Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...