Homeಮುಖಪುಟಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

ಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳನ್ನು ಇಂದು ಪ್ರಕಟಿಸಿವೆ. ವಿವಿಧ ಸಂಸ್ಥೆಗಳ ನಡೆಸಿದ ಎಕ್ಸಿಟ್ ಪೋಲ್ ಫಲಿತಾಂಶ ಕೆಳಗಿನಂತಿದೆ.

ಟಿವಿ9- ಸಿ ವೋಟರ್ ಎಕ್ಸಿಟ್ ಪೋಲ್

ಕಾಂಗ್ರೆಸ್:100-112
ಬಿಜೆಪಿ:83-95
ಜೆಡಿಎಸ್:21-29
ಇತರರು:02-06

ಝೀ ಮ್ಯಾಟ್ರಿಜ್

ಕಾಂಗ್ರೆಸ್:103-118
ಬಿಜೆಪಿ:79-89
ಜೆಡಿಎಸ್:25-33
ಇತರರು:02-05

ನವಭಾರತ್

ಕಾಂಗ್ರೆಸ್:106-120
ಬಿಜೆಪಿ:78-92
ಜೆಡಿಎಸ್:20-26
ಇತರರು:02-04

ಎಬಿಪಿ-ಸಿ ವೋಟರ್

  • BJP 83-95
  • Congress 100-12
  • JDS 21-29
  • Others 2-4

News Nation-CGS

  • BJP 114 seats
  • Congress 86
  • JD(S) 21

ರಿಪಬ್ಲಿಕ್ -ಟಿವಿಪಿ

ಕಾಂಗ್ರೆಸ್:94-108
ಬಿಜೆಪಿ:85-100
ಜೆಡಿಎಸ್:24-32
ಇತರರು:02-06

ಟಿವಿ9- PolStart

ಕಾಂಗ್ರೆಸ್:99-109
ಬಿಜೆಪಿ:88-98
ಜೆಡಿಎಸ್:21-26
ಇತರರು:00-04

ಜನ್ ಕಿ ಬಾತ್

ಕಾಂಗ್ರೆಸ್:91-106
ಬಿಜೆಪಿ:94-117
ಜೆಡಿಎಸ್:14-24
ಇತರರು:00-02

ನವಭಾರತ್ ಮತ್ತು ಝೀ ಮ್ಯಾಟ್ರಿಜ್ ಕಾಂಗ್ರೆಸ್‌ಗೆ ಬಹುಮತ ನೀಡಿದರೆ, ಜನ್ ಕಿ ಬಾತ್ ಮತ್ತು ನ್ಯೂಸ್ ನೇಷನ್ ಸಿಜಿಎಸ್ ಬಿಜೆಪಿಗೆ ಬಹುಮತ ನೀಡಿವೆ. ಟಿವಿ 9 -ಸಿ ವೋಟರ್ ಮತ್ತು ಟಿವಿ9- PolStart ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ ಅತಂತ್ರ ಫಲಿತಾಂಶ ಬರಲಿದೆ ಎಂದು ಹೇಳಿವೆ.

2018ರ ಎಕ್ಸಿಟ್ ಪೋಲ್‌ಗಳು ಏನು ಹೇಳಿದ್ದವು?

ಆರು ರಾಷ್ಟ್ರೀಯ ಟೆಲಿವಿಷನ್ ಚಾನೆಲ್‌ಗಳು ಮತ್ತು ಒಂದು ಪ್ರಾದೇಶಿಕ ಚಾನೆಲ್ ಪ್ರಸಾರ ಮಾಡಿದ ಎಂಟು ಪ್ರಮುಖ ಎಕ್ಸಿಟ್ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು. ಎಂಟರಲ್ಲಿ ಏಳು ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರದ ಕುರಿತು ಸುಳಿವು ನೀಡಿದ್ದವು. ಬಿಜೆಪಿ ಅಥವಾ ಕಾಂಗ್ರೆಸ್ ಬಹುಮತವನ್ನು ಪಡೆಯಲಿಲ್ಲ. ಜೆಡಿಎಸ್ ಕಿಂಗ್‌ಮೇಕರ್ ಆಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ತಿಳಿಸಿದ್ದವು. ಹಾಗೆಯೇ ಆಯಿತು. ಜೆಡಿಎಸ್‌ 20 ರಿಂದ 40 ಸ್ಥಾನಗಳನ್ನು ಪಡೆಯುತ್ತದೆ ಎಂದು ಸಮೀಕ್ಷೆಗಳು ಸೂಚನೆ ನೀಡಿದ್ದವು.

ವಿಧಾನಸಭೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಲಿದೆ ಎಂದು ಎಬಿಪಿ-ಸಿ ವೋಟರ್, ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್, ರಿಪಬ್ಲಿಕ್-ಜನ್ ಕಿ ಬಾತ್ ಮತ್ತು ನ್ಯೂಸ್ ನೇಷನ್ ಎಕ್ಸಿಟ್ ಪೋಲ್‌ಗಳು  ಭವಿಷ್ಯ ನುಡಿದಿದ್ದವು. ಪ್ರಾದೇಶಿಕ ಮಾಧ್ಯಮವಾದ ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಇದನ್ನೇ ಹೇಳಿತ್ತು.

