HomeUncategorizedರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

- Advertisement -
- Advertisement -

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಜನರಿಗೆ ನೋಟಿಸ್‌, ಅಂದರೆ, 9.46 ಲಕ್ಷ ಜನರಿಗೆ ಸೇರಿದಂತೆ ಇಡೀ ರಾಜ್ಯದಾದ್ಯಂತ ಒಟ್ಟು 43,81,335 ಜನರಿಗೆ ನೋಟಿಸ್‌ ನೀಡಲು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಯುಕ್ತರಾದ ವಿ. ಅನ್ಬು ಕುಮಾರ್, “ನಾಳೆಯಿಂದಲೇ ಮತದಾರರಿಗೆ ನೋಟಿಸ್‌ ನೀಡಲಾಗುತ್ತದೆ. ಎಇಆರ್‌ಒಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಹೆಚ್ಚಿನ ಇಆರ್‌ಒಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ನೇಮಕಾತಿ ಆದೇಶ ಹೊರಬೀಳಲಿದೆ. ಮತದಾರರಿಗೆ ಅನುಕೂಲ ಮಾಡಿಕೊಡುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

“ಎನ್ಯುಮರೇಷನ್ ಫಾರ್ಮ್‌ಗೆ ಸಹಿ ಮಾಡಿಕೊಟ್ಟವರ ಹೆಸರು ಕರಡು ಪಟ್ಟಿಯಲ್ಲಿ ಇದೆ. ಎಎಸ್‌ಡಿಡಿಒ ಹೊರತುಪಡಿಸಿ, 43,81,335 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನೋಟಿಸ್ ಕೊಟ್ಟವರ ಹೆಸರು ಉಳಿಸಿಕೊಳ್ಳುವ ಅಂತಿಮ ತೀರ್ಮಾನವನ್ನು ಎಇಆರ್‌ಒ ಮತ್ತು ಇಆರ್‌ಒಗೆ ಬಿಡಲಾಗಿದೆ. ಅಕ್ಟೋಬರ್ 22 ರ ಒಳಗೆ ಈ ಪ್ರಕ್ರಿಯೆ ಮುಗಿಯಲಿದೆ. ಈ ಹಂತದಲ್ಲಿ ತಿದ್ದುಪಡಿ ಏನಾದರೂ ಬೇಕಾಗಿದ್ದರೆ ಫಾರ್ಮ್ 8 ಕೊಡಬೇಕು, ಹೊಸ ಮತದಾರರು ಫಾರ್ಮ್ 6 ಕೊಡಬೇಕು, ಎಎಸ್‌ಡಿಡಿಒ ಪಟ್ಟಿಯಲ್ಲಿ ಹೆಸರು ಬಂದಿದ್ದವರು ಸಹ, ತಮ್ಮ ಹೆಸರು ಬೇರೆ ಯಾವುದೇ ಕ್ಷೇತ್ರದಲ್ಲಿ ಇಲ್ಲದಿದ್ದರೆ ಫಾರ್ಮ್‌ ನಂ. 6 ಕೊಟ್ಟು ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು” ಎಂದು ಮಾಹಿತಿ ನೀಡಿದರು.

“ಎಸ್‌ಐಆರ್ ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದವರು, ಅವರ ಹೆಸರು ಪುನಃ ಮತದಾರರ ಪಟ್ಟಿಗೆ ಸೇರಬೇಕೆಂದರೆ ಫಾರ್ಮ್ ನಂ. 6 ಕೊಡಬೇಕು. ಪಟ್ಟಿಯಲ್ಲಿ ಹೆಸರು ಇದ್ದವರು ತಿದ್ದುಪಡಿಗಾಗಿ ಫಾರ್ಮ್ 8 ಕೊಡಬೇಕು, ಬಿಎಲ್‌ಒಗಳು ಅದನ್ನು ಪರಿಶೀಲಿಸಿ ಇಆರ್‌ಒಗೆ ಕಳಿಸುತ್ತಾರೆ” ಎಂದರು.

