Homeಕರ್ನಾಟಕಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

ಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

- Advertisement -
- Advertisement -

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೆಚ್ಚುವರಿ ವೆಚ್ಚಗಳನ್ನು ಮರುಪಡೆಯಲು ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) ಅನುಮತಿ ನೀಡಿರುವುದರಿಂದ ಪ್ರತಿ ಯೂನಿಟ್‌ ವಿದ್ಯುತ್‌ಗೆ 43 ಪೈಸೆಗಳಷ್ಟು ದುಬಾರಿಯಾಗಲಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ವಾರ್ಷಿಕ ಸುಂಕವನ್ನು ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಿಸಲಾಯಿತು. ಆ ಮೂಲಕ ದರ ಏರಿಕೆಗಳ ಸರಣಿ ಪ್ರಾರಂಭವಾಯಿತು. ಎರಡನೇ ಬಾರಿಗೆ ದರ ಹೆಚ್ಚಳವನ್ನು ಜೂನ್‌ ತಿಂಗಳಲ್ಲಿ ಮಾಡಲಾಯಿತು. ಇಂಧನ ದರ ಹೊಂದಾಣಿಕೆಗೆ ಶುಲ್ಕ ಹೆಚ್ಚಿಸಲಾಗಿತ್ತು.

ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಇಂಧನ ಹೊಂದಾಣಿಕೆ ವೆಚ್ಚವನ್ನು ಸಂಗ್ರಹಿಸಲು ಕೆಇಆರ್‌ಸಿ ಎಸ್ಕಾಮ್‌ಗಳಿಗೆ ಅನುಮತಿ ನೀಡಿತು. 31 ಪೈಸೆ (ಬೆಸ್ಕಾಂ), 27 ಪೈಸೆ (ಹೆಸ್ಕಾಂ), 26 ಪೈಸೆ (ಗೆಸ್ಕಾಂ), 21 (ಮೆಸ್ಕಾಂ) ಮತ್ತು 19 ಪೈಸೆ (ಸೆಸ್ಕ್) ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಸೆಪ್ಟೆಂಬರ್ 19ರಂದು ಕೆಇಆರ್‌ಸಿಯ ಮೂರನೇ ಆದೇಶವು ಹೊರಬಿದ್ದಿದೆ. ಅಕ್ಟೋಬರ್ 1 ರಿಂದ ಮಾರ್ಚ್ 31, 2023ರವರೆಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳ ಪ್ರಕಾರ ಬೆಸ್ಕಾಂ ಗ್ರಾಹಕರು ಪ್ರತಿ ಯೂನಿಟ್‌ಗೆ ಹೆಚ್ಚುವರಿಯಾಗಿ 43 ಪೈಸೆಗಳನ್ನು ಪಾವತಿಸಬೇಕು, ಹೆಸ್ಕಾಂ- 35, ಗೆಸ್ಕಾಂ- 35, ಸೆಸ್ಕ್‌ – 34 ಮತ್ತು ಮೆಸ್ಕಾಂ- 24 ಪೈಸೆಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಬೇಕು.

ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ 31ರವರೆಗೆ, ಗ್ರಾಹಕರು ಜೂನ್ ಆದೇಶ ಮತ್ತು ಸೆಪ್ಟೆಂಬರ್ ಆದೇಶದ ಅನ್ವಯ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಡಿಸೆಂಬರ್‌ನಿಂದ ಮಾರ್ಚ್‌ವರೆಗೆ, ಮೂರನೇ ಕ್ರಮದಲ್ಲಿ ಜಾರಿಗೊಳಿಸಲಾದ ಹೆಚ್ಚಳ ಮಾತ್ರ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ” ಎಂದಿದ್ದಾರೆ.

“ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ” ಎಂದು ತಿಳಿಸಿದ್ದಾರೆ.

“ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...