ಟೈಮ್ಸ್ ನೌ ಎರಡು ಎಕ್ಸಿಟ್ ಪೋಲ್‌ಗಳನ್ನು ಪ್ರಸಾರ ಮಾಡಿತ್ತು. ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ ಕಾಂಗ್ರೆಸ್‌ಗೆ ಅಲ್ಪ ಮುನ್ನಡೆ ನೀಡಿತ್ತು; ಟೈಮ್ಸ್ ನೌ-ಟುಡೇಸ್ ಚಾಣಕ್ಯ- ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡಿತ್ತು. ಇಂಡಿಯಾ ಟುಡೆ-ಆಕ್ಸಿಸ್ ಎಕ್ಸಿಟ್ ಪೋಲ್- ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಲಿದೆ ಎಂದಿತ್ತು.

ಎಬಿಪಿ-ಸಿ ವೋಟರ್ ಸಮೀಕ್ಷೆಯು ಬಿಜೆಪಿಗೆ 104-116 ಸ್ಥಾನಗಳನ್ನು ನೀಡಿತ್ತು. ನಂತರ ಕಾಂಗ್ರೆಸ್‌ಗೆ 83-94 ಮತ್ತು ಜೆಡಿಎಸ್‌ಗೆ 20-29 ಸ್ಥಾನಗಳು ಬರಲಿವೆ ಎಂದಿತ್ತು. ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್ ಬಿಜೆಪಿಗೆ 102-110, ಕಾಂಗ್ರೆಸ್‌ಗೆ 72-78, ಜೆಡಿಎಸ್‌ಗೆ 35-39 ಮತ್ತು ಇತರರಿಗೆ 3-5 ಸ್ಥಾನಗಳನ್ನು ನೀಡಿತ್ತು. ರಿಪಬ್ಲಿಕ್-ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 37 ಮತ್ತು ಇತರೆ 3 ಸ್ಥಾನ ಪಡೆದಿದ್ದವು.

ಟೈಮ್ಸ್ ನೌ-ಚಾಣಕ್ಯ ಸಮೀಕ್ಷೆಯು ಬಿಜೆಪಿ 120 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿತ್ತು. ಇದು ಯಾವುದೇ ಪಕ್ಷಕ್ಕೆ ಬಹುಮತದ ಮುನ್ಸೂಚನೆ ನೀಡಿದ ಏಕೈಕ ಸಮೀಕ್ಷೆಯಾಗಿತ್ತು. ಟೈಮ್ಸ್ ನೌ-ಚಾಣಕ್ಯದವರು ಕಾಂಗ್ರೆಸ್‌ಗೆ 73, ಜೆಡಿಎಸ್‌ಗೆ 26 ಮತ್ತು ಇತರರಿಗೆ 3 ಸ್ಥಾನಗಳನ್ನು ನೀಡಿದ್ದರು. ಟೈಮ್ಸ್ ನೌ-ವಿಎಂಆರ್ ಪ್ರಕಾರ, ಕಾಂಗ್ರೆಸ್ 97 ಸ್ಥಾನಗಳನ್ನು, ಬಿಜೆಪಿ 94 ಸ್ಥಾನಗಳನ್ನು, ಜೆಡಿಎಸ್ 28 ಸ್ಥಾನಗಳನ್ನು ಮತ್ತು ಇತರರು 3 ಸ್ಥಾನಗಳು ಪಡೆಯಲಿದ್ದವು.

ನ್ಯೂಸ್ ನೇಷನ್ ಸಮೀಕ್ಷೆಯು ಬಿಜೆಪಿಗೆ 99-108, ಕಾಂಗ್ರೆಸ್‌ಗೆ 75-84, ಜೆಡಿಎಸ್‌ಗೆ 31-40 ಮತ್ತು ಇತರರಿಗೆ 3-7 ಸ್ಥಾನ ನೀಡಿತ್ತು. ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಬಿಜೆಪಿಗೆ 103-107, ಕಾಂಗ್ರೆಸ್‌ಗೆ 76-80, ಜೆಡಿಎಸ್‌ಗೆ 31-35 ಮತ್ತು ಇತರರಿಗೆ 4-8 ಸ್ಥಾನಗಳನ್ನು ನೀಡಲಾಗಿತ್ತು.

ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುನ್ಸೂಚನೆ ನೀಡಿತ್ತು. ಆಡಳಿತರೂಢ ಕಾಂಗ್ರೆಸ್‌ 106 ರಿಂದ 118 ಸ್ಥಾನಗಳನ್ನು ಪಡೆಯಲಿದೆ ಎಂದಿತ್ತು. ಬಿಜೆಪಿ 79-92, ಜೆಡಿಎಸ್‌ 22-30 ಮತ್ತು ಇತರರು 1-4 ಗಳಿಸುತ್ತಾರೆ ಎಂದಿತ್ತು.

2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಮತ್ತು ಜೆಡಿಎಸ್ ತಲಾ 40 ಸ್ಥಾನಗಳನ್ನು ಪಡೆದರೆ, ಯಡಿಯೂರಪ್ಪ ಅವರ ಅಂದಿನ ಕರ್ನಾಟಕ ಜನತಾ ಪಕ್ಷ (ಕೆಜೆಪಿ) 6 ಸ್ಥಾನಗಳನ್ನು ಮತ್ತು ಬಿ ಶ್ರೀರಾಮುಲು ಅವರ ಬಡವರ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ 4 ಸ್ಥಾನಗಳನ್ನು ಪಡೆದುಕೊಂಡಿದ್ದವು.

ಇದನ್ನೂ ಓದಿ: ಮಹಿಳೆಯ ಮಾತು ಉಲ್ಲಂಘಿಸಿ ಬಿಜೆಪಿ ಬಟನ್ ಒತ್ತಿದ ಅಧಿಕಾರಿ; ಚಿತ್ತಾಪುರದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...