“ಮ್ಯಾಪಿಂಗ್ ಡೇಟಾ ಕೊಡದವರು ಮತ್ತು ಮಾಹಿತಿ ಮ್ಯಾಚ್ ಆಗದವರಿಗೆ ಸ್ಥಳೀಯ ಪೊಲೀಸ್ ನೆರವಿನೊಂದಿಗೆ ಮತದಾರರಿಗೆ ಅಥವಾ ಅವರಿಗೆ ಸಂಬಂಧಪಟ್ಟವರಿಗೆ ನೋಟಿಸ್ ಕೊಡುತ್ತಾರೆ. ನೋಟಿಸ್ ಏಕೆ ಕೊಡಲಾಗುತ್ತಿದೆ ಎಂಬುದನ್ನು ಅದರಲ್ಲಿ ಉಲ್ಲೇಖಿಸಲಾಗುತ್ತದೆ. ವಿಚಾರಣೆಯ ಸ್ಥಳ, ಸಮಯ ಮತ್ತು ದಿನಾಂಕ ಅದರಲ್ಲಿ ನಿಗದಿಪಡಿಸಲಾಗಿದ್ದು, ಮತದಾರರು ಅಲ್ಲಿಗೆ ತೆರಳಿ ಮಾಹಿತಿ ಕೊಡಬೇಕು. ಮಾಹಿತಿ ನೀಡಲು ಮತದಾರರಿಗೆ ಎರಡು ಬಾರಿ ಕಾಲಾವಕಾಶ ನೀಡಲಾಗುವುದು, ನೋಟಿಸ್ ಕೊಟ್ಟ ಒಂದು ವಾರ ಅವರಿಗೆ ಕಾಲಾವಕಾಶ ನೀಡಲಾಗುತ್ತದೆ. ಪ್ರತಿ ಮತದಾರರಿಗೆ ನೇರವಾಗಿ ನೋಟಿಸ್ ಕೊಡಲಾಗುತ್ತದೆ. ಮೆಸೇಜ್ ಅಥವಾ ವಾಟ್ಸಾಪ್ ಮೂಲಕ ಕೊಡಲು ಸಾಧ್ಯವಿಲ್ಲ” ಎಂದರು.

“ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ದಯವಿಟ್ಟು ಫಾರ್ಮ್ ನಂ. 6 ಕೊಡಿ. ಈಗಾಗಲೇ 4,80,000 ಜನ ಫಾರ್ಮ್ ನಂ. 6 ಕೊಟ್ಟಿದ್ದಾರೆ. ಎಎಸ್‌ಡಿಡಿಒ ಪಟ್ಟಿಯಲ್ಲಿ ಹೆಚ್ಚಿನ ಜನರ ಹೆಸರು ಇರುವ ಕಡೆ ಚುನಾವಣಾ ಆಯೋಗದಿಂದ ವಿಶೇಷ ಕ್ಯಾಂಪೇನ್ ಮಾಡಿ ಫಾರ್ಮ್ 6 ಕೊಡಲಾಗುವುದು” ಎಂದು ವಿವರಿಸಿದರು.

“ಆಯೋಗ ನಿಗದಿಪಡಿಸಿರುವ 12 ದಾಖಲಾತಿಗಳನ್ನು ಮಾತ್ರ ಇಆರ್‌ಒ ಕೇಳಬೇಕು. ನೋಟಿಸ್ ತಲುಪಿದ ನಂತರ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಟ್ಟಿ ಪ್ರಕಟ ಮಾಡಲಾಗುವುದು. ಈ ಇಡೀ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಎಇಆರ್‌ಒಗಳು ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟಕ್ಕೆ ಹೋಗುತ್ತಾರೆ. ಜನ ಹೆಚ್ಚಿನ ಹಣ ಮತ್ತು ಸಮಯ ಖರ್ಚು ಮಾಡಿಕೊಂಡು ಎಇಆರ್‌ಒ ಇರುವ ಕಡೆಗೆ ಹೋಗಬೇಕಾಗಿಲ್ಲ. ಮತದಾರರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡುವುದಿಲ್ಲ” ಎಂದು ಹೇಳಿದರು.

