Homeಕರ್ನಾಟಕಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

ಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

- Advertisement -
- Advertisement -

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೆಚ್ಚುವರಿ ವೆಚ್ಚಗಳನ್ನು ಮರುಪಡೆಯಲು ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) ಅನುಮತಿ ನೀಡಿರುವುದರಿಂದ ಪ್ರತಿ ಯೂನಿಟ್‌ ವಿದ್ಯುತ್‌ಗೆ 43 ಪೈಸೆಗಳಷ್ಟು ದುಬಾರಿಯಾಗಲಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ವಾರ್ಷಿಕ ಸುಂಕವನ್ನು ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಿಸಲಾಯಿತು. ಆ ಮೂಲಕ ದರ ಏರಿಕೆಗಳ ಸರಣಿ ಪ್ರಾರಂಭವಾಯಿತು. ಎರಡನೇ ಬಾರಿಗೆ ದರ ಹೆಚ್ಚಳವನ್ನು ಜೂನ್‌ ತಿಂಗಳಲ್ಲಿ ಮಾಡಲಾಯಿತು. ಇಂಧನ ದರ ಹೊಂದಾಣಿಕೆಗೆ ಶುಲ್ಕ ಹೆಚ್ಚಿಸಲಾಗಿತ್ತು.

ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಇಂಧನ ಹೊಂದಾಣಿಕೆ ವೆಚ್ಚವನ್ನು ಸಂಗ್ರಹಿಸಲು ಕೆಇಆರ್‌ಸಿ ಎಸ್ಕಾಮ್‌ಗಳಿಗೆ ಅನುಮತಿ ನೀಡಿತು. 31 ಪೈಸೆ (ಬೆಸ್ಕಾಂ), 27 ಪೈಸೆ (ಹೆಸ್ಕಾಂ), 26 ಪೈಸೆ (ಗೆಸ್ಕಾಂ), 21 (ಮೆಸ್ಕಾಂ) ಮತ್ತು 19 ಪೈಸೆ (ಸೆಸ್ಕ್) ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಸೆಪ್ಟೆಂಬರ್ 19ರಂದು ಕೆಇಆರ್‌ಸಿಯ ಮೂರನೇ ಆದೇಶವು ಹೊರಬಿದ್ದಿದೆ. ಅಕ್ಟೋಬರ್ 1 ರಿಂದ ಮಾರ್ಚ್ 31, 2023ರವರೆಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳ ಪ್ರಕಾರ ಬೆಸ್ಕಾಂ ಗ್ರಾಹಕರು ಪ್ರತಿ ಯೂನಿಟ್‌ಗೆ ಹೆಚ್ಚುವರಿಯಾಗಿ 43 ಪೈಸೆಗಳನ್ನು ಪಾವತಿಸಬೇಕು, ಹೆಸ್ಕಾಂ- 35, ಗೆಸ್ಕಾಂ- 35, ಸೆಸ್ಕ್‌ – 34 ಮತ್ತು ಮೆಸ್ಕಾಂ- 24 ಪೈಸೆಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಬೇಕು.

ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ 31ರವರೆಗೆ, ಗ್ರಾಹಕರು ಜೂನ್ ಆದೇಶ ಮತ್ತು ಸೆಪ್ಟೆಂಬರ್ ಆದೇಶದ ಅನ್ವಯ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಡಿಸೆಂಬರ್‌ನಿಂದ ಮಾರ್ಚ್‌ವರೆಗೆ, ಮೂರನೇ ಕ್ರಮದಲ್ಲಿ ಜಾರಿಗೊಳಿಸಲಾದ ಹೆಚ್ಚಳ ಮಾತ್ರ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ” ಎಂದಿದ್ದಾರೆ.

“ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ” ಎಂದು ತಿಳಿಸಿದ್ದಾರೆ.

“ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...