Homeಕರ್ನಾಟಕ6ನೇ ತರಗತಿ 'ವೇದ ಕಾಲದ ಸಂಸ್ಕೃತಿ' ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಪಠ್ಯಪುಸ್ತಕ ಈಗಾಗಲೇ ಮುದ್ರಣಗೊಂಡು ವಿದ್ಯಾರ್ಥಿಗಳ ಕೈಸೇರಿರುವುದರಿಂದ ವಿವಾದಿತ ಪಾಠವನ್ನು ತೆಗೆಯಲು ಸಾಧ್ಯವಿಲ್ಲ. ಹಾಗಾಗಿ ಈ ಪಾಠವನ್ನು ಮಾಡದಿರುವಂತೆ ಶಿಕ್ಷಕರಿಗೆ ಆದೇಶ ಹೊರಡಿಸುತ್ತೇನೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -
- Advertisement -

ಆರನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದ ಭಾಗವಾಗಿರುವ ವೇದ ಕಾಲದ ಸಂಸ್ಕೃತಿ ಕುರಿತು ಪಾಠ ಮಾಡದಂತೆ ಶಿಕ್ಷಕರಿಗೆ ಆದೇಶ ಹೊರಡಿಸುವುದಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದ್ದಾರೆ.

ಪಠ್ಯದಲ್ಲಿರುವ ವೇದ ಕಾಲದ ಯಜ್ಞದ ಕುರಿತ ಮಾಹಿತಿ ತಪ್ಪು ಎಂಬ ಅಭಿಪ್ರಾಯದಲ್ಲಿ ಉಡುಪಿಯ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾದ ಚರ್ಚೆಯೂ ನಡೆದಿತ್ತು. ಹಾಗಾಗಿ ಈ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿರುವ ಅಂಶಗಳಿವೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಆ ಪಾಠವನ್ನು ಕೈಬಿಡಲು ಸಚಿವ ಸುರೇಶ್ ಕುಮಾರ್ ಆದೇಶ ನೀಡುವುದಾಗಿ ಹೇಳಿದ್ದಾರೆಂದು ಡೆಕ್ಕನ್ ಹೆರಾಲ್ಡ್ ಸೇರಿದಂತೆ ಹಲವು ಪತ್ರಿಕೆಗಳು ವರದಿ ಮಾಡಿವೆ.

ಉತ್ತರ ವೇದಗಳ ಕಾಲ

“ಉತ್ತರ ವೇದಗಳ ಕಾಲದಲ್ಲಿ, ಧಾರ್ಮಿಕ ಆಚರಣೆಗಳು ಸಂಕೀರ್ಣವೂ, ಕಠಿಣವೂ ಆದವು. ಯಾಗಯಜ್ಞಗಳ ಆಚರಣೆ ತೀವ್ರವಾಯಿತು. ಹವಿಸ್ಸಿನ ಹೆಸರಿನಲ್ಲಿ ಹಾಲು, ತುಪ್ಪ, ಧಾನ್ಯಗಳನ್ನು ಬೆಂಕಿಗೆ ಅರ್ಪಿಸುವುದು ಹೆಚ್ಚಾದಂತೆ ಆಹಾರದ ಬಿಕ್ಕಟ್ಟು ಉಲ್ಬಣಿಸಿತು. ಬ್ರಹ್ಮ, ವಿಷ್ಣು ಮತ್ತು ಶಿವ ಪ್ರಭಾವಿ ದೇವರುಗಳಾದರು. ಜೊತೆಗೆ ಲಕ್ಷ್ಮಿ, ಸರಸ್ವತಿ, ಪಾರ್ವತಿ, ಗಣೇಶ, ಸ್ಕಂದ ಮೊದಲಾದ ಪರಿವಾರ ದೇವ-ದೇವತೆಗಳು ಪ್ರಾಮುಖ್ಯತೆಗೆ ಬಂದವು” ಎಂದು 6ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ, ಇತಿಹಾಸದ 5ನೇ ಪಾಠದಲ್ಲಿ ಉಲ್ಲೇಖವಾಗಿದೆ.

ಈ ಮಾಹಿತಿ ತಪ್ಪಾಗಿದ್ದು, ಜೊತೆಗೆ ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡುತ್ತವೆ ಎಂದು ಅದಮಾರು ಮಠದ ಸ್ವಾಮೀಜಿ ಹೇಳಿದ್ದರು.

