Advertisement -

ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ ಎಂದು ಅವರು ಹೇಳಿದ್ದಾರೆ. ಮಂಡ್ಯದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಆರ್ಥಿಕ ಸ್ಥಿತಿ

“ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2,000 ರೂ., ಗೃಹ ಜ್ಯೋತಿ ಅಡಿಯಲ್ಲಿ 200 ಉಚಿತ ಯೂನಿಟ್ ವಿದ್ಯುತ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ನೀಡುತ್ತಿದೆ. ಇಷ್ಟೆಲ್ಲಾ ಸವಲತ್ತುಗಳನ್ನು ನೀಡಿದ ನಂತರ ಜನರು ಆಕ್ರೋಶಗೊಳ್ಳುತ್ತಾರೆಯೆ? ಯಾವುದೇ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆಯೇ? ಇದು ಬಿಜೆಪಿಯ ‘ಆಕ್ರೋಶ'” ಎಂದು ಬಿಜೆಪಿಯ ಜನಾಕ್ರೋಶ ಯಾತ್ರೆಯ ಬಗ್ಗೆ ಹೇಳಿದ್ದಾರೆ.

ಸೋಮವಾರ ಮೈಸೂರಿನಲ್ಲಿ ಬಿಜೆಪಿ ಜನಕ್ರೋಶ ಯಾತ್ರೆಯನ್ನು ಪ್ರಾರಂಭಿಸಿತ್ತು. ಈ ಯಾತ್ರೆಯನ್ನು ಉಲ್ಲೇಖಿಸಿ ಅವರು ಮಾತನಾಡುತ್ತಿದ್ದರು. “ಜನರು ಕೋಪಗೊಂಡಿದ್ದರೆ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದರು. ಆದರೆ, ಅವರು ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗನನ್ನು ಸೋಲಿಸಿದರು. ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ವಿಪರ್ಯಾಸ” ಎಂದು ಅವರು ಹೇಳಿದ್ದಾರೆ.

“ದಲಿತರ ಕಲ್ಯಾಣಕ್ಕಾಗಿ ನಾವು ಮೀಸಲಾದ ಹಣವನ್ನು ಬಳಸುತ್ತಿದ್ದೇವೆ. ಗ್ಯಾರೆಂಟಿ ಯೋಜನೆಗಳಿಗಾಗಿ ನಾವು ಸುಮಾರು 51,000 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಕೇಂದ್ರ ಸರ್ಕಾರವು ಜಿಎಸ್‌ಟಿಯಲ್ಲಿ ನಮ್ಮ ಪಾಲನ್ನು ನಮಗೆ ನೀಡಿಲ್ಲ ಎಂಬ ಕಾರಣಕ್ಕೆ, ನಾವು ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯದ ಜನರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ತಿಂಗಳೊಳಗೆ ಸುಮಾರು 59 ಜನರು ಸಾವನ್ನಪ್ಪಿದ್ದರು. ರಾಜ್ಯ ಪೊಲೀಸ್ ಮತ್ತು ಸಾರಿಗೆ ಇಲಾಖೆ ತ್ವರಿತವಾಗಿ ಕಾರ್ಯನಿರ್ವಹಿಸಿದ್ದು, ಇದರಿಂದಾಗಿ ಇಂತಹ ಅಪಘಾತಗಳು ಕಡಿಮೆಯಾಗಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಕರ್ನಾಟಕದ ಆರ್ಥಿಕ ಸ್ಥಿತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....