Homeಕರ್ನಾಟಕಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

ಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

- Advertisement -
- Advertisement -

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೆಚ್ಚುವರಿ ವೆಚ್ಚಗಳನ್ನು ಮರುಪಡೆಯಲು ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) ಅನುಮತಿ ನೀಡಿರುವುದರಿಂದ ಪ್ರತಿ ಯೂನಿಟ್‌ ವಿದ್ಯುತ್‌ಗೆ 43 ಪೈಸೆಗಳಷ್ಟು ದುಬಾರಿಯಾಗಲಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ವಾರ್ಷಿಕ ಸುಂಕವನ್ನು ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಿಸಲಾಯಿತು. ಆ ಮೂಲಕ ದರ ಏರಿಕೆಗಳ ಸರಣಿ ಪ್ರಾರಂಭವಾಯಿತು. ಎರಡನೇ ಬಾರಿಗೆ ದರ ಹೆಚ್ಚಳವನ್ನು ಜೂನ್‌ ತಿಂಗಳಲ್ಲಿ ಮಾಡಲಾಯಿತು. ಇಂಧನ ದರ ಹೊಂದಾಣಿಕೆಗೆ ಶುಲ್ಕ ಹೆಚ್ಚಿಸಲಾಗಿತ್ತು.

ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಇಂಧನ ಹೊಂದಾಣಿಕೆ ವೆಚ್ಚವನ್ನು ಸಂಗ್ರಹಿಸಲು ಕೆಇಆರ್‌ಸಿ ಎಸ್ಕಾಮ್‌ಗಳಿಗೆ ಅನುಮತಿ ನೀಡಿತು. 31 ಪೈಸೆ (ಬೆಸ್ಕಾಂ), 27 ಪೈಸೆ (ಹೆಸ್ಕಾಂ), 26 ಪೈಸೆ (ಗೆಸ್ಕಾಂ), 21 (ಮೆಸ್ಕಾಂ) ಮತ್ತು 19 ಪೈಸೆ (ಸೆಸ್ಕ್) ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಸೆಪ್ಟೆಂಬರ್ 19ರಂದು ಕೆಇಆರ್‌ಸಿಯ ಮೂರನೇ ಆದೇಶವು ಹೊರಬಿದ್ದಿದೆ. ಅಕ್ಟೋಬರ್ 1 ರಿಂದ ಮಾರ್ಚ್ 31, 2023ರವರೆಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳ ಪ್ರಕಾರ ಬೆಸ್ಕಾಂ ಗ್ರಾಹಕರು ಪ್ರತಿ ಯೂನಿಟ್‌ಗೆ ಹೆಚ್ಚುವರಿಯಾಗಿ 43 ಪೈಸೆಗಳನ್ನು ಪಾವತಿಸಬೇಕು, ಹೆಸ್ಕಾಂ- 35, ಗೆಸ್ಕಾಂ- 35, ಸೆಸ್ಕ್‌ – 34 ಮತ್ತು ಮೆಸ್ಕಾಂ- 24 ಪೈಸೆಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಬೇಕು.

ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ 31ರವರೆಗೆ, ಗ್ರಾಹಕರು ಜೂನ್ ಆದೇಶ ಮತ್ತು ಸೆಪ್ಟೆಂಬರ್ ಆದೇಶದ ಅನ್ವಯ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಡಿಸೆಂಬರ್‌ನಿಂದ ಮಾರ್ಚ್‌ವರೆಗೆ, ಮೂರನೇ ಕ್ರಮದಲ್ಲಿ ಜಾರಿಗೊಳಿಸಲಾದ ಹೆಚ್ಚಳ ಮಾತ್ರ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ” ಎಂದಿದ್ದಾರೆ.

“ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ” ಎಂದು ತಿಳಿಸಿದ್ದಾರೆ.

“ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...