Homeಚಳವಳಿಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯವೆಂದ ಕರ್ನಾಟಕದ ಮಾಜಿ ಸ್ಪೀಕರ್

- Advertisement -
- Advertisement -

ದೆಹಲಿಗೆ ಭೇಟಿ ನೀಡಿದ್ದ ವೇಳೆ ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ, ಅರವಿಂದ ಕೇಜ್ರಿವಾಲ್ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ರವರು ಆಶ್ಚರ್ಯ ಮತ್ತು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿಯವರು ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ. ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ ಎಂದಿದ್ದಾರೆ.

ವಿಡಿಯೋ ನೋಡಿ

ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳಿಗೆ ಪ್ರೀತಿ ಮತ್ತು ಗೌರವದಿಂದ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ಅರ್ಥ ಕಲ್ಪಿಸುತ್ತಿದ್ದಾರೆ ಎಂದಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಒಂದು ರಾಜ್ಯದ ಅಥವಾ ದೇಶದ ನಾಯಕತ್ವ ವಹಿಸಿಕೊಂಡವರಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯ ಹೃದಯವಿದ್ದರೆ ಅದ್ಭುತವಾದ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಅರವಿಂದ ಕೇಜ್ರಿವಾಲ್ರವರ ಪರಿಶ್ರಮವೇ ಸಾಕ್ಷಿ. ಶಿಕ್ಷಣವನ್ನು ವ್ಯಾಪಾರ ಮಾಡುತ್ತಿರುವ ಸಂದರ್ಭದಲ್ಲಿ ಕೆಳ ವರ್ಗದ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ಕೊಡುವ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ರ ಕಾರ್ಯದಕ್ಷತೆಯನ್ನು ನೋಡಿ ನಾನು ನಿಜವಾಗಿಯೂ ಚಕಿತಗೊಂಡಿದ್ದೇನೆ ಎಂದು ಸಂತೋಷಪಟ್ಟಿದ್ದಾರೆ.

ದೇಶದ ಎಲ್ಲಾ ಜನವರ್ಗಗಳ ಕೈಗೆಟಕುವಂತಹ, ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯ. ಅಂತಹ ಅದ್ಭುತವಾದ ಸಾಧನೆಯನ್ನು ದೆಹಲಿಯ ಕೇಜ್ರಿವಾಲ್ ಅವರ ಸರ್ಕಾರ ಮಾಡಿದೆ. ಇಡೀ ದೇಶವು ಇವರ ಮಾರ್ಗವನ್ನು ಅನುಸರಿಸಿದರೆ ದೇಶಕ್ಕೆ ಒಳ್ಳೆಯ ಭವಿಷ್ಯವಿದೆ, ದೇಶವು ಮುಂಚೂಣಿ ರಾಷ್ಟ್ರವಾಗಿ ಬೆಳಯಲಿದೆ. ಇಂತಹ ಸಾಧನೆಯ ಕೆಲಸಗಳನ್ನು ದೇಶದ ಜನರಿಗೆ ತಿಳಿಸಲು ಮಾಧ್ಯಮಗಳಿಗೆ ಸಮಯವೂ ಇಲ್ಲ, ಮನಸ್ಸೂ ಇಲ್ಲ ಎಂದು ರಮೇಶ್ ಕುಮಾರ್ ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ ರವರ ದೆಹಲಿ ಭೇಟಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಎಚ್.ವಿ ಮಂಜುನಾಥ್ ರವರ ಜೊತೆಗಿದ್ದರು. ಇವರು ಸಹ ಜಿಲ್ಲಾಡಳಿತದ ವತಿಯಿಂದ ಚಿಕ್ಕಬಳ್ಳಾಪುರದ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತರಲು ಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...