Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಮಹಿಳಾ ಕಲಾವಿದರ ಸಭೆ ಕರೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಲೈಂಗಿಕ ದೌರ್ಜನ್ಯ ಆರೋಪ : ಮಹಿಳಾ ಕಲಾವಿದರ ಸಭೆ ಕರೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಸೆಪ್ಟೆಂಬರ್ 16 ರಂದು ಮಹಿಳಾ ಕಲಾವಿದರೊಂದಿಗೆ ಸಭೆ ನಡೆಸಲಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ಪತ್ರ ಬರೆದಿರುವ ಹಿನ್ನೆಲೆ, ಕೆಎಫ್‌ಸಿಸಿ ಸಭೆ ಕರೆದಿದೆ ಎಂದು ವರದಿಗಳು ಹೇಳಿವೆ.

ನಾಗಲಕ್ಷ್ಮಿ ಚೌಧರಿ ಅವರು ತಮ್ಮ ಪತ್ರದಲ್ಲಿ ಕೇರಳದ ಹೇಮಾ ಸಮಿತಿ ವರದಿಯನ್ನು ಉಲ್ಲೇಖಿಸಿದ್ದು, ಲೈಂಗಿಕ ದೌರ್ಜನ್ಯ, ಕಿರುಕುಳ, ಬೆದರಿಕೆಗಳು ಮತ್ತು ಮಾನಸಿಕ ಹಿಂಸೆ ಸೇರಿದಂತೆ ಕೇರಳ ಚಲನಚಿತ್ರೋದ್ಯಮದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿರುವುದರಿಂದ ಕಲಾವಿದರು ಸಭೆ ಹಾಜಾರಾಗುವ ಸಾಧ್ಯತೆಯ ಬಗ್ಗೆ ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 16ರ ತಾತ್ಕಾಲಿಕ ದಿನಾಂಕವನ್ನು ಸಭೆಗೆ ನಿಗದಿಪಡಿಸಲಾಗಿದೆ. ಸೋಮವಾರ (ಸೆ. 9) ಸಭೆಯ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ” ಎಂದು ಸುರೇಶ್ ಹೇಳಿದ್ದಾರೆ.

ಲೈಂಗಿಕ ಹಿಂಸೆ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ’ (FIRE)ಈಗಾಗಲೇ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಆರಂಭದಲ್ಲಿ FIRE ಮುಖ್ಯಮಂತ್ರಿಗೆ ಪತ್ರ ಬರೆದಿತ್ತು. ಅದಕ್ಕೆ ಸಿನಿಮಾ ಕಲಾವಿದರು, ಸಾಹಿತಿಗಳು, ಪತ್ರಕರ್ತರು ಮತ್ತು ಹೋರಾಟಗಾರರು ಸೇರಿದಂತೆ 153 ಮಂದಿ ಸಹಿ ಹಾಕಿದ್ದರು. ಬಳಿಕ FIRE ವತಿಯಿಂದ ನಟ, ನಟಿಯರು ಸಿಎಂ ಭೇಟಿಯಾಗಿ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ. ನಟಿ ಸಂಜನಾ ಗಲ್ರಾನಿ ಅವರು ಪ್ರತ್ಯೇಖವಾಗಿ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

“ಚಿತ್ರರಂಗದ ಹಲವು ವಿಷಯಗಳಲ್ಲಿ ಮೌನ ವಹಿಸಿರುವ ಇತಿಹಾಸ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕಲಾವಿದರ ಸಂಘಕ್ಕೆ ಇದೆ. ಈ ಹಿಂದೆ ಗೀತರಚನೆಕಾರ ಮತ್ತು ಸಂಗೀತ ಸಂಯೋಜಕ ಹಂಸಲೇಖ ಅವರನ್ನು ಗುರಿಯಾಗಿಸಿ ಅಕ್ಷರ, ಭಾಷಣ ದಾಳಿಯಾದಾಗ ಈ ಸಮಿತಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತನ್ನ ಕಲಾವಿದರನ್ನು ಬೆಂಬಲಿಸುವ ಕಾರ್ಯವನ್ನೂ ಮಾಡಿಲ್ಲ ಎಂದು” ದಿ ನ್ಯೂಸ್ ಮಿನಿಟ್ ಸುದ್ದಿ ಸಂಸ್ಥೆ ತನ್ನ ವರದಿಯಲ್ಲಿ ಟೀಕಿಸಿದೆ.

ಕೊಲೆ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ನಟ ದರ್ಶನ್ ತನ್ನ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ ಆರೋಪ 2011ರಲ್ಲಿ ಕೇಳಿ ಬಂದಿತ್ತು. ಈ ವಿಚಾರದಲ್ಲಿ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ನಡುವೆ ರಾಜಿ ಪಂಚಾಯಿತಿ ಮಾಡಲು ಆಗ ದಿವಗಂತ ನಟ ಅಂಬರೀಶ್ ಮಧ್ಯಸ್ಥಿಕೆ ವಹಿಸಿದ್ದರು. ಇದರ ಫಲವಾಗಿ ವಿಜಯಲಕ್ಷ್ಮಿ ರಾಜಿಗೆ ಒಪ್ಪಿಕೊಂಡರೂ ಒಂದು ಷರತ್ತು ವಿಧಿಸಿದ್ದರು. ತನ್ನ ವೈವಾಹಿಕ ಜೀವನಲ್ಲಿ ಮಧ್ಯ ಪ್ರವೇಶಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರನ್ನು ಕನ್ನಡ ಚಲನಚಿತ್ರೋದ್ಯಮದಿಂದ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದ್ದರು. ಅದಕ್ಕೆ ಒಪ್ಪಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ, ನಿಕಿತಾ ಅವರನ್ನು ಮೂರು ವರ್ಷಗಳ ಕಾಲ ನಿಷೇಧಿಸಿತ್ತು.

ಮತ್ತೊಂದು ಘಟನೆಯಲ್ಲಿ , 2015 ರಲ್ಲಿ ತಮ್ಮ ‘ವಿಸ್ಮಯ’ ಚಿತ್ರದ ಚಿತ್ರೀಕರಣ ವೇಳೆ ನಟ ಅರ್ಜುನ್ ಸರ್ಜಾ ಅವರು ಕಿರುಕುಳ ನೀಡಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಆ ಬಳಿಕ ಅವರಿಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಯಿತು ಎಂದು ಸ್ವತಃ ಶ್ರುತಿ ಹರಿಹರನ್ ಹೇಳಿಕೊಂಡಿದ್ದರು. ಶ್ರುತಿ ಅವರ ಆರೋಪ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಬದಲು ಫಿಲ್ಮ್ ಚೇಂಬರ್ ಇಬ್ಬರ ನಡುವೆ ‘ರಾಜಿ’ ಮಾಡಲು ಪ್ರಯತ್ನಿಸಿತ್ತು. ಆದರೆ, ಶ್ರುತಿ ತನ್ನ ಆರೋಪಗಳನ್ನು ಹಿಂಪಡೆಯಲು ನಿರಾಕರಿಸಿದ್ದರು. ಬಳಿಕ ಅರ್ಜುನ್ ಸರ್ಜಾ ಅವರು ಶ್ರುತಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ : ಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...