ಈ ಪಠ್ಯಪುಸ್ತಕವು ಹಳೆಯದಾಗಿದ್ದು, ನಾವು ಈ ವರ್ಷ ಇದನ್ನು ಪರಿಷ್ಕರಿಸಿಲ್ಲ. ಈ ಪಾಠವನ್ನು ಮಾಡದಿರುವಂತೆ ಶಿಕ್ಷಕರಿಗೆ ಆದೇಶ ನೀಡುತ್ತೇನೆ. ಅದಾಗ್ಯೂ ಈಗಾಗಲೇ ಈ ಪುಸ್ತಕ ಮುದ್ರಣಗೊಂಡು ಎಲ್ಲಾ ಮಕ್ಕಳಿಗೂ ತಲುಪಿರುವುದರಿಂದ ಈ ವರ್ಷ ಈ ಅಂಶವನ್ನು ಪಠ್ಯದಿಂದ ತೆಗೆಯಲು ಸಾಧ್ಯವಿಲ್ಲ ಎಂದು ವಿಷಾದಿಸುತ್ತೇನೆ” ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಈ ಕುರಿತು ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ಪ್ರಾಧ್ಯಾಪಕರೊಬ್ಬರನ್ನು (ಹೆಸರು ಹೇಳಲಿಚ್ಚಿಸದ) ಮಾತನಾಡಿಸಿತು. “ಯಜ್ಞ,ಯಾಗ, ವೇದಗಳ ಕುರಿತು ನೀಡಿರುವ ಮಾಹಿತಿಯಲ್ಲಿ ತಪ್ಪು ಎಲ್ಲಿಯೂ ಇಲ್ಲ. ವೈದಿಕ ಸಾಹಿತ್ಯಗಳಾದ ವೇದ, ಉಪನಿಷತ್ತುಗಳು, ಅರಣ್ಯಕಗಳು, ಬ್ರಾಹ್ಮಣಕಗಳು, ಪುರಾಣಗಳು, ಶತಪಥ ಬ್ರಾಹ್ಮಣ ಮುಂತಾದವುಗಳಲ್ಲಿ ಈ ಯಜ್ಞಗಳ ಕುರಿತು ಉಲ್ಲೇಖವಿದೆ” ಎಂದು ಹೇಳಿದರು.

“ಯಜ್ಞಗಳಲ್ಲಿ ಬಲಿ ಕೊಡುವುದು, ಧಾನ್ಯಗಳು, ಹಾಲು, ತುಪ್ಪ, ವಸ್ತ್ರಗಳನ್ನೂ ಅಗ್ನಿಗೆ ಅರ್ಪಿಸುವುದು ವೇದೋತ್ತರ ಕಾಲದಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇದರಿಂದ ಆಹಾರ ಬಿಕ್ಕಟ್ಟು ಹೆಚ್ಚಾಯಿತು ಎನ್ನುವುದು ಸ್ವಲ್ಪ ಅತಿರೇಕವೆನಿಸಿದರೂ ಆಶ್ಚರ್ಯವಿಲ್ಲ. ಏಕೆಂದರೆ, ಆಗ ಯಜ್ಞಗಳನ್ನು ಮಾಡಿಸುತ್ತಿದ್ದವರು ರಾಜರು (ಕ್ಷತ್ರಿಯರು). ಕೆಲವೊಮ್ಮೆ ತಿಂಗಳುಗಟ್ಟಲೆ ಯಾಗಗಳು ನಡೆಯುತ್ತಿದ್ದವು. ಅಷ್ಟೂ ದಿನಗಳವರೆಗೆ ಯಜ್ಞಕುಂಡದಲ್ಲಿ ಬೆಂಕಿ ಆರದಿರಲು ಧವಸ, ಧಾನ್ಯ, ಹಾಲು, ತುಪ್ಪ, ಬಟ್ಟೆಗಳನ್ನು ಹಾಕುತ್ತಲೇ ಇರಬೇಕಿತ್ತು. ಹಾಗಾಗಿ ಆಹಾರದ ತೊಂದರೆಯೂ ಆಗಿರಬುಹುದು” ಎಂದು ಅವರು ಅಭಿಪ್ರಾಯಪಟ್ಟರು.

