Homeಚಳವಳಿಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯವೆಂದ ಕರ್ನಾಟಕದ ಮಾಜಿ ಸ್ಪೀಕರ್

- Advertisement -
- Advertisement -

ದೆಹಲಿಗೆ ಭೇಟಿ ನೀಡಿದ್ದ ವೇಳೆ ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ, ಅರವಿಂದ ಕೇಜ್ರಿವಾಲ್ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ರವರು ಆಶ್ಚರ್ಯ ಮತ್ತು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿಯವರು ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ. ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ ಎಂದಿದ್ದಾರೆ.

ವಿಡಿಯೋ ನೋಡಿ

ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳಿಗೆ ಪ್ರೀತಿ ಮತ್ತು ಗೌರವದಿಂದ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ಅರ್ಥ ಕಲ್ಪಿಸುತ್ತಿದ್ದಾರೆ ಎಂದಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಒಂದು ರಾಜ್ಯದ ಅಥವಾ ದೇಶದ ನಾಯಕತ್ವ ವಹಿಸಿಕೊಂಡವರಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯ ಹೃದಯವಿದ್ದರೆ ಅದ್ಭುತವಾದ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಅರವಿಂದ ಕೇಜ್ರಿವಾಲ್ರವರ ಪರಿಶ್ರಮವೇ ಸಾಕ್ಷಿ. ಶಿಕ್ಷಣವನ್ನು ವ್ಯಾಪಾರ ಮಾಡುತ್ತಿರುವ ಸಂದರ್ಭದಲ್ಲಿ ಕೆಳ ವರ್ಗದ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ಕೊಡುವ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ರ ಕಾರ್ಯದಕ್ಷತೆಯನ್ನು ನೋಡಿ ನಾನು ನಿಜವಾಗಿಯೂ ಚಕಿತಗೊಂಡಿದ್ದೇನೆ ಎಂದು ಸಂತೋಷಪಟ್ಟಿದ್ದಾರೆ.

ದೇಶದ ಎಲ್ಲಾ ಜನವರ್ಗಗಳ ಕೈಗೆಟಕುವಂತಹ, ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯ. ಅಂತಹ ಅದ್ಭುತವಾದ ಸಾಧನೆಯನ್ನು ದೆಹಲಿಯ ಕೇಜ್ರಿವಾಲ್ ಅವರ ಸರ್ಕಾರ ಮಾಡಿದೆ. ಇಡೀ ದೇಶವು ಇವರ ಮಾರ್ಗವನ್ನು ಅನುಸರಿಸಿದರೆ ದೇಶಕ್ಕೆ ಒಳ್ಳೆಯ ಭವಿಷ್ಯವಿದೆ, ದೇಶವು ಮುಂಚೂಣಿ ರಾಷ್ಟ್ರವಾಗಿ ಬೆಳಯಲಿದೆ. ಇಂತಹ ಸಾಧನೆಯ ಕೆಲಸಗಳನ್ನು ದೇಶದ ಜನರಿಗೆ ತಿಳಿಸಲು ಮಾಧ್ಯಮಗಳಿಗೆ ಸಮಯವೂ ಇಲ್ಲ, ಮನಸ್ಸೂ ಇಲ್ಲ ಎಂದು ರಮೇಶ್ ಕುಮಾರ್ ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ ರವರ ದೆಹಲಿ ಭೇಟಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಎಚ್.ವಿ ಮಂಜುನಾಥ್ ರವರ ಜೊತೆಗಿದ್ದರು. ಇವರು ಸಹ ಜಿಲ್ಲಾಡಳಿತದ ವತಿಯಿಂದ ಚಿಕ್ಕಬಳ್ಳಾಪುರದ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತರಲು ಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...