Homeಮುಖಪುಟಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ.

- Advertisement -
- Advertisement -

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ಟಿಕೆಟ್ ಘೋಷಿಸಿದ್ದು ಈಗಾಗಲೇ ನಾಮಪತ್ರ ಸಲ್ಲಿಸಲಾಗಿದೆ. ಅಲ್ಪಸಂಖ್ಯಾತರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ವಿವರ ಇಲ್ಲಿದೆ.

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 15
ಜೆಡಿಎಸ್: 22
ಆಪ್: 25

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

  1. ಗುಲ್ಬರ್ಗ ಉತ್ತರ- ಕನೀಜ್ ಫಾತಿಮಾ
  2. ಬೀದರ್‌- ರಹೀಮ್ ಖಾನ್

3. ಶಿವಾಜಿನಗರ- ರಿಜ್ವಾನ್ ಅರ್ಷದ್

4. ಶಾಂತಿನಗರ- ಎನ್‌.ಎ. ಹ್ಯಾರಿಸ್‌

5. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌

6. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.

7. ಮಂಗಳೂರು- ಯು.ಟಿ. ಖಾದರ್‌

8. ನರಸಿಂಹರಾಜ – ತನ್ವೀರ್ ಸೇಠ್‌

9. ಮಂಗಳೂರು ನಗರ ಉತ್ತರ: ಇನಾಯತ್ ಅಲಿ

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್

11. ಬೆಳಗಾವಿ ಉತ್ತರ: ಆಸಿಫ್ ಸೇಟ್

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್

13. ರಾಯಚೂರು ನಗರ; ಮೊಹಮ್ಮದ್ ಶಾಲಂ

14. ಗಂಗಾವತಿ: ಇಕ್ಬಾಲ್ ಅನ್ಸಾರಿ

15. ತುಮಕೂರು ನಗರ: ಇಕ್ಬಾಲ್ ಅಹಮದ್

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ

  1. ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
  2. ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
  3. ಬೀಳಗಿ: ರುಕ್ಮುದ್ದೀನ್‌ ಸೌದಗರ್
  4. ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
  5. ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
  6. ಬಸವಕಲ್ಯಾಣ; ಎಸ್ ವೈ ಖಾದ್ರಿ
  7. ಹುಮ್ನಾಬಾದ್: ಸಿಎಂ ಫಯಾಜ್
  8. ಭಾಲ್ಕಿ: ರೌಫ್ ಪಟೇಲ್
  9. ರೋಣ: ಮುಗದಮ್‌ ಸಾಬ್‌ ಮುದೋಳ
  10. ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
  11. ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
  12. ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
  13. ಸಾಗರ: ಜಾಕೀರ್‌
  14. ಬೈಂದೂರು : ಮನ್ಸೂರ್ ಇಬ್ರಾಹಿಂ
  15. ಕಾಪು: ಸಬೀನಾ ಸಮದ್
  16. ಹೆಬ್ಬಾಳ: ಮೊಹಿದ್ ಅಲ್ತಾಫ್
  17. ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
  18. ಚಿಕ್ಕಪೇಟೆ:  ಇಮ್ರಾನ್‌ಪಾಷ
  19. ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
  20. ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
  21. ವಿರಾಜಪೇಟೆ: ಮನ್ಸೂರ್‌ ಆಲಿ
  22. ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 03
ಜೆಡಿಎಸ್: 01
ಆಪ್: 04

ಜೈನ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 01
ಕಾಂಗ್ರೆಸ್: 01
ಜೆಡಿಎಸ್: 01
ಆಪ್: 02

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ. ಕಳೆದ ಚುನಾವಣೆಯಲ್ಲಿಯೂ ಸಹ ನೀಡಿರಲಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಅಲ್ಪಸಂಖ್ಯಾತ ಸಮುದಾಯಗಳಿಗೆ, ಮಹಿಳೆಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಮುಂದಿದೆ. ಈ ಕುರಿತು ನಾನುಗೌರಿಯೊಂದಿಗೆ ಪ್ರತಿಕ್ರಿಯಿಸಿದ ಆಪ್ ವಕ್ತಾರ ದರ್ಶನ್ ಜೈನ್, “ಒಟ್ಟು 212 ಅಭ್ಯರ್ಥಿಗಳು ಕಣದಲ್ಲಿದ್ದರೂ ಸಹ ಪರಿಶಿಷ್ಟ ಜಾತಿ ಸಮುದಾಯಕ್ಕೆ ಬೇರೆಲ್ಲಾ ಪಕ್ಷಗಳಿಗಿಂತ 40% ಜಾಸ್ತಿ ಪ್ರಾತಿನಿಧ್ಯ ನೀಡಿದ್ದೇವೆ (ಒಟ್ಟು 49 ಮಂದಿಗೆ ಟಿಕೆಟ್). ಎಸ್ಸಿ ಸಮುದಾಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಜಾತಿಗಳಿಗೂ (21 ವಿವಿಧ ದಲಿತ ಜಾತಿಗಳಿಗೆ) ಪ್ರಾತಿನಿಧ್ಯ ನೀಡಲಾಗಿದೆ. 20 ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ. ಆ ಮೂಲಕ ಸಾಮಾಜಿಕ ನ್ಯಾಯಕ್ಕೆ ಅತೀ ಹೆಚ್ಚಿನ ನ್ಯಾಯ ಒದಗಿಸಿರುವುದು ನಮ್ಮ ಪಕ್ಷವೇ ಎಂಬುದು ಹೆಮ್ಮೆಯ ಸಂಗತಿ” ಎಂದಿದ್ದಾರೆ.

ನಮ್ಮ ಅಭ್ಯರ್ಥಿಗಳ ಸರಾಸರಿ ವಯಸ್ಸು 45.3 ಆಗಿದೆ. ಕರ್ನಾಟಕಕ್ಕೆ ನಿಜ ಅರ್ಥದ ಜನಪರ ಪರ್ಯಾಯ ರಾಜಕಾರಣ ನೀಡಲು ನಾವು ಎಲ್ಲಾ ಶ್ರಮ ಹಾಕಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...