Homeಕರ್ನಾಟಕಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

ಕರ್ನಾಟಕ: ಮತ್ತೆ ವಿದ್ಯುತ್ ದರ ಹೆಚ್ಚಳ

- Advertisement -
- Advertisement -

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೆಚ್ಚುವರಿ ವೆಚ್ಚಗಳನ್ನು ಮರುಪಡೆಯಲು ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) ಅನುಮತಿ ನೀಡಿರುವುದರಿಂದ ಪ್ರತಿ ಯೂನಿಟ್‌ ವಿದ್ಯುತ್‌ಗೆ 43 ಪೈಸೆಗಳಷ್ಟು ದುಬಾರಿಯಾಗಲಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ವಾರ್ಷಿಕ ಸುಂಕವನ್ನು ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಿಸಲಾಯಿತು. ಆ ಮೂಲಕ ದರ ಏರಿಕೆಗಳ ಸರಣಿ ಪ್ರಾರಂಭವಾಯಿತು. ಎರಡನೇ ಬಾರಿಗೆ ದರ ಹೆಚ್ಚಳವನ್ನು ಜೂನ್‌ ತಿಂಗಳಲ್ಲಿ ಮಾಡಲಾಯಿತು. ಇಂಧನ ದರ ಹೊಂದಾಣಿಕೆಗೆ ಶುಲ್ಕ ಹೆಚ್ಚಿಸಲಾಗಿತ್ತು.

ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಇಂಧನ ಹೊಂದಾಣಿಕೆ ವೆಚ್ಚವನ್ನು ಸಂಗ್ರಹಿಸಲು ಕೆಇಆರ್‌ಸಿ ಎಸ್ಕಾಮ್‌ಗಳಿಗೆ ಅನುಮತಿ ನೀಡಿತು. 31 ಪೈಸೆ (ಬೆಸ್ಕಾಂ), 27 ಪೈಸೆ (ಹೆಸ್ಕಾಂ), 26 ಪೈಸೆ (ಗೆಸ್ಕಾಂ), 21 (ಮೆಸ್ಕಾಂ) ಮತ್ತು 19 ಪೈಸೆ (ಸೆಸ್ಕ್) ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಸೆಪ್ಟೆಂಬರ್ 19ರಂದು ಕೆಇಆರ್‌ಸಿಯ ಮೂರನೇ ಆದೇಶವು ಹೊರಬಿದ್ದಿದೆ. ಅಕ್ಟೋಬರ್ 1 ರಿಂದ ಮಾರ್ಚ್ 31, 2023ರವರೆಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳ ಪ್ರಕಾರ ಬೆಸ್ಕಾಂ ಗ್ರಾಹಕರು ಪ್ರತಿ ಯೂನಿಟ್‌ಗೆ ಹೆಚ್ಚುವರಿಯಾಗಿ 43 ಪೈಸೆಗಳನ್ನು ಪಾವತಿಸಬೇಕು, ಹೆಸ್ಕಾಂ- 35, ಗೆಸ್ಕಾಂ- 35, ಸೆಸ್ಕ್‌ – 34 ಮತ್ತು ಮೆಸ್ಕಾಂ- 24 ಪೈಸೆಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಬೇಕು.

ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ 31ರವರೆಗೆ, ಗ್ರಾಹಕರು ಜೂನ್ ಆದೇಶ ಮತ್ತು ಸೆಪ್ಟೆಂಬರ್ ಆದೇಶದ ಅನ್ವಯ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಡಿಸೆಂಬರ್‌ನಿಂದ ಮಾರ್ಚ್‌ವರೆಗೆ, ಮೂರನೇ ಕ್ರಮದಲ್ಲಿ ಜಾರಿಗೊಳಿಸಲಾದ ಹೆಚ್ಚಳ ಮಾತ್ರ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ” ಎಂದಿದ್ದಾರೆ.

“ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ” ಎಂದು ತಿಳಿಸಿದ್ದಾರೆ.

“ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...