Homeಚಳವಳಿಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯವೆಂದ ಕರ್ನಾಟಕದ ಮಾಜಿ ಸ್ಪೀಕರ್

- Advertisement -
- Advertisement -

ದೆಹಲಿಗೆ ಭೇಟಿ ನೀಡಿದ್ದ ವೇಳೆ ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ, ಅರವಿಂದ ಕೇಜ್ರಿವಾಲ್ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ರವರು ಆಶ್ಚರ್ಯ ಮತ್ತು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿಯವರು ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ. ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ ಎಂದಿದ್ದಾರೆ.

ವಿಡಿಯೋ ನೋಡಿ

ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳಿಗೆ ಪ್ರೀತಿ ಮತ್ತು ಗೌರವದಿಂದ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ಅರ್ಥ ಕಲ್ಪಿಸುತ್ತಿದ್ದಾರೆ ಎಂದಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಒಂದು ರಾಜ್ಯದ ಅಥವಾ ದೇಶದ ನಾಯಕತ್ವ ವಹಿಸಿಕೊಂಡವರಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯ ಹೃದಯವಿದ್ದರೆ ಅದ್ಭುತವಾದ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಅರವಿಂದ ಕೇಜ್ರಿವಾಲ್ರವರ ಪರಿಶ್ರಮವೇ ಸಾಕ್ಷಿ. ಶಿಕ್ಷಣವನ್ನು ವ್ಯಾಪಾರ ಮಾಡುತ್ತಿರುವ ಸಂದರ್ಭದಲ್ಲಿ ಕೆಳ ವರ್ಗದ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ಕೊಡುವ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ರ ಕಾರ್ಯದಕ್ಷತೆಯನ್ನು ನೋಡಿ ನಾನು ನಿಜವಾಗಿಯೂ ಚಕಿತಗೊಂಡಿದ್ದೇನೆ ಎಂದು ಸಂತೋಷಪಟ್ಟಿದ್ದಾರೆ.

ದೇಶದ ಎಲ್ಲಾ ಜನವರ್ಗಗಳ ಕೈಗೆಟಕುವಂತಹ, ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯ. ಅಂತಹ ಅದ್ಭುತವಾದ ಸಾಧನೆಯನ್ನು ದೆಹಲಿಯ ಕೇಜ್ರಿವಾಲ್ ಅವರ ಸರ್ಕಾರ ಮಾಡಿದೆ. ಇಡೀ ದೇಶವು ಇವರ ಮಾರ್ಗವನ್ನು ಅನುಸರಿಸಿದರೆ ದೇಶಕ್ಕೆ ಒಳ್ಳೆಯ ಭವಿಷ್ಯವಿದೆ, ದೇಶವು ಮುಂಚೂಣಿ ರಾಷ್ಟ್ರವಾಗಿ ಬೆಳಯಲಿದೆ. ಇಂತಹ ಸಾಧನೆಯ ಕೆಲಸಗಳನ್ನು ದೇಶದ ಜನರಿಗೆ ತಿಳಿಸಲು ಮಾಧ್ಯಮಗಳಿಗೆ ಸಮಯವೂ ಇಲ್ಲ, ಮನಸ್ಸೂ ಇಲ್ಲ ಎಂದು ರಮೇಶ್ ಕುಮಾರ್ ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ ರವರ ದೆಹಲಿ ಭೇಟಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಎಚ್.ವಿ ಮಂಜುನಾಥ್ ರವರ ಜೊತೆಗಿದ್ದರು. ಇವರು ಸಹ ಜಿಲ್ಲಾಡಳಿತದ ವತಿಯಿಂದ ಚಿಕ್ಕಬಳ್ಳಾಪುರದ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತರಲು ಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...