Homeಚಳವಳಿಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯವೆಂದ ಕರ್ನಾಟಕದ ಮಾಜಿ ಸ್ಪೀಕರ್

- Advertisement -
- Advertisement -

ದೆಹಲಿಗೆ ಭೇಟಿ ನೀಡಿದ್ದ ವೇಳೆ ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ, ಅರವಿಂದ ಕೇಜ್ರಿವಾಲ್ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ರವರು ಆಶ್ಚರ್ಯ ಮತ್ತು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿಯವರು ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ. ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ ಎಂದಿದ್ದಾರೆ.

ವಿಡಿಯೋ ನೋಡಿ

ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳಿಗೆ ಪ್ರೀತಿ ಮತ್ತು ಗೌರವದಿಂದ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ಅರ್ಥ ಕಲ್ಪಿಸುತ್ತಿದ್ದಾರೆ ಎಂದಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಒಂದು ರಾಜ್ಯದ ಅಥವಾ ದೇಶದ ನಾಯಕತ್ವ ವಹಿಸಿಕೊಂಡವರಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯ ಹೃದಯವಿದ್ದರೆ ಅದ್ಭುತವಾದ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಅರವಿಂದ ಕೇಜ್ರಿವಾಲ್ರವರ ಪರಿಶ್ರಮವೇ ಸಾಕ್ಷಿ. ಶಿಕ್ಷಣವನ್ನು ವ್ಯಾಪಾರ ಮಾಡುತ್ತಿರುವ ಸಂದರ್ಭದಲ್ಲಿ ಕೆಳ ವರ್ಗದ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ಕೊಡುವ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ರ ಕಾರ್ಯದಕ್ಷತೆಯನ್ನು ನೋಡಿ ನಾನು ನಿಜವಾಗಿಯೂ ಚಕಿತಗೊಂಡಿದ್ದೇನೆ ಎಂದು ಸಂತೋಷಪಟ್ಟಿದ್ದಾರೆ.

ದೇಶದ ಎಲ್ಲಾ ಜನವರ್ಗಗಳ ಕೈಗೆಟಕುವಂತಹ, ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯ. ಅಂತಹ ಅದ್ಭುತವಾದ ಸಾಧನೆಯನ್ನು ದೆಹಲಿಯ ಕೇಜ್ರಿವಾಲ್ ಅವರ ಸರ್ಕಾರ ಮಾಡಿದೆ. ಇಡೀ ದೇಶವು ಇವರ ಮಾರ್ಗವನ್ನು ಅನುಸರಿಸಿದರೆ ದೇಶಕ್ಕೆ ಒಳ್ಳೆಯ ಭವಿಷ್ಯವಿದೆ, ದೇಶವು ಮುಂಚೂಣಿ ರಾಷ್ಟ್ರವಾಗಿ ಬೆಳಯಲಿದೆ. ಇಂತಹ ಸಾಧನೆಯ ಕೆಲಸಗಳನ್ನು ದೇಶದ ಜನರಿಗೆ ತಿಳಿಸಲು ಮಾಧ್ಯಮಗಳಿಗೆ ಸಮಯವೂ ಇಲ್ಲ, ಮನಸ್ಸೂ ಇಲ್ಲ ಎಂದು ರಮೇಶ್ ಕುಮಾರ್ ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ ರವರ ದೆಹಲಿ ಭೇಟಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಎಚ್.ವಿ ಮಂಜುನಾಥ್ ರವರ ಜೊತೆಗಿದ್ದರು. ಇವರು ಸಹ ಜಿಲ್ಲಾಡಳಿತದ ವತಿಯಿಂದ ಚಿಕ್ಕಬಳ್ಳಾಪುರದ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತರಲು ಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...