‘ತಮ್ಮ ಧರ್ಮಕ್ಕೆ ಧಕ್ಕೆಯಾಗುತ್ತದೆ ಎಂದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಬಲಿ ಮತ್ತು ಮಾಂಸಾಹಾರ ಸೇವನೆಯ ಕುರಿತು ನಮಗೆ ಲಭ್ಯವಿರುವ, ಸಂಸ್ಕೃತ ಭಾಷೆಯಲ್ಲಿಯೇ ಇರುವ ವೈದಿಕ ಸಾಹಿತ್ಯದಲ್ಲಿ ಮಾಹಿತಿ ದೊರೆಯುತ್ತದೆ. ಹಾಗಾಗಿ ಈಗ ಈ ಪಾಠವನ್ನು ಕೈಬಿಡುತ್ತಿರುವ ಉದ್ದೇಶ ಸ್ಪಷ್ಟವಾಗಿದೆ. ಇದರಿಂದ ಮಕ್ಕಳಿಗೆ ನೀಡಬೇಕಾಗಿರುವ ವೈಚಾರಿಕ ಪ್ರಜ್ಞೆಯನ್ನು ಮೊಟಕುಗೊಳಿಸಿದಂತಾಗುತ್ತದೆ’ ಎಂದು ಗುರುರಾಜ್ ಬೇಡೇಕಾರ್‌ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಭಾರತೀಯ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರು ಮತ್ತು ನಿವೃತ್ತ ಸಮಾಜಶಾಸ್ತ್ರ ಪ್ರಾಧ್ಯಾಪಕರಾದ ಆರ್.ಇಂದಿರಾರವರು ಮಾತನಾಡಿ ‘ಯಾವುದೋ ಒಂದು ಒಳ್ಳೆಯ ಅಥವಾ ಕೆಟ್ಟ ಆಚರಣೆ/ವಿಷಯದ ಬಗ್ಗೆ ಸಂಕ್ಷಿಪ್ತ ವಿವರವನ್ನು ಮಾತ್ರ ನೀಡಲಾಗುತ್ತಿದೆ. ಹಾಗಾಗಿ ಇದರಲ್ಲಿ ಸರಿ-ತಪ್ಪುಗಳನ್ನು ಹುಡುಕುವ ಪ್ರಮೇಯವೇ ಇಲ್ಲ. ಯಾವುದೇ ವಿಷಯದ ಬಗ್ಗೆ ಸಮಗ್ರ ಕಲಿಕೆ ಆಗಬೇಕು. ಅದರಲ್ಲೂ ಸಮಾಜವನ್ನು ಒಟ್ಟುಗೂಡಿಸುವ, ಸಕಾರಾತ್ಮಕ ಮನೋಭಾವ ಬೆಳೆಸುವ ವಿಷಗಳ ಕಲಿಕೆ ಆಗಬೇಕು’ ಎಂದಿದ್ದಾರೆ.

‘ಅದಾಗ್ಯೂ, ಯಜ್ಞ-ಯಾಗಗಳಿಗೆ ಧವಸ, ಧಾನ್ಯ, ಹಾಲು, ತುಪ್ಪ ಇತ್ಯಾದಿಗಳನ್ನು ಹಾಕಿ ವಿನಾಕಾರಣ ವ್ಯಯಿಸುವುದು ನಿಜಕ್ಕೂ ಖಂಡನೀಯ. ಇಂತಹ ಅಪವ್ಯಯ ವೇದಗಳ ಕಾಲದಲ್ಲಿ ಮಾತ್ರವಲ್ಲ, ಈಗಲೂ ನಡೆಯುತ್ತಿದೆ. ಎಷ್ಟೋ ಜನ ಹಸಿವಿನಿಂದ ಸಾಯುತ್ತಿರುವಾಗ ಧಾನ್ಯಗಳನ್ನು ಬೆಂಕಿಗೆ ಹಾಕುವುದು, ಎಷ್ಟೋ ಜನರಿಗೆ ಮಾನ ಮುಚ್ಚಿಕೊಳ್ಳಲೂ ತುಂಡುಬಟ್ಟೆಯಿಲ್ಲದಿರುವಾಗ ಒಳ್ಳೆಯ ಬಟ್ಟೆಗಳನ್ನು ಬೆಂಕಿಗೆ ಹಾಕುವುದು ನಿಜಕ್ಕೂ ಖಂಡನೀಯ. ಇವುಗಳ ಕುರಿತು ವೈಚಾರಿಕ ಜ್ಞಾನವನ್ನು ಶಿಕ್ಷಕರು ಶಾಲೆಯಲ್ಲಿ ನೀಡಬೇಕು. ಪಠ್ಯಪುಸ್ತಕದಲ್ಲಿ ಇದ್ದರೆ ಮಾತ್ರ ಹೇಳಬೇಕು ಎನ್ನುವುದಕ್ಕಿಂತ ಪ್ರತಿ ತರಗತಿಯಲ್ಲಿಯೂ ಇಂತಹ ವಿಷಯಗಳ ಬಗ್ಗೆ ಅರಿವು ಮೂಡಿಸುವುದು ಒಳ್ಳೆಯದು’ ಎಂದರು.