“ಒಂದು ದಿನಕ್ಕೆ ಇಷ್ಟೇ ಅರ್ಜಿ ತೆರವು ಮಾಡಬೇಕು ಎಂಬ ಒತ್ತಡವಿಲ್ಲ. ಉದಾಹರಣೆಗೆ ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅತಿ ಕಡಿಮೆ ಸಂಖ್ಯೆಯ ನೋಟಿಸ್‌ಗಳಿವೆ, ಅಲ್ಲೆಲ್ಲಾ ಬೇಗ ಮುಗಿಯುತ್ತದೆ. ಅಕ್ಟೋಬರ್ 22ರ ಒಳಗೆ ಮುಗಿಸಬೇಕು ಎಂಬ ಗಡುವು ನೀಡಲಾಗಿದೆ. ಇಆರ್‌ಒ ಮತ್ತು ಎಇಆರ್‌ಒ ತೀರ್ಮಾನ ತೃಪ್ತಿ ಆಗದೇ ಇದ್ದರೆ, ಮತದಾರರು ಜಿಲ್ಲಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಬಹುದು. ಅಲ್ಲಿಯೂ ತೃಪ್ತಿ ಆಗದೇ ಇದ್ದರೆ ಚುನಾವಣಾ ಆಯೋಗ ಸಂಪರ್ಕಿಸಬಹುದು. ನೋಟಿಸ್ ಪಡೆದವರೇ ಖುದ್ದಾಗಿ ಹಾಜರಾಗಬೇಕು” ಎಂದು ಅನ್ಬು ಕುಮಾರ್ ವಿವರಿಸಿದರು.

“ಮನೆ ಶಿಫ್ಟ್ ಮಾಡಿಕೊಂಡಿದ್ದರೂ, ಎಎಸ್‌ಡಿಡಿಒನಲ್ಲಿ ಹೆಸರು ಬಂದವರು ದಯವಿಟ್ಟು ಫಾರ್ಮ್ ನಂ. 6 ಕೊಡಿ. ಅಕ್ಟೋಬರ್ 27 ರಂದು ಅಂತಿಮ ಪಟ್ಟಿ ಪ್ರಕಟ ಆಗುತ್ತದೆ, ಆದ್ದರಿಂದ ಅಕ್ಟೋಬರ್ 22 ರ ಒಳಗೆ ಫಾರ್ಮ್ 8 ಕೊಡಿ. ಅದಾದ ನಂತರ ಕೊಟ್ಟರೆ ಅಂತಿಮ ಕರಡಿನಲ್ಲಿ ನಿಮ್ಮ ಹೆಸರು ಇರುವುದಿಲ್ಲ. ಆದರೆ, ಫಾರ್ಮ್ 6 ಕೊಡುವುದಕ್ಕೆ ಗಡುವು ಇಲ್ಲ, ಯಾವಾಗ ಬೇಕಾದರೂ ಕೊಡಬಹುದು” ಎಂದರು.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ನೋಟಿಸ್‌?

  • ಬಿಬಿಎಂಪಿ ಕೇಂದ್ರ- 4,29,372
  • ಬಿಬಿಎಂಪಿ ಉತ್ತರ- 6,13,004
  • ಬೆಂಗಳೂರು ನಗರ- 9,46,037
  • ಬಿಬಿಎಂಪಿ ದಕ್ಷಿಣ – 4,17,631
  • ಕಲಬುರಗಿ – 1,05,456
  • ಮಂಡ್ಯ- 1,50,269
  • ಚಿಕ್ಕಬಳ್ಳಾಪುರ- 55,804
  • ವಿಜಯಪುರ – 24,529
  • ಕೋಲಾರ – 1,42,197
  • ಹಾಸನ- 79,780
  • ದಕ್ಷಿಣ ಕನ್ನಡ – 1,50,155
  • ಬಾಗಲಕೋಟೆ – 47,430
  • ರಾಯಚೂರು – 68,637
  • ಕೊಡಗು – 58,893
  • ಉಡುಪಿ – 97,705
  • ಕೊಪ್ಪಳ – 14,399
  • ಯಾದಗಿರಿ – 55,084
  • ಹಾವೇರಿ – 60,010
  • ವಿಜಯನಗರ – 30,622
  • ಮೈಸೂರು – 1,28,138
  • ಬೆಂಗಳೂರು ಗ್ರಾಮಾಂತರ – 56,369
  • ಚಾಮರಾಜನಗರ- 7,480
  • ಚಿಕ್ಕಮಗಳೂರು – 91,620
  • ಧಾರವಾಡ- 47,938
  • ಚಿತ್ರದುರ್ಗ – 68,759
  • ಬೆಳಗಾವಿ – 84,389
  • ಬೀದರ್ – 32,613
  • ತುಮಕೂರು – 1,11,887
  • ಗದಗ – 25,976
  • ಉತ್ತರ ಕನ್ನಡ – 65,332
  • ರಾಮನಗರ – 20,192
  • ಬಳ್ಳಾರಿ – 37,872
  • ದಾವಣಗೆರೆ – 7,088
  • ಶಿವಮೊಗ್ಗ – 48,668
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....