Homeಕರ್ನಾಟಕ‍ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಕೆ.ಸುಧಾಕರ್‌

‍ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಕೆ.ಸುಧಾಕರ್‌

- Advertisement -
- Advertisement -

’ರಾಜ್ಯದಲ್ಲಿ ಮುಂದನ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಲಿವೆ. ಆದರೂ ಜನ ಸಾಮಾನ್ಯರಿಗೆ ತೊಂದರೆಯಾಗಲು ಬಿಡುವುದಿಲ್ಲ. ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ” ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, “ಲಾಕ್‌ಡೌನ್ ಕಳೆದು ಹೋಗಿರುವ ನೀತಿ. ಸಾಂಕ್ರಾಮಿಕ ರೋಗದ ಬಗ್ಗೆ ಸ್ಪಷ್ಟತೆ ಇಲ್ಲದೆ ಇದ್ದಾಗ, ನಮಗೆ ಗೊತ್ತಿರದ ಸಮಯದಲ್ಲಿ ತೆಗೆದುಕೊಂಡ ನಿರ್ಧಾರ ಅದು. ಆದರೆ, ಈಗ ನಮಗೆ 2 ವರ್ಷಗಳ ಅನುಭವವಿದೆ. ಸಾಂಕ್ರಾಮಿಕ ರೋಗದ ಸ್ವಭಾವ, ಒಬ್ಬರಿಗೆ ಪಾಸಿಟಿವ್ ಬಂದಾಗ ಯಾವ ಚಿಕಿತ್ಸೆ ಕೊಡಬೇಕು, ಅವರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದು ಗೊತ್ತಿದೆ” ಎಂದಿದ್ದಾರೆ.

’ಈಗ ಕೊರೊನಾ ಮೂರನೇ ಅಲೆ ಬರ್ತಿದೆ. ನಾವು ಅಲೆ ಬಂದಿದೆ ಎಂದು ಅಲೆಗೆ ಎದುರಾಗಿ ಹೋಗಿಬೇಕಿಲ್ಲ. ಹೋರಾಡಬೇಕಿದೆ. ಬೆಂಗಳೂರಲ್ಲಿ ಪಾಸಿಟಿವಿಟಿ ರೇಟ್ ಜಾಸ್ತಿ ಇದೆ. ಇದು ಇನ್ನು ಜಾಸ್ತಿಯಾಗಲಿದೆ. ವೈರಾಣುವಿನ ಹರಡುವಿಕೆ ತಡೆಯುವುದು ಅಸಾಧ್ಯ’ ಎಂದಿದ್ದಾರೆ.

ಇದನ್ನೂ ಓದಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

’ಸೋಂಕು ಜಾಸ್ತಿಯಾದರೂ ಭಯಪಡಬೇಕಿಲ್ಲ. ನಾವು ರಾಜ್ಯದಲ್ಲಿ ಲಸಿಕಾ ಅಭಿಯಾನ ಸರಿಯಾಗಿ ಮಾಡಿರುವ ಕಾರಣ ಭಯ ಬೇಡ. ಸೋಂಕಿನ ತೀವ್ರತೆ ಅಷ್ಟಾಗಿ ಇರುವುದಿಲ್ಲ ಎಂದಿದ್ದಾರೆ ಆರೋಗ್ಯ ಸಚಿವ ಸುಧಾಕರ್‌.

ಲಾಕ್‌ಡೌನ್ ಕುರಿತು ಮಾಹಿತಿ ನೀಡಿರುವ ಸಚಿವ, “ರಾಜ್ಯದಲ್ಲಿ ಯಾವುದೇ ಲಾಕ್‌ಡೌನ್ ಜಾರಿ ಮಾಡುವ ಬಗ್ಗೆ ನಾವು ನಿರ್ಧಾರ ಮಾಡಿಲ್ಲ, ಲಾಕ್‌ಡೌನ್ ಬಗ್ಗೆ ಸ್ಪಷ್ಟತೆ ಇದೆ ನಮಗೆ. ಲಾಕ್‌ಡೌನ್ ಮಾಡುವುದಿಲ್ಲ. ಜನಸಾಮಾನ್ಯರಿಗೆ ತೊಂದರೆ ನೀಡದೇ ಜನರನ್ನು ರಕ್ಷಿಸುವ ಕೆಲಸಕ್ಕೆ ನಮ್ಮ ಸರ್ಕಾರ ಯತ್ನಿಸುತ್ತದೆ. ಲಾಕ್‌ಡೌನ್ ಜಾರಿ ಮಾಡುವುದಿಲ್ಲ” ಎಂದು ಸ್ಪಷ್ಟತೆ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5,031 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಬೆಂಗಳೂರು ಒಂದರಲ್ಲೇ 4,324 ಪ್ರಕರಣಗಳಿವೆ.


ಇದನ್ನೂ ಓದಿ: ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...