Homeಚಳವಳಿಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯವೆಂದ ಕರ್ನಾಟಕದ ಮಾಜಿ ಸ್ಪೀಕರ್

- Advertisement -
- Advertisement -

ದೆಹಲಿಗೆ ಭೇಟಿ ನೀಡಿದ್ದ ವೇಳೆ ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ, ಅರವಿಂದ ಕೇಜ್ರಿವಾಲ್ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ರವರು ಆಶ್ಚರ್ಯ ಮತ್ತು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿಯವರು ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ. ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ ಎಂದಿದ್ದಾರೆ.

ವಿಡಿಯೋ ನೋಡಿ

ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳಿಗೆ ಪ್ರೀತಿ ಮತ್ತು ಗೌರವದಿಂದ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ಅರ್ಥ ಕಲ್ಪಿಸುತ್ತಿದ್ದಾರೆ ಎಂದಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಒಂದು ರಾಜ್ಯದ ಅಥವಾ ದೇಶದ ನಾಯಕತ್ವ ವಹಿಸಿಕೊಂಡವರಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯ ಹೃದಯವಿದ್ದರೆ ಅದ್ಭುತವಾದ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಅರವಿಂದ ಕೇಜ್ರಿವಾಲ್ರವರ ಪರಿಶ್ರಮವೇ ಸಾಕ್ಷಿ. ಶಿಕ್ಷಣವನ್ನು ವ್ಯಾಪಾರ ಮಾಡುತ್ತಿರುವ ಸಂದರ್ಭದಲ್ಲಿ ಕೆಳ ವರ್ಗದ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ಕೊಡುವ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ರ ಕಾರ್ಯದಕ್ಷತೆಯನ್ನು ನೋಡಿ ನಾನು ನಿಜವಾಗಿಯೂ ಚಕಿತಗೊಂಡಿದ್ದೇನೆ ಎಂದು ಸಂತೋಷಪಟ್ಟಿದ್ದಾರೆ.

ದೇಶದ ಎಲ್ಲಾ ಜನವರ್ಗಗಳ ಕೈಗೆಟಕುವಂತಹ, ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯ. ಅಂತಹ ಅದ್ಭುತವಾದ ಸಾಧನೆಯನ್ನು ದೆಹಲಿಯ ಕೇಜ್ರಿವಾಲ್ ಅವರ ಸರ್ಕಾರ ಮಾಡಿದೆ. ಇಡೀ ದೇಶವು ಇವರ ಮಾರ್ಗವನ್ನು ಅನುಸರಿಸಿದರೆ ದೇಶಕ್ಕೆ ಒಳ್ಳೆಯ ಭವಿಷ್ಯವಿದೆ, ದೇಶವು ಮುಂಚೂಣಿ ರಾಷ್ಟ್ರವಾಗಿ ಬೆಳಯಲಿದೆ. ಇಂತಹ ಸಾಧನೆಯ ಕೆಲಸಗಳನ್ನು ದೇಶದ ಜನರಿಗೆ ತಿಳಿಸಲು ಮಾಧ್ಯಮಗಳಿಗೆ ಸಮಯವೂ ಇಲ್ಲ, ಮನಸ್ಸೂ ಇಲ್ಲ ಎಂದು ರಮೇಶ್ ಕುಮಾರ್ ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ ರವರ ದೆಹಲಿ ಭೇಟಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಎಚ್.ವಿ ಮಂಜುನಾಥ್ ರವರ ಜೊತೆಗಿದ್ದರು. ಇವರು ಸಹ ಜಿಲ್ಲಾಡಳಿತದ ವತಿಯಿಂದ ಚಿಕ್ಕಬಳ್ಳಾಪುರದ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತರಲು ಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...