Homeಕರ್ನಾಟಕಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

ಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

- Advertisement -
- Advertisement -

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೆಚ್ಚುವರಿ ವೆಚ್ಚಗಳನ್ನು ಮರುಪಡೆಯಲು ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) ಅನುಮತಿ ನೀಡಿರುವುದರಿಂದ ಪ್ರತಿ ಯೂನಿಟ್‌ ವಿದ್ಯುತ್‌ಗೆ 43 ಪೈಸೆಗಳಷ್ಟು ದುಬಾರಿಯಾಗಲಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ವಾರ್ಷಿಕ ಸುಂಕವನ್ನು ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಿಸಲಾಯಿತು. ಆ ಮೂಲಕ ದರ ಏರಿಕೆಗಳ ಸರಣಿ ಪ್ರಾರಂಭವಾಯಿತು. ಎರಡನೇ ಬಾರಿಗೆ ದರ ಹೆಚ್ಚಳವನ್ನು ಜೂನ್‌ ತಿಂಗಳಲ್ಲಿ ಮಾಡಲಾಯಿತು. ಇಂಧನ ದರ ಹೊಂದಾಣಿಕೆಗೆ ಶುಲ್ಕ ಹೆಚ್ಚಿಸಲಾಗಿತ್ತು.

ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಇಂಧನ ಹೊಂದಾಣಿಕೆ ವೆಚ್ಚವನ್ನು ಸಂಗ್ರಹಿಸಲು ಕೆಇಆರ್‌ಸಿ ಎಸ್ಕಾಮ್‌ಗಳಿಗೆ ಅನುಮತಿ ನೀಡಿತು. 31 ಪೈಸೆ (ಬೆಸ್ಕಾಂ), 27 ಪೈಸೆ (ಹೆಸ್ಕಾಂ), 26 ಪೈಸೆ (ಗೆಸ್ಕಾಂ), 21 (ಮೆಸ್ಕಾಂ) ಮತ್ತು 19 ಪೈಸೆ (ಸೆಸ್ಕ್) ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಸೆಪ್ಟೆಂಬರ್ 19ರಂದು ಕೆಇಆರ್‌ಸಿಯ ಮೂರನೇ ಆದೇಶವು ಹೊರಬಿದ್ದಿದೆ. ಅಕ್ಟೋಬರ್ 1 ರಿಂದ ಮಾರ್ಚ್ 31, 2023ರವರೆಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳ ಪ್ರಕಾರ ಬೆಸ್ಕಾಂ ಗ್ರಾಹಕರು ಪ್ರತಿ ಯೂನಿಟ್‌ಗೆ ಹೆಚ್ಚುವರಿಯಾಗಿ 43 ಪೈಸೆಗಳನ್ನು ಪಾವತಿಸಬೇಕು, ಹೆಸ್ಕಾಂ- 35, ಗೆಸ್ಕಾಂ- 35, ಸೆಸ್ಕ್‌ – 34 ಮತ್ತು ಮೆಸ್ಕಾಂ- 24 ಪೈಸೆಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಬೇಕು.

ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ 31ರವರೆಗೆ, ಗ್ರಾಹಕರು ಜೂನ್ ಆದೇಶ ಮತ್ತು ಸೆಪ್ಟೆಂಬರ್ ಆದೇಶದ ಅನ್ವಯ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಡಿಸೆಂಬರ್‌ನಿಂದ ಮಾರ್ಚ್‌ವರೆಗೆ, ಮೂರನೇ ಕ್ರಮದಲ್ಲಿ ಜಾರಿಗೊಳಿಸಲಾದ ಹೆಚ್ಚಳ ಮಾತ್ರ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ” ಎಂದಿದ್ದಾರೆ.

“ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ” ಎಂದು ತಿಳಿಸಿದ್ದಾರೆ.

“ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....