ಹಂಪಿ ವಿಶ್ವವಿದ್ಯಾನಿಲಯ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ.ವಿಜಯ್ ಅವರನ್ನು ನಾನುಗೌರಿ.ಕಾಂ ಮಾತನಾಡಿಸಿದಾಗ, ‘ಯಾವುದೇ ಚುನಾಯಿತ ಸರ್ಕಾರಕ್ಕೆ ಪಠ್ಯ ಬದಲಾವಣೆ ಮಾಡುವ ಅಧಿಕಾರವಿದೆ. ಆದರೆ ಅದು ತಜ್ಞರ ಸಮಿತಿಯನ್ನೊಳಗೊಂಡಂತೆ ಒಂದು ಪ್ರಕ್ರಿಯೆಯ ಮೂಲಕ ನಡೆಯಬೇಕೇ ಹೊರತು ಏಕಾಏಕಿ ಯಾವುದೇ ವಿಷಯವನ್ನು ತೆಗೆಯಲೂ ಸಾಧ್ಯವಿಲ್ಲ, ಸೇರಿಸಲೂ ಸಾಧ್ಯವಿಲ್ಲ’ ಎಂದು ಹೇಳಿದರು.

‘ಪ್ರತಿಯೊಬ್ಬ ಇತಿಹಾಸಕಾರರೂ, ತಮಗೆ ಸಾಕ್ಷ್ಯಗಳು ದೊರೆತಿರುವ ಅಥವಾ ತಾವು ಅಧ್ಯಯನ ಮಾಡಿರುವ ಯಾವುದೇ ವಿಷಯದ ಬಗ್ಗೆ, ತಮ್ಮದೇ ಆದ ವ್ಯಾಖ್ಯಾನವನ್ನು ಹೊಂದಿರುತ್ತಾರೆ. ಹಾಗಾಗಿ ಯಾವುದು ಸರಿ-ತಪ್ಪು ಎಂದು ಹೇಳಲು ಸಾದ್ಯವಿಲ್ಲ. ಹಾಗಾಗಿ ಏನೇ ಮಾಡುವುದಿದ್ದರೂ ನಿರ್ದಿಷ್ಟ ಪ್ರಕ್ರಿಯೆಯ ಮೂಲಕವೇ ಮಾಡಬೇಕಾಗುತ್ತದೆ’ ಎಂದು ಹೇಳಿದರು.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಶಿಕ್ಷಣ ಸಚಿವರೇ ಹೇಳಿರುವಂತೆ, ಪಠ್ಯಪುಸ್ತಕ ಈಗಾಗಲೇ ಮುದ್ರಣಗೊಂಡು ವಿದ್ಯಾರ್ಥಿಗಳ ಕೈಸೇರಿರುವುದರಿಂದ ವಿವಾದಿತ ಪಾಠವನ್ನು ತೆಗೆಯಲು ಸಾಧ್ಯವಿಲ್ಲ. ಹಾಗಾಗಿ ಈ ಪಾಠವನ್ನು ಮಾಡದಿರುವಂತೆ ಶಿಕ್ಷಕರಿಗೆ ಆದೇಶ ಹೊರಡಿಸುತ್ತೇನೆ ಎಂದಿದ್ದಾರೆ.

“ಶಿಕ್ಷಕರು 4ನೇ ಪಾಠವನ್ನು ಮುಗಿಸಿ, ನೇರವಾಗಿ 6ನೇ ಪಾಠವನ್ನು ಮಾಡಲು ಮುಂದಾದಾಗ, ವಿದ್ಯಾರ್ಥಿಗಳು 5ನೇ ಪಾಠ ಯಾಕೆ ಮಾಡುತ್ತಿಲ್ಲ/ಮಾಡಿಲ್ಲ ಎಂದು ಪ್ರಶ್ನಿಸುತ್ತಾರೆ. ಆಗ ಶಿಕ್ಷಕರು ಏನು ಉತ್ತರ ಕೊಡಬಹುದು? ಇದಕ್ಕೆ ಶಿಕ್ಷಣ ಸಚಿವರು ಏನು ಹೇಳುತ್ತಾರೆ?


ಇದನ್ನೂ ಓದಿ